Pucchaje-ಪರ್ಲ ರಸ್ತೆ ಕೆಸರುಮಯ
ವಾಹನ ಸಂಚಾರ ಬಿಡಿ, ನಡೆದು ಹೋಗಲೂ ಅಸಾಧ್ಯವಾದ ಸ್ಥಿತಿ
Team Udayavani, Aug 6, 2024, 2:51 PM IST
ಕಡಬ: ಎಡಮಂಗಲ ಪೇಟೆಯಿಂದ ಪುಚ್ಚಾಜೆ-ಪರ್ಲ ಪ್ರದೇಶವನ್ನು ಸಂಪರ್ಕಿಸುವ ರಸ್ತೆಯು ಸಂಪೂರ್ಣ ಕೆಸರುಮಯವಾಗಿದ್ದು, ವಾಹನ ಸಂಚಾರ ಬಿಡಿ ನಡೆದು ಹೋಗಲೂ ಅಸಾಧ್ಯವಾದ ಪರಿಸ್ಥಿತಿ ಎದುರಾಗಿದೆ.
ಈ ಕಚ್ಛಾ ರಸ್ತೆಯ ಬದಿಯಲ್ಲಿ ಮಳೆನೀರು ಹರಿದುಹೋಗಲು ಚರಂಡಿಗಳಿಲ್ಲದೇ ಇರುವುದರಿಂದಾಗಿ ರಸ್ತೆಯಲ್ಲಿಯೇ ಮಳೆನೀರು ಹರಿದು ರಸ್ತೆಯ ಮಣ್ಣು ಕೊಚ್ಚಿಕೊಂಡು ಹೋಗಿ ಈ ರಸ್ತೆಯಲ್ಲಿ ದಿನನಿತ್ಯ ಸಂಚರಿಸುವ ವಾಹನ ಸವಾರರು, ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಸುಮಾರು 50 ವರ್ಷಗಳಿಗಿಂತಲೂ ಹೆಚ್ಚು ಸಮಯದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸುಮಾರು 20 ಮನೆಯವರು ಹಾಗೂ ಇತರ ಜನರು ಈ ರಸ್ತೆಯನ್ನು ಉಪಯೋಗಿಸುತ್ತಿದ್ದರೂ ರಸ್ತೆಯನ್ನು ಅಭಿವೃದ್ಧಿಪಡಿಸಲು ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವುದು ಸ್ಥಳೀಯ ಜನರ ಆರೋಪವಾಗಿದೆ.
ರಸ್ತೆಯ ದುರವಸ್ಥೆಯ ಕುರಿತು ಕ್ಷೇತ್ರದ ಶಾಸಕರು ಹಾಗೂ ಗ್ರಾ.ಪಂ. ಆಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರುವ ಸ್ಥಳೀಯರು ಶೀಘ್ರ ಸಂಬಂಧಪಟ್ಟವರು ಸ್ಥಳೀಯ ಜನರ ಬೇಡಿಕೆಯನ್ನು ಈಡೇರಿಸಿ ರಸ್ತೆಯನ್ನು ಸಂಚಾರ ಯೋಗ್ಯವನ್ನಾಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು
Audio controversy: ಬಿ.ಸಿ.ರೋಡ್: ಉದ್ವಿಗ್ನಗೊಂಡು ತಿಳಿಯಾದ ಪರಿಸ್ಥಿತಿ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.