Vitla: ಮನೆಗೆ ನುಗ್ಗಿ ನಗ ನಗದು ದೋಚಿದ ಕಳ್ಳರು… ಮನೆ ಕಾಯುತ್ತಿದ್ದ ಸಾಕು ನಾಯಿ ಕಾಣೆ
Team Udayavani, Aug 6, 2024, 3:31 PM IST
ವಿಟ್ಲ : ಸಾಲೆತ್ತೂರು ನಿವಾಸಿ ಜಗನ್ನಾಥ್ ಅವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ.
ಜಗನ್ನಾಥ್ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್ ಹಾಗೂ ಇಬ್ಬರು ಮಕ್ಕಳು ಮಾತ್ರ ವಾಸಿಸುತ್ತಿದ್ದರು.
ಆ.3ರಂದು ವಿಜಯ ತನ್ನ ಮಕ್ಕಳೊಂದಿಗೆ ಈಶ್ವರಮಂಗಲ ಪಂಚೋಡಿಯಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದು ಆ.4ರಂದು ವಾಪಾಸು ಹಿಂದಿರುಗಿ ಮನೆಗೆ ಬರುವ ಈ ವೇಳೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
ಒಟ್ಟು 34 ಗ್ರಾಂ ನಷ್ಟು ಚಿನ್ನ ಹಾಗೂ 6000/-ರೂ ನಗದು ಹಣವನ್ನು ಕಳ್ಳತನ ಮಾಡಿದ್ದಾರೆ. ವಿದೇಶದ ನೋಟುಗಳು ಹಾಗೂ ನಾಣ್ಯಗಳಿದ್ದ ಡಬ್ಬವನ್ನು ಕದ್ದೊಯ್ದಿದ್ದಾರೆ. ವಿಜಯ ಅವರ ಪುತ್ರಿಯ ಶಾಲಾ ಬ್ಯಾಗ್ನಲ್ಲಿದ್ದ ಪುಸ್ತಕವನ್ನು ಎಸೆದು ಬ್ಯಾಗನ್ನು ಕೊಂಡೊಯ್ದಿದ್ದಾರೆ. ಕಳ್ಳತನವಾದ ಸೊತ್ತುಗಳ ಒಟ್ಟು ಮೌಲ್ಯ 1,42,000/- ರೂ ಆಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅಲ್ಲದೇ ಮನೆಯನ್ನು ಕಾವಲು ಕಾಯುತ್ತಿದ್ದ ಎರಡು ಶ್ವಾನಗಳಲ್ಲಿ ಒಂದು ಶ್ವಾನ ಕಾಣೆಯಾಗಿದೆ. ಕಳ್ಳರು ನಾಯಿಯನ್ನೂ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.
ಇದನ್ನೂ ಓದಿ: Vijayapura: ಕರ್ತವ್ಯದಲ್ಲಿದ್ದ ವೇಳೆ ಮೂರ್ಛೆ ಬಂದು ಕುಸಿದು ಬಿದ್ದ ಪೇದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು
Audio controversy: ಬಿ.ಸಿ.ರೋಡ್: ಉದ್ವಿಗ್ನಗೊಂಡು ತಿಳಿಯಾದ ಪರಿಸ್ಥಿತಿ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.