MUDA Case ಸರಕಾರ Vs ರಾಜ್ಯಪಾಲ: ಮತ್ತೆ ನೋಟಿಸ್?
ದಿಲ್ಲಿಯಿಂದ ಮರಳಿದ ರಾಜ್ಯಪಾಲರು; ಮುಖ್ಯಮಂತ್ರಿ ಉತ್ತರಕ್ಕೆ ಅತೃಪ್ತಿ
Team Udayavani, Aug 6, 2024, 7:15 AM IST
ಬೆಂಗಳೂರು: ದಿಲ್ಲಿ ಪ್ರವಾಸ ದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೋಮವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ಸಂಬಂಧ ಇನ್ನೊಂದು ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ನೀಡಲಾಗಿದ್ದ 2 ನೋಟಿಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರ ಸಮರ್ಪಕವಾಗಿಲ್ಲ ಎಂಬ ಕಾರಣಕ್ಕಾಗಿ ಇನ್ನೊಂದು ನೋಟಿಸ್ ನೀಡುವ ಸಾಧ್ಯತೆಗಳಿವೆಎಂದು ಹೇಳಲಾಗಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳ ವಾರದ ನಿಗದಿತ ಎಲ್ಲ ಕಾರ್ಯಕ್ರಮ ರದ್ದುಗೊಳಿಸಿದ್ದು, ಬೆಂಗಳೂರಿನಲ್ಲೇ ಇದ್ದು ರಾಜಭವನ ದಲ್ಲಿ ನಡೆಯುವ ಬೆಳವಣಿಗೆಯ ಬಗ್ಗೆ ದೃಷ್ಟಿಯಿಟ್ಟಿದ್ದಾರೆ. ಎನ್ಡಿಎ ಪಾದ ಯಾತ್ರೆ, ಕಾಂಗ್ರೆಸ್ನ ಜನಾಂದೋಲನ ಸಭೆಗಿಂತಲೂ ರಾಜ್ಯ ಪಾಲರ ಮುಂದಿನ ಹೆಜ್ಜೆಯೇ ಹೆಚ್ಚು ಮಹತ್ವ ಪಡೆದು ಕೊಂಡಿದೆ.
ಮೈಸೂರಿನಲ್ಲಿ ಕೆಡಿಪಿ ಸಭೆ?
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಮಂಗಳವಾರ ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ತುಂಗಭದ್ರಾ ನದಿಗೆ ಬಾಗಿನ ಸಮರ್ಪಿಸುವ ಕಾರ್ಯಕ್ರಮ ಈ ಹಿಂದೆ ನಿಗದಿಯಾಗಿತ್ತು. ಆದರೆ ಅವರು ಬೆಂಗಳೂರಿನಲ್ಲೇ ಇರಲಿದ್ದು, ಕಡತ ಪರಿಶೀಲನೆ ನಡೆಸಿದ ಬಳಿಕ ಸಾಯಂಕಾಲ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಬುಧವಾರ ಅವರ ಮೈಸೂರು ಪ್ರವಾಸ ನಿಗದಿಯಾಗಿತ್ತು. ಆದರೆ ಒಂದು ದಿನ ಮುಂಚಿತವಾಗಿಯೇ ತೆರಳಲಿದ್ದಾರೆ. ಆ. 7ರಂದು ಪೂರ್ವನಿಗದಿತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಆ. 8ರಂದು ಅವರು ಮೈಸೂರು ಜಿಲ್ಲಾ ಕೆಡಿಪಿ ಸಭೆ ನಡೆಸುವ ಸಾಧ್ಯತೆ ಇದ್ದು, ಅದಿನ್ನೂ ದೃಢಪಟ್ಟಿಲ್ಲ. ಆ. 9ರಂದು ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ ಜನಾಂದೋಲನ ಸಭೆಯಲ್ಲಿ ಭಾಗಿಯಾಗುವರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.