SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ಚಿಯಾನ್ ವಿಕ್ರಮ್; ನಟ ಹೇಳಿದ್ದೇನು?
Team Udayavani, Aug 6, 2024, 1:16 PM IST
ಹೈದರಾಬಾದ್: ಸೂಪರ್ ಹಿಟ್ ನಿರ್ದೇಶಕ ಎಸ್ ಎಸ್ ರಾಜಮೌಳಿ (SS Rajamouli) ಹಾಗೂ ಟಾಲಿವುಡ್ (Tollywood) ಸೂಪರ್ ಸ್ಟಾರ್ ಮಹೇಶ್ ಬಾಬು (Mahesh Babu) ಕಾಂಬಿನೇಷನ್ನಲ್ಲಿ ಬಿಗ್ ಬಜೆಟ್ ಸಿನಿಮಾ ಬರುತ್ತಿರುವ ವಿಚಾರ ಗೊತ್ತೇ ಇದೆ.
ಈ ಪ್ಯಾನ್ ಇಂಡಿಯಾ ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಚಿತ್ರದ ಅಪ್ಡೇಟ್ ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಮಹೇಶ್ ಬಾಬು 29ನೇ ಚಿತ್ರ ಇದಾದ ಕಾರಣ ಸಿನಿಮಾಕ್ಕೆ ತಾತ್ಕಾಲಿಕವಾಗಿ ʼSSMB29ʼ ಟೈಟಲ್ ಇಡಲಾಗಿದೆ.
ಸಿನಿಮಾದ ಪಾತ್ರವರ್ಗದ ಬಗ್ಗೆ ಹಲವು ಗಾಸಿಪ್ ಹಬ್ಬಿದೆ. ಕಾಲಿವುಡ್ ನಟ ಚಿಯಾನ್ ವಿಕ್ರಮ್ (Chiyaan Vikram) ʼSSMB29ʼ ಸಿನಿಮಾದ ಭಾಗವಾಗಲಿದ್ದಾರೆ ಎನ್ನುವ ಮಾತು ಟಾಲಿವುಡ್ ನಲ್ಲಿ ಹರಿದಾಡಿದೆ.
ವಿಕ್ರಮ್ ರಾಜಮೌಳಿ – ಮಹೇಶ್ ಬಾಬು ಅವರ ಸಿನಿಮಾದಲ್ಲಿ ನೆಗೆಟಿವ್ ರೋಲ್ ಗೆ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾತು ಸಿನಿವಲಯದ ಅಭಿಮಾನಿಗಳಲ್ಲಿ ಹರಿದಾಡಿದೆ.
ನಟ ವಿಕ್ರಮ್ ಅವರು ಈ ಮಾತಿಗೆ ಸ್ಪಷ್ಟನೆ ನೀಡಿದ್ದಾರೆ. ಹೈದರಾಬಾದ್ನಲ್ಲಿ ʼತಂಗಲಾನ್ʼ (Thangalaan) ಪ್ರಚಾರದ ವೇಳೆ ಮಾಧ್ಯಮದವರು ರಾಜಮೌಳಿ – ಮಹೇಶ್ ಬಾಬು ಸಿನಿಮಾದಲ್ಲಿ ನಟಿಸುತ್ತಿದ್ದೀರಾ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.
“ರಾಜಮೌಳಿ ಅವರು ನನ್ನ ಒಳ್ಳೆಯ ಸ್ನೇಹಿತ. ನಾವು ಬಹಳ ಸಮಯದಿಂದ ಮಾತನಾಡುತ್ತಿದ್ದೇವೆ. ಖಂಡಿತವಾಗಿ ಮುಂದೊಂದು ದಿನ ನಾವು ಸಿನಿಮಾ ಮಾಡುತ್ತೇವೆ” ಎಂದಿದ್ದಾರೆ.
ಪೃಥ್ವಿರಾಜ್ ಸುಕುಮಾರನ್(Prithviraj Sukumaran) ರಾಜಮೌಳಿ ಅವರ ಸಿನಿಮಾದಲ್ಲಿ ವಿಲನ್ ಆಗಿ ನಟಿಲಿದ್ದಾರೆ ಎನ್ನಲಾಗಿದೆ. ಇದರ ನಡುವೆ ಬಾಲಿವುಡ್ ನಟ ಆಮೀರ್ ಖಾನ್ (Aamir Khan) ಅವರ ಹೆಸರು ಕೂಡ ಕೇಳಿ ಬರುತ್ತಿದೆ. ಆದರೆ ಯಾವುದು ಕೂಡ ಇನ್ನೂ ಅಧಿಕೃತವಾಗಿಲ್ಲ.
ಅಡ್ವೆಂಚರ್ ಜಂಗಲ್, ಸಾಹಸಮಯ ಕಥೆಯನ್ನು ಸಿನಿಮಾ ಒಳಗೊಂಡಿದ್ದು, ಸಿನಿಮಾದಲ್ಲಿ ಮಹೇಶ್ ಬಾಬು ಅವರ ಪಾತ್ರವು ರಾಮಾಯಣದ ಹನುಮಂತನಿಂದ ಪ್ರೇರಿತವಾಗಿದೆ ಎಂದು ಹೇಳಲಾಗಿದೆ.
ವಿಜಯೇಂದ್ರ ಪ್ರಸಾದ್ ಈ ಸಿನಿಮಾಕ್ಕೆ ಸ್ಕ್ರಿಪ್ಟ್ ಬರೆದಿದ್ದು, ಬಹುದೊಡ್ಡ ಪ್ರಾಜೆಕ್ಟ್ ಶೀಘ್ರದಲ್ಲಿ ಶುರುವಾಗುವ ಸಾಧ್ಯತೆಯಿದೆ.
“ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್ ಬಾಂಡ್ ಅಥವಾ ಇಂಡಿಯಾನ ಜೋನ್ಸ್ ಸಾಹಸದ ಹಾಗೆ ಭಾರತೀಯ ಶೈಲಿಯಲ್ಲಿ ಮೂಡಿಬರುವ ಚಿತ್ರ. ಥಿಯೇಟರ್ ನಲ್ಲಿ ಈ ಸಿನಿಮಾ ಎಲ್ಲರನ್ನೂ ರೋಮಾಂಚನಗೊಳಿಸಲಿದೆ” ಎಂದು ರಾಜಮಾಳಿ ಈ ಹಿಂದೆ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
OTT Release: ಚಿಯಾನ್ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.