Sandalwood: ಟ್ರೇಲರ್‌ ಇಲ್ಲ ಹಾಡೇ ಎಲ್ಲಾ… ‌’ಕೃಷ್ಣಂ ಪ್ರಣಯ ಸಖಿ’ ಹಾಡು ಸೂಪರ್‌ ಹಿಟ್‌


Team Udayavani, Aug 6, 2024, 10:35 AM IST

Sandalwood: ಟ್ರೇಲರ್‌ ಇಲ್ಲ ಹಾಡೇ ಎಲ್ಲಾ… ‌’ಕೃಷ್ಣಂ ಪ್ರಣಯ ಸಖಿ’ ಹಾಡು ಸೂಪರ್‌ ಹಿಟ್‌

ಪ್ರಶಾಂತ್‌ ಜಿ. ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗಣೇಶ್‌ ನಾಯಕರಾಗಿ ನಟಿಸಿರುವ ಕೃಷ್ಣಂ ಪ್ರಣಯ ಸಖಿ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ.

ಈ ಚಿತ್ರದಲ್ಲಿ ಅರ್ಜುನ್‌ ಜನ್ಯ ಸಂಗೀತ ನೀಡಿರುವ ಏಳು ಹಾಡುಗಳಿದೆ. ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿದೆ. ಚಿತ್ರ ಆಗಸ್ಟ್‌ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ ಕೃಷ್ಣಂ ಪ್ರಣಯ ಸಖೀ ಪ್ರೇಕ್ಷಕರ ಮನ ತಲುಪಿದೆ. ನಿರೀಕ್ಷೆಗೂ ಮೀರಿ ಹಾಡುಗಳು ಹಿಟ್‌ ಅಗಿದೆ.

ಈ ಸಂಭ್ರಮವನ್ನು ಹಂಚಿಕೊಳ್ಳಲು ಚಿತ್ರದ ಆಡಿಯೋ ಹಕ್ಕು ಪಡೆದುಕೊಂಡಿರುವ ಆನಂದ್‌ ಆಡಿಯೋದವರು ಸಮಾರಂಭ ಆಯೋಜಿಸಿದ್ದರು. ಹಾಡುಗಳನ್ನು ಬರೆದಿರುವವರನ್ನು ಹಾಗೂ ಹಾಡಿದರವನ್ನು ಫ‌ಲಕ ನೀಡಿ ಸನ್ಮಾನಿಸಿದರು.

ಗಾಯಕರಾದ ಚಂದನ್‌ ಶೆಟ್ಟಿ, ಜಸ್ಕರಣ್‌ ಸಿಂಗ್‌, ಗೀತ ರಚನೆಕಾರ ನಿಶಾನ್‌ ರೈ ಅವರನ್ನು ಹಾಗೂ ಚಿತ್ರತಂಡದ ಸದಸ್ಯರನ್ನು ಆನಂದ್‌ ಆಡಿಯೋ ಶ್ಯಾಮ್‌ ಮತ್ತು ಆನಂದ್‌ ಆತ್ಮೀಯವಾಗಿ ಸನ್ಮಾನಿಸಿದರು. ನಂತರ ಚಿತ್ರತಂಡದವರು ಮಾತನಾಡಿದರು.

ಚಿತ್ರದ ಹಾಡುಗಳ ಬಗ್ಗೆ ಮಾತನಾಡಿದ ನಾಯಕ ಗಣೇಶ್‌, ಈವರೆಗೂ ಬಿಡುಗಡೆಯಾಗಿರುವ ಮೂರು ಹಾಡುಗಳು ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ. ಹಾಗಾಗಿ ಈ ಸಮಾರಂಭವನ್ನು ಆನಂದ್‌ ಆಡಿಯೋದವರು ಆಯೋಜಿಸಿದ್ದಾರೆ. ಅವರಿಗೆ ಧನ್ಯವಾದಗಳು. ಇತ್ತೀಚೆಗೆ ಹಾಡುಗಳು ಹಿಟ್‌ ಆಗುವುದು ಬಹಳ ಕಡಿಮೆ. ಮೊದಲೆಲ್ಲಾ ಆಡಿಯೋ ಹಿಟ್‌ ಅಂತ ಕಾರ್ಯಕ್ರಮ ಮಾಡುತ್ತಿದ್ದೆವು. ಇತ್ತೀಚೆಗೆ ಆಗಿರಲಿಲ್ಲ. ಮೂರನೇ ಹಾಡು ಯಶಸ್ವಿಯಾದಾಗ ಯಾಕೆ ಇಂಥದ್ದೊಂದು ಕಾರ್ಯಕ್ರಮ ಮಾಡಬಾರದು ಎಂದು ಆನಂದ್‌ ಆಡಿಯೋದವರು ಹೇಳುತ್ತಿದ್ದರು. ಆನಂದ್‌ ಆಡಿಯೋದವರ ಜೊತೆಗೆ ನನ್ನದು ಬಹಳ ದೊಡ್ಡ ಸಂಬಂಧ. ನನ್ನ ಚಿತ್ರ ಜೀವನದ ಯಶಸ್ಸಿಗೆ ಸಂಗೀತ ಮಹತ್ವದ ಪಾತ್ರ ವಹಿಸುತ್ತದೆ ಮತ್ತು ಆ ಕ್ರೆಡಿಟ್‌ ಆನಂದ್‌ ಆಡಿಯೋದವರಿಗೂ ಸಲ್ಲಬೇಕು. ಈ ಚಿತ್ರದ ಆಡಿಯೋ ಹಕ್ಕುಗಳನ್ನು ಡಬ್ಬಲ್‌ ದುಡ್ಡು ಕೊಟ್ಟು ಆನಂದ್‌ ಆಡಿಯೋದವರು ಕೊಂಡಿದ್ದಾರೆ. ಜಸ್ಕರಣ್‌ ತುಂಬಾ ಚೆನ್ನಾಗಿ ಹಾಡಿದ್ದಾರೆ. ಅದರಲ್ಲೂ ದ್ವಾಪರ ಹಾಡಂತೂ ಜಾಲತಾಣಗಳಲ್ಲಿ ಬಹಳ ಫೇಮಸ್‌ ಆಗಿದೆ. ಹಾಡುಗಳ ಯಶಸ್ಸಿನ ಹೆಚ್ಚಿನ ಭಾಗದ ಕ್ರೆಡಿಟ್‌ ನಿರ್ದೇಶಕ ರಿಗೆ ಹೋಗಬೇಕು ಎಂದರು.

ನಿರ್ದೇಶಕ ಶ್ರೀನಿವಾಸ್‌ ರಾಜು ಮಾತನಾಡಿ, ಈ ಚಿತ್ರ ಒಂದು ಸಂಗೀತಮಯ ಚಿತ್ರವಾಗಬೇಕು ಎಂಬ ಆಸೆ ನನಗಿತ್ತು. ಅರ್ಜುನ್‌ ಬಹಳ ಬ್ಯುಸಿಯಾಗಿದ್ದಾರೆ. ಅದರಲ್ಲೂ ನಮಗೆ ಸಮಯ ಕೊಟ್ಟು ಈ ರೀತಿ ಜನಪ್ರಿಯ ಹಾಡುಗಳನ್ನು ಮಾಡಿಕೊಟ್ಟಿರುವುದು ಖುಷಿ ವಿಷಯ. ಚಿತ್ರದಲ್ಲಿ ಮೊದಲು ಒಂಬತ್ತು ಹಾಡುಗಳಿದ್ದವು. ಕೊನೆಗೆ ಕಡಿಮೆಯಾಗಿ, ಏಳು ಹಾಡುಗಳಿವೆ. ಈ ಹಾಡುಗಳನ್ನು ಪ್ರಮೋಟ್‌ ಮಾಡುತ್ತಿರುವ ಮತ್ತು ನನ್ನ ಮೇಲೆ ನಂಬಿಕೆ ಇಟ್ಟು ಚಿತ್ರಕ್ಕೆ ಹಣ ಹೂಡಿದ ನಿರ್ಮಾಪಕ ಪ್ರಶಾಂತ್‌ ಅವರಿಗೆ ಧನ್ಯವಾದಗಳು. “ದ್ವಾಪರ’ ವರೆಗೂ ಬೇರೆ ಬೇರೆ ರೀತಿಯ ಹಾಡುಗಳಿದ್ದವು. ಇನ್ನು ಮುಂದಿನ ಒಂದು ವಾರದಲ್ಲಿ ಮೆಲೋಡಿ ಹಾಡುಗಳು ಬರಲಿವೆ. ಈ ಚಿತ್ರಕ್ಕೆ ಟ್ರೇಲರ್‌ ಅವಶ್ಯಕತೆ ಇರಲಿಲ್ಲ ಎಂದು ಒಂದು ವರ್ಷದ ಹಿಂದೆ ಅನಿಸಿತ್ತು. ಇದೊಂದು ಮ್ಯೂಸಿ ಕಲ್‌ ಚಿತ್ರವಾದ್ದರಿಂದ, ಈ ಚಿತ್ರವನ್ನು ಹಾಡುಗಳಿಂದ ಮಾತ್ರ ಪ್ರಮೋಟ್‌ ಮಾಡುವುದು ನನ್ನ ಆಸೆ. ಹಾಗಾಗಿ, ಚಿತ್ರದ ಟ್ರೇಲರ್‌ ಬಿಡುಗಡೆ ಮಾಡುತ್ತಿಲ್ಲ. ಇದು ಈ ಚಿತ್ರಕ್ಕೆ ಮಾತ್ರ ಎಂದು ತಿಳಿಸಿದರು.

ನಟಿ ಶರಣ್ಯ ಶೆಟ್ಟಿ, ಹಿರಿಯ ನಟ ರಾಮಕೃಷ್ಣ, ಕಾರ್ಯಕಾರಿ ನಿರ್ಮಾಪಕ ಶರತ್‌, ಗಾಯಕರಾದ ಚಂದನ್‌ ಶೆಟ್ಟಿ, ಜಸ್ಕರಣ್‌ ಸಿಂಗ್‌, ಹಾಡು ಬರೆದಿರುವ ನಿಶಾನ್‌ ರೈ ಹಾಗೂ ಆನಂದ್‌ ಆಡಿಯೋ ಸಂಸ್ಥೆಯ ಶ್ಯಾಮ್‌ ಮತ್ತು ಆನಂದ್‌ ಹಾಡುಗಳು ಗೆದ್ದಿರುವ ಆನಂದವನ್ನು ಹಂಚಿಕೊಂಡರು.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.