Mudbidri: ಮುರಿದ ಕಿರು ಸೇತುವೆಗಳು: ತಾವೇ ನಿರ್ಮಿಸಲು ಮುಂದಾದ ಗ್ರಾಮಸ್ಥರು

ಪಡುಮಾರ್ನಾಡು, ತಾಕೊಡೆ ಮತ್ತಿತರ ಗ್ರಾಮಗಳಲ್ಲಿ ಜನರ ಹೊಸ ಹೆಜ್ಜೆ

Team Udayavani, Aug 6, 2024, 3:10 PM IST

Screenshot (107)

ಮೂಡುಬಿದಿರೆ: ಈ ವಾರ ಸುರಿದ ಭಾರೀ ಮಳೆಯಿಂದಾಗಿ ಎಲ್ಲ ಕಡೆ, ವಿಶೇಷವಾಗಿ ಗ್ರಾಮಾಂತರ ಪ್ರದೇಶದಲ್ಲಿರುವ ಅದೆಷ್ಟೋ ಕಿರುಸೇತುವೆಗಳು ನಾಶವಾಗಿವೆ, ಇಲ್ಲವೇ ಭಾಗಶಃ ಹಾನಿಗೀಡಾಗಿವೆ. ತೋಡು, ಹೊಳೆಗಳನ್ನು ಕಿರು ಸೇತುವೆಗಳ ಮೂಲಕ ಹಾದು ಹೋಗುವ ಅನಿವಾರ್ಯ ಪರಿಸ್ಥಿತಿ ಇರುವ ಜನರಿಗೆ, ವಿಶೇಷವಾಗಿ ವಿದ್ಯಾರ್ಥಿಗಳು, ರೈತರು, ಪೇಟೆಯತ್ತ ಬರುವವರಿಗೆಲ್ಲ ಸಮಸ್ಯೆ ಉಂಟಾಗಿದೆ. ಇದಕ್ಕೆಲ್ಲ ಸರಕಾರಿ/ ಸ್ಥಳೀಯ ಆಡಳಿತ ಮಟ್ಟದಲ್ಲಿ ಸುಯೋಗ್ಯ ಕ್ರಮ ಜರಗಿಸುವಾಗ ಸಹಜವಾಗಿ ಕೊಂಚ ತಡವಾಗು ವುದನ್ನು ಗ್ರಾಮಸ್ಥರು ಮನವರಿಕೆಮಾಡಿಕೊಂಡಿದ್ದಾರೆ ಮತ್ತು ತಾವೇ ತಮ್ಮಿಂದಾದ ಮಟ್ಟಿಗೆ ಪರಿಹಾರ ಕ್ರಮ ಕೈಗೆತ್ತಿಕೊಂಡಿರುವುದನ್ನು ಗಮನಿಸಬಹುದು.

ಪಡುಮಾರ್ನಾಡು ಗ್ರಾಮದ ಕೇಂಪುಲುನಲ್ಲಿ ನೂರಾರು ಜನರ, ಮಾಡಿಕೊಟ್ಟಿರುವ ಸ್ಥಳೀಯರೊಬ್ಬರ ಜಾಗದಲ್ಲಿದ್ದ ಪುಟ್ಟ ಮೋರಿಯೊಂದು ಮಳೆಗೆ ನಾಶವಾಗಿ ಹೋಗಿದೆ. ಅದಕ್ಕೆ ತಾತ್ಕಾಲಿಕವಾಗಿಯಾದರೂ “ಪರಿಹಾರ ಮಾರ್ಗ’ ಕಂಡುಕೊಳ್ಳಬೇಕಾದ ಅನಿವಾರ್ಯ ಗ್ರಾಮಸ್ಥರಿಗಿದೆ. ಈ ಹಿನ್ನೆಲೆಯಲ್ಲಿ ಜಯಂತ ಪೂಜಾರಿ, ಸತೀಶ್‌, ಮೋನಪ್ಪ ಪೂಜಾರಿ, ಸತೀಶ್‌ ಅಡ್ಕರೆ ಸಹಿತ ಗ್ರಾಮಸ್ಥರು ಅಡಿಕೆ ಮರಗಳನ್ನು ಬಳಸಿ ಪುಟ್ಟ ಸೇತುವೆ ನಿರ್ಮಿಸಿಕೊಂಡಿದ್ದಾರೆ. ಪಿಡಿಒ/ ತಾಲೂಕು ಪಂಚಾಯತ್‌ ಸಹಾಯಕ ನಿರ್ದೇಶಕ ಸಾಯೀಶ್‌ ಚೌಟ, ಗ್ರಾಮ ಪಂಚಾಯತ್‌ ಸದಸ್ಯ ರಮೇಶ್‌ ಶೆಟ್ಟ ಗ್ರಾಮಸ್ಥರ ಕಾರ್ಯವನ್ನು ಶ್ಲಾಘಿಸಿದ್ದಾರೆ. ಪಂಚಾಯತ್‌ ವತಿಯಿಂದ ನೀರಿನ ಪೈಪ್‌ ಒದಗಿಸಿ ಮೋರಿಯನ್ನು ತಕ್ಕಮಟ್ಟಿಗೆ ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ.

ತಾತ್ಕಾಲಿಕ ಸಂಪರ್ಕ

ಹೊಸಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಪುಚ್ಚಮೊಗರು ಗ್ರಾಮದ ತಾಕೊಡೆಯ ಅಮ್ಮಿ ಕೋಟ್ಯಾನ್‌ ಅವರ ಮನೆಯ ಬಳಿಯ ತೋಟದಿಂದ ಹಾದು ಹೋಗುವ ಕಿಂಡಿ ಅಣೆಕಟ್ಟು ಅಪಾಯಸ್ಥಿತಿಯಲ್ಲಿದೆ.
ಅನಿವಾರ್ಯವಾಗಿ ಸಂಚಾರ ನಿರ್ಬಂಧಿಸಲಾಗಿದೆ. ಇದೀಗ ಅಡಿಕೆ ಮರಗಳನ್ನು ಬಳಸಿ ತಾತ್ಕಾಲಿಕ ಸಂಪರ್ಕ ಕಲ್ಪಿಸಲಾಗಿದೆ. ಅಧ್ಯಕ್ಷೆ ಸೌಮ್ಯ ಸದಾಶಿವ ಪೂಜಾರಿ ಇವರ ನೇತೃತ್ವ, ಸದಸ್ಯರಾದ ರೆಕ್ಸನ್‌, ರುಖೀಯಾ, ಗ್ರಾಮಸ್ಥರು, ಪಿಡಿಒ ಶೇಖರ ಇವರ ಸಹಕಾರ ಒದಗಿ ಬಂದಿದೆ.

ಹೀಗೆಯೇ ಕೊಚ್ಚಿ ಹೋಗಿದ್ದ, ಮೂಡುಬಿದಿರೆ ತಾಲೂಕಿನ ಪಣಪಿಲ ಗ್ರಾಮದ ಪಣಪಿಲ ಮತ್ತು ಬೋರುಗುಡೆಯನ್ನು ಜೋಡಿಸುವ ಬಿರ್ಮೆರಬೈಲು ಸೇತುವೆಯನ್ನು ತಾತ್ಕಾಲಿಕ ವಾಗಿ ರವಿವಾರ ಪಂಚಾಯತ್‌ ಸದಸ್ಯರು, ಗ್ರಾಮಸ್ಥರು ಸೇರಿಕೊಂಡು ನಿರ್ಮಿಸಿರುವುದನ್ನು ಗಮನಿಸಬಹುದಾಗಿದೆ. ಇನ್ನೂ ಹಲವೆಡೆ ಇಂಥ ಪ್ರಯತ್ನಗಳು ನಡೆಯುತ್ತಿರುವುದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.