Belman: ಈ ಮನೆಗೆ ಸೂರೇ ಇಲ್ಲ, ಟಾರ್ಪಾಲೇ ಹೊದಿಕೆ!

ನಂದಳಿಕೆ ಅಬ್ಬನಡ್ಕದ ಪರಿಶಿಷ್ಟ ಪಂಗಡದ ಕುಟುಂಬ ಜೋಪಡಿಯೇ ನೆಲೆ; ಗೈರಾದ ವಿದ್ಯಾರ್ಥಿನಿಯ ಕರೆತರಲು ಹೋದ ಶಿಕ್ಷಕರಿಗೆ ಕಂಡ ಸಂಕಷ್ಟ

Team Udayavani, Aug 6, 2024, 4:44 PM IST

Screenshot (116)

ಬೆಳ್ಮಣ್‌: ನಂದಳಿಕೆ ಅಬ್ಬನಡ್ಕದಲ್ಲಿನ ಪರಿಶಿಷ್ಟ ಪಂಗಡದ ಕುಟುಂಬವೊಂದು ಸರಿಯಾದ ಸೂರಿಲ್ಲದೆ ಆಗಲೋ ಈಗಲೋ ಎನ್ನುವಂತಿರುವ ಟಾರ್ಪಾಲು ಹೊದಿಕೆಯ ಜೋಪಡಿಯಲ್ಲಿ ವಾಸವಾಗಿದೆ. ಸುಗುಣ ಎಂಬವರ ಮನೆಗೆ ಸಂಪೂರ್ಣ ಟಾರ್ಪಾಲು ಹೊದಿಸಲಾಗಿದೆ. ಬೆಳ್ಮಣ್‌ ಸರಕಾರಿ ಪ್ರೌಢಶಾಲೆಯ ಅಧ್ಯಾಪಕರ ತಂಡ ಈ ಗಂಭೀರ ವಿದ್ಯಮಾನವನ್ನು ಪತ್ತೆ ಹಚ್ಚಿದೆ.

ಬೆಳಕಿಗೆ ಬಂದ ಬಗೆ

ದಿ| ಗೋಪಾಲ ಹಾಗೂ ಸುಗುಣ ಇವರ ಪುತ್ರಿ ಶೋಭಾ ತರಗತಿಗೆ ಗೈರಾಗುತ್ತಿದ್ದಳು. ವಿಶೇಷ ದಾಖಲಾತಿ ಆಂದೋಲನದಡಿ ಶಾಲೆಯ ತಂಡ ಬೆಳ್ಮಣ್‌ ರೋಟರಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರ ಜತೆ ಆಕೆಯ ಮನೆಗೆ ಭೇಟಿ ನೀಡಿದಾಗ ವಾಸ್ತವ ಬಯಲಾಯಿತು. ಯಾವುದೇ ಮೂಲಭೂತ ಸೌಕರ್ಯಗಳಿಲ್ಲದ ಈ ಮನೆಯಲ್ಲಿ ತಾಯಿ ಮತ್ತು ಮಗಳು ವಾಸವಾಗಿದ್ದಾರೆ. ಶೋಭಾಳಿಗೆ ಓದಲು ಬಿಡಿ ಮಲಗಲೂ ಒಂದಿಂಚು ಜಾಗವಿಲ್ಲದ ಸ್ಥಿತಿ ಇಲ್ಲಿದೆ. ಮನೆಯಲ್ಲಿ ತಾಯಿ ಮಾತ್ರ ಇರುವುದರಿಂದ ಶೋಭಾಳಿಗೆ ವಿದ್ಯಾರ್ಥಿ ನಿಲಯ ಸೇರುವಂತೆಯೂ ಇಲ್ಲ.

ನೆರವಿಗೆ ಮನವಿ

ಸೂರಿಲ್ಲದ ಈ ಕುಟುಂಬಕ್ಕೆ ಸೇವಾ ಸಂಸ್ಥೆಗಳು, ಜನಪ್ರತಿನಿಧಿಗಳು ಸೇರಿ ಸೂರು ಕಲ್ಪಿಸಬೇಕಾಗಿದೆ ಎಂದು ಶಾಲೆಯ ಪ್ರತಿನಿಧಿಗಳು ಮನವಿ ಮಾಡಿದ್ದಾರೆ

ನಿವೇಶನಕ್ಕೆ ಅರ್ಜಿ ಹಾಕಿದ್ದರೂ ಫಲವಿಲ್ಲ

ಈ ಕುಟುಂಬ ಈಗಾಗಲೇ ಸಂತ ನಿವೇಶನಕ್ಕೆ ಅರ್ಜಿ ಹಾಕಿದ್ದರೂ ಪ್ರಯೋಜನವಾಗಿಲ್ಲ. ಚುನಾವಣೆಯ ಸಂದರ್ಭ ಮಾತ್ರ ಜನಪ್ರತಿನಿಧಿಗಳಿಗೆ, ರಾಜಕೀಯ ವ್ಯಕ್ತಿಗಳಿಗೆ ಇವರು ಕಾಣುತ್ತಾರೆ. ಬಳಿಕ ಮರೆತು ಬಿಡುತ್ತಾರೆ. ಇಂಥ ಸ್ಥಿತಿಯಲ್ಲಿ ಶೋಭಾ ನಿರಂತರವಾಗಿ ಶಾಲೆಗೆ ಬರಲು ಸಾಧ್ಯವೇ ಎಂದು ಶಿಕ್ಷಕರೇ ಪ್ರಶ್ನಿಸಿಕೊಳ್ಳುತ್ತಾರೆ.

ನೆರವಿಗೆ ನಿಲ್ಲುತ್ತೇವೆ

ಈ ಕುಟುಂಬ, ವಿದ್ಯಾರ್ಥಿನಿಯ ಮನೆ ಪರಿಸ್ಥಿತಿ ನೋಡಿದರೆ ಮನ ಮಿಡಿಯುತ್ತಿದೆ. ರೋಟರಿ ಅವರ ನೆರವಿಗೆ ನಿಲ್ಲಲಿದೆ.

– ಮುರಳೀಧರ ಜೋಗಿ, ಬೆಳ್ಮಣ್‌ ರೋಟರಿ ಅಧ್ಯಕ್ಷ

ಸೇವಾ ಸಂಸ್ಥೆಗಳು ಸಹಕರಿಸಬೇಕು

ಈ ಕಾಲದಲ್ಲಿಯೂ ಇಂತಹ ಕುಟುಂಬಗಳಿವೆ ಎಂದಾಗ ನೋವಾಗುತ್ತದೆ. ಸೇವಾ ಸಂಸ್ಥೆಗಳು ಮುಂದೆ ಬಂದು ಸಹಕರಿಸಬೇಕಾಗಿದೆ.

– ಜಯಂತಿ ಶೆಟ್ಟಿ, ಅಧ್ಯಾಪಕಿ, ಬೆಳ್ಮಣ್‌ ಪ್ರೌಢಶಾಲೆ.

– ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.