Bangladesh:ಹಸೀನಾ ದೇಶ ತೊರೆದ ಬೆನ್ನಲ್ಲೇ ಜೈಲಿನಿಂದ ಮಾಜಿ ಪ್ರಧಾನಿ ಜಿಯಾ ಬಿಡುಗಡೆಗೆ ಆದೇಶ!
ಖಲೀದಾ ಜಿಯಾ ಅವರು ಅವಿಭಜಿತ ಭಾರತದ ಪಶ್ಚಿಮಬಂಗಾಳದ ಜಲ್ಪೈಗುರಿಯಲ್ಲಿ ಜನಿಸಿದ್ದರು.
Team Udayavani, Aug 6, 2024, 1:21 PM IST
ಢಾಕಾ: ಹಿಂಸಾಚಾರದಿಂದ ಬಾಂಗ್ಲಾದೇಶ ನಲುಗಿ ಹೋಗಿದ್ದು, ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಮತ್ತೊಂದೆಡೆ ಶೇಖ್ ಹಸೀನಾ ಅವರ ರಾಜಕೀಯ ಬದ್ಧ ವೈರಿ ಎಂದೇ ಗುರುತಿಸಲ್ಪಟ್ಟ ಖಲೀದಾ ಜಿಯಾ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶ ನೀಡಿರುವ ಬೆಳವಣಿಗೆ ಸೋಮವಾರ (ಆಗಸ್ಟ್ 05) ನಡೆದಿದೆ.
ಶೇಖ್ ಹಸೀನಾ ನೇತೃತ್ವದ ಸರ್ಕಾರ ಬಾಂಗ್ಲಾದೇಶದಲ್ಲಿ ಪತನಗೊಂಡ ಬೆನ್ನಲ್ಲೇ ದೇಶದ ರಾಜಕೀಯದಲ್ಲಿ ಭಾರೀ ಬದಲಾವಣೆಯ ಮುನ್ಸೂಚನೆ ಲಭಿಸತೊಡಗಿದ್ದು, ಅವಾಮಿ ಲೀಗ್ ನಾಯಕಿ, ಜೈಲಿನಿಂದ ಬಿಡುಗಡೆಗೊಳ್ಳಲಿರುವ ಖಲೀದಾ ಜಿಯಾ ಮತ್ತೆ ಅಧಿಕಾರದ ಗದ್ದುಗೆ ಏರುವ ಸಿದ್ಧತೆಯಲ್ಲಿರುವುದಾಗಿ ವರದಿ ವಿವರಿಸಿದೆ.
ಜೈಲಿನಲ್ಲಿರುವ ಮಾಜಿ ಪ್ರಧಾನಿ ಖಲೀದಾ ಜಿಯಾ ಜೈಲಿನಿಂದ ಬಿಡುಗಡೆಯಾಗುವ ಸಿದ್ಧತೆಯಲ್ಲಿದ್ದಾರೆ. ಪದಚ್ಯುತ ಶೇಖ್ ಹಸೀನಾ ಬಾಂಗ್ಲಾದೇಶ ತೊರೆದ ಬೆನ್ನಲ್ಲೇ ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್ ಶಹಾಬುದ್ಧೀನ್ ಜಿಯಾ ಬಿಡುಗಡೆಗೆ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.
ಖಲೀದಾ ಜಿಯಾ ಅವರು ಅವಿಭಜಿತ ಭಾರತದ ಪಶ್ಚಿಮಬಂಗಾಳದ ಜಲ್ಪೈಗುರಿಯಲ್ಲಿ ಜನಿಸಿದ್ದರು. ಆಕೆಯ ಪತಿ ಲೆಫ್ಟಿನೆಂಟ್ ಜನರಲ್ ಜಿಯಾವುರ್ ರೆಹಮಾನ್ ಒಬ್ಬ ನಿರ್ದಯಿ ಮಿಲಿಟರಿ ಅಧಿಕಾರಿಯಾಗಿದ್ದ. 1977ರಿಂದ ಬಾಂಗ್ಲಾದೇಶದ ಅಧ್ಯಕ್ಷರಾಗಿದ್ದು, 1981ರಲ್ಲಿ ಹತ್ಯೆಗೈಯಲಾಗಿತ್ತು.
ಬಾಂಗ್ಲಾದೇಶದಲ್ಲಿ ಭೀಕರ ಹಿಂಸಾಚಾರ ನಡೆಯುತ್ತಿದ್ದ ಸಂದರ್ಭದಲ್ಲೇ ಖಲೀದಾ ಜಿಯಾ 1991ರಲ್ಲಿ ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಆಡಳಿತ ನಡೆಸಿದ್ದರು. ಬಹುಮತ ಕೊರತೆಯಿಂದಾಗಿ ಜಿಯಾ ಜಾಮಾ ಇ ಇಸ್ಲಾಮಿ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದರು.
1996ರಲ್ಲಿ ಖಲೀದಾ ಜಿಯಾ ಎರಡನೆ ಬಾರಿ ಗೆಲುವು ಸಾಧಿಸಿದ್ದರು ಕೂಡಾ, ಅವಾಮಿ ಲೀಗ್ ಸೇರಿದಂತೆ ಪ್ರಮುಖ ವಿಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸಿದ್ದವು. ನಂತರ ಕೇವಲ 12 ದಿನಗಳಲ್ಲಿ ಜಿಯಾ ಸರ್ಕಾರ ಪತನಗೊಂಡಿತ್ತು. ಬಳಿಕ ಜೂನ್ ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವಾಮಿ ಲೀಗ್ ಜಯಭೇರಿ ಬಾರಿಸುವ ಮೂಲಕ ಶೇಖ್ ಹಸೀನಾ ಮೊದಲ ಬಾರಿಗೆ ಪ್ರಧಾನಿಯಾಗಿ ಅಧಿಕಾರದ ಗದ್ದುಗೆ ಏರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್ ತಡೆ: ವಿಶ್ವಸಂಸ್ಥೆ ಆರೋಪ
Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್ ಮಹಿಳೆಯರು!
Elon Musk: ಬೈಡೆನ್, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್ ಮಸ್ಕ್
ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್ನಲ್ಲಿ ಘಟನೆ, ಆರೋಪಿ ಬಂಧನ
Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.