Sanoor ಹೆದ್ದಾರಿಯಲ್ಲಿ ಸಮಸ್ಯೆಗಳು ಸಾವಿರಾರು

ಅರೆಬರೆ ಕಾಮಗಾರಿಯಿಂದಾಗಿ ಸ್ಥಳೀಯರು, ವಾಹನಿಗರು ಹೈರಾಣ; ನಿಲ್ದಾಣಗಳಿಲ್ಲ, ಚರಂಡಿಗಳೆಲ್ಲ ಮಾಯ

Team Udayavani, Aug 6, 2024, 4:13 PM IST

Screenshot (114)

ಕಾರ್ಕಳ: ಬಿಕರ್ನಕಟ್ಟೆ- ಸಾಣೂರು-ಕಾರ್ಕಳ ಚತುಷ್ಪಥ ಹೆದ್ದಾರಿ ನಿರ್ಮಾಣದ ಅರೆಬರೆ ಕಾಮಗಾರಿಯಿಂದಾಗಿ ಸಮಸ್ಯೆಗಳ ಸರಮಾಲೆಯೇ ಸೃಷ್ಟಿಗೊಂಡಿದೆ. ಮಳೆಗೆ ಈಗಾಗಲೇ ಹಲವು ಕಡೆ ರಾದ್ಧಾಂತಗಳೇ ನಡೆದಿವೆ. ಕಳೆದ ಮಳೆಗಾಲದಲ್ಲೂ ಇದೇ ರೀತಿ ಆಗಿದ್ದರೂ ಪಾಠ ಕಲಿತಿಲ್ಲ. ಬಹುರೂಪಿಯಾಗಿ ತೆರೆದುಕೊಂಡ ಇಲ್ಲಿನ ಸಮಸ್ಯೆಗಳಿಗೆ ತುರ್ತಾಗಿ ಚಿಕಿತ್ಸೆ ಆಗಬೇಕಿದೆ.

ಅದರಲ್ಲೂ ಸಾಣೂರಿನಿಂದ ಕಾರ್ಕಳದವರೆಗೆ ನಡೆಯುತ್ತಿರುವ ಕಾಮಗಾರಿ ಅವ್ಯವಸ್ಥೆಯ ಗೂಡಾಗಿದೆ. ಇಲ್ಲಿ ಸರಿಯಾಗಿ ಚರಂಡಿಗಳ ನಿರ್ಮಾಣವಾಗದೆ ತಗ್ಗು ಪ್ರದೇಶಗಳಿಗೆ ನೀರು ಹರಿದು ತುಂಬುತ್ತಿದೆ. ಮನೆ ಅಂಗಡಿಗಳಿಗೆ ಮಳೆ ನೀರು ನುಗ್ಗಿ ಅವಾಂತರಗಳು ಸಂಭವಿಸಿವೆ.

ಸೇತುವೆ ನಿರ್ಮಾಣದಿಂದ ಕಿರಿಕಿರಿ

ಸಾಣೂರು ರಾ.ಹೆದ್ದಾರಿಯಲ್ಲಿ ಹೊಸ ಸೇತುವೆಗೆ ಪಿಲ್ಲರ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ. ಸುತ್ತಲೂ ಮಣ್ಣು ರಾಶಿ ಹಾಕಿರುವುದರಿಂದ ಮಳೆ ನೀರು ಪಕ್ಕದ ಗದ್ದೆಗಳಿಗೆ ನುಗ್ಗಿ ಕೃತಕ ನೆರೆ ಉಂಟಾಗಿದೆ. ಸೇತುವೆ ನಿರ್ಮಾಣ ಕಾರ್ಯ ಕೂಡಲೇ ಪೂರ್ಣಗೊಳಿಸಬೇಕಿದೆ.

ರಸ್ತೆ ಕಾಮಗಾರಿ ನಡೆಯುವ ಅಕ್ಕಪಕ್ಕದಲ್ಲಿ ಮಣ್ಣು, ಕಬ್ಬಿಣದ ಸಾಮಗ್ರಿಗಳನ್ನು ಅಲ್ಲಲ್ಲಿ ರಾಶಿ ಹಾಕಲಾಗಿದ್ದು, ಮಳೆಗಾಲದಲ್ಲಿ ಅಪಾಯಕಾರಿಯಾಗಿ ಪರಿಣಮಿಸಲಿದೆ. ಕೂಡಲೇ ಅದನ್ನು ತೆರವುಗೊಳಿಸುವುದು ಅಗತ್ಯವಾಗಿದೆ.

ಬೀದಿ ದೀಪಗಳಿಲ್ಲದೆ ಸಂಚಾರ ಕಷ್ಟ

ಬೀದಿ ದೀಪಗಳಿಲ್ಲದೆ ರಾತ್ರಿ ಸಂಚಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಕನಿಷ್ಠ ಸರ್ವಿಸ್‌ ರಸ್ತೆ ಪೂರ್ಣಗೊಂಡಲ್ಲಿ ಕೂಡಲೇ ಬೀದಿ ದೀಪದ ವ್ಯವಸ್ಥೆ ಮಾಡಬೇಕು. ಡೈವರ್ಷನ್‌ನಲ್ಲಿ ಪ್ರಯಾಣಿಕರಿಗೆ ಗೊಂದಲವಾಗದಂತೆ ಬ್ಲಿಂಕರ್‌, ಬೆಳಕಿನ ವ್ಯವಸ್ಥೆ, ಫ್ರೋರಸೆಂಟ್‌ ಸ್ಟಿಕ್ಕರ್‌ಗಳನ್ನು ಅಳವಡಿಸಬೇಕಿದೆ.

ಬಸ್‌, ರಿಕ್ಷಾ ತಂಗುದಾಣ ಬೇಕಾಗಿದೆ

ಸಾಣೂರು ಗ್ರಾ.ಪಂ ವ್ಯಾಪ್ತಿಯಲ್ಲಿ ತೆರವುಗೊಳಿಸಿದ ಹಳೆ ಬಸ್ಸು ತಂಗುದಾಣ ಮತ್ತು ರಿಕ್ಷಾ ತಂಗುದಾಣಗಳ ಬದಲಿಗೆ ಹೊಸ ಬಸ್ಸು ತಂಗುದಾಣ ಮತ್ತು ರಿಕ್ಷಾ ತಂಗುದಾಣಗಳನ್ನು ಜನರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವ ಸ್ಥಳಗಳಲ್ಲಿ ಸ್ಥಾಪಿಸಲು ಕೂಡಲೇ ನಿರ್ಮಾಣ ಕಾರ್ಯ ಆರಂಭಿಸಬೇಕು.

12 ಅಡ್ಡ ರಸ್ತೆಗಳಿಗೆ ಹಾನಿ!

ಪುಲ್ಕೇರಿ ಬೈಪಾಸ್‌ನಿಂದ ಮರತಂಗಡಿ ವರೆಗೆ ರಸ್ತೆಯ ಎರಡು ಕಡೆಗಳಲ್ಲಿ 12 ಅಡ್ಡರಸ್ತೆಗಳಿದ್ದು, ಅವೆಲ್ಲವೂ ಜರ್ಜರಿತವಾಗಿವೆ. ಇವುಗಳಲ್ಲಿ 50 ಮೀನಿಂದ 100 ಮೀ ವರೆಗೆ ಮಣ್ಣಿನ ರಸ್ತೆ ಅಥವಾ ಜಲ್ಲಿ ಹಾಕಿದ್ದು ಕೂಡಲೇ ಡಾಮರೀಕರಣ ಮಾಡಿ ಸರಿಪಡಿಸಬೇಕು. ಅಡ್ಡರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಬರುವಾಗ ಮಣ್ಣಿನ ಮೇಲೆ ಮಳೆ ನೀರು ಹರಿದು ಜಾರುತ್ತಿದೆ. ಹಾಕಿದ ಜಲ್ಲಿ ಅಸ್ತವ್ಯಸ್ತವಾಗಿದೆ. ಜಲ್ಲಿಯ ಮೇಲೆ ಚಲಿಸುವಾಗ ದ್ವಿಚಕ್ರವಾಹನ ಚಾಲಕರು ಆಯತಪ್ಪಿ ಬೀಳುತ್ತಿದ್ದಾರೆ.

ಸಮಸ್ಯೆಗಳೇನು? ಪರಿಹಾರ ಹೇಗೆ?

ಮುರತಂಗಡಿ ಶುಂಠಿ ಗುಡ್ಡೆ ತಿರುವಿನಲ್ಲಿ, ಸರ್ವಿಸ್‌ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಆಗಿಲ್ಲ. ರತ್ನಾಕರ್‌ ಕಾಮತ್‌ ಅಂಗಳದ ಎದುರಿನ ಗೋಡೆ ಮಳೆ ನೀರಿಗೆ ಕೊಚ್ಚಿ ಹೋಗಿ, 3.30 ಲಕ್ಷ ರೂ. ವೆಚ್ಚವಾಗಿದೆ. ಇಲ್ಲಿ ನಷ್ಟ ಪರಿಹಾರ ಅಥವಾ ಗೋಡೆ ಪುನರ್‌ ನಿರ್ಮಾಣದ ಅಗತ್ಯವಿದೆ.

ಮುರತಂಗಡಿ-ಇರ್ವತ್ತೂರು ರಸ್ತೆಯಲ್ಲಿ ಹಳೆ ವಿದ್ಯುತ್‌ ಕಂಬ ಹಾಗೂ ಟ್ರಾನ್ಸ್‌ಫಾರ್ಮರ್‌ ಗಳನ್ನು ಕೆಲವು ಕಡೆ ಬದಲಿಸಿಲ್ಲ. ಇಲ್ಲಿ ಸುಮಾರು ಎರಡು ಕಿ.ಮೀ ಸರ್ವಿಸ್‌ ರಸ್ತೆ ನಿರ್ಮಾಣಕ್ಕೆ ತುರ್ತಾಗಿ ಆಗಬೇಕು.

ಸಾಣೂರು ಯುವಕ ಮಂಡಲದ ಮೈದಾನದ ಬಳಿ ಹೈ ಟೆನ್ಶನ್‌ ವಿದ್ಯುತ್‌ ಗೋಪುರ ಪ್ರದೇಶದ ಗುಡ್ಡಜರಿತ, ಸಾಣೂರು ಕಾಲೇಜಿನ ತಡೆಗೋಡೆಯ ಮುಂಭಾಗದ ಗುಡ್ಡ ಜರಿದಿದೆ. ಇಲ್ಲಿ ತಡೆಗೋಡೆ ನಿರ್ಮಿಸಬೇಕಾಗಿದೆ. ತಡೆಗೋಡೆಯ ಮೇಲ್ಭಾಗಕ್ಕೆ ಕನಿಷ್ಠ ಐದು ಅಡಿ ಎತ್ತರಕ್ಕೆ ಕಬ್ಬಿಣದ ಗ್ರಿಲ್‌ ಅಳವಡಿಸಬೇಕಾಗಿದೆ.

ರಸ್ತೆ ಬದಿಯ ನೀರಿನ ಪೈಪ್‌ ಲೈನ್‌ ಗಳಿಗೆ ಹಾನಿಯಾದಾಗ ದುರಸ್ತಿ ವಿಳಂಬವಾಗಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ.

ಸಾಣೂರು ಪದವಿಪೂರ್ವ ಕಾಲೇಜಿಗೆ ಹೋಗುವ ರಸ್ತೆಗೆ ಚರಂಡಿ, ಮಳೆ ನಿಂತ ಕೂಡಲೇ ಡಾಮರು ಕಾಮಗಾರಿ ನಡೆಸಬೇಕಿದೆ.

ಕಾಮಗಾರಿ ಸಂದರ್ಭ ಕಿತ್ತು ಹಾಕಿರುವ ವಿದ್ಯಾಲಯದ ಕಾಂಕ್ರೀಟ್‌ ಪ್ರವೇಶ ದ್ವಾರ ಮತ್ತು ಬಸ್ಸು ಪ್ರಯಾಣಿಕರ ತಂಗುದಾಣ ಮರು ನಿರ್ಮಿಸಬೇಕಿದೆ.

ಸಾಣೂರು- ಪುಲ್ಕೇರಿ  ಬೈಪಾಸ್‌ ವೃತ್ತದ ಬಳಿ ಹೆದ್ದಾರಿಯ ಎರಡೂ ಕಡೆಗಳಲ್ಲಿ ಸೂಕ್ತವಾದ ಚರಂಡಿ ವ್ಯವಸ್ಥೆ ಮಾಡಬೇಕು.

ಕಳಸ, ಶೃಂಗೇರಿ, ಧರ್ಮಸ್ಥಳ, ಸುಬ್ರಹ್ಮಣ್ಯ ಭಾಗಕ್ಕೆ ಹೋಗುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ದೊಡ್ಡದಾದ ಸೂಚನಾಫ‌ಲಕ ಹಾಗೂ ಹೈ ಮಾಸ್ಟ್‌ ದೀಪ ಅಳವಡಿಸಬೇಕು.

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.