Tour Circle: ಕೈಬೀಸಿ ಕರೆಯುವ ಬೇಕಲಕೋಟೆ


Team Udayavani, Aug 6, 2024, 5:00 PM IST

7-bekal-fort

ಕೇರಳ ರಾಜ್ಯದ ಸ್ವರ್ಣ ಕಿರೀಟದಂತೆ, ಗಜರಾಜನಂತೆ, ಸಪ್ತ ಭಾಷೆಯ ಸಂಗಮ ನಾಡು, ತುಳು, ಮಲಯಾಳಂ, ಕನ್ನಡ, ಮರಾಠಿ, ಬ್ಯಾರಿ, ಕೊಂಕಣಿ, ಉರ್ದು ಭಾಷೆಗಳ ಪೊರೆಯುವ ತೊಟ್ಟಿಲು ಈ ಕಾಸರಗೋಡು. ಚರಿತ್ರೆಯ ಪುಟಗಳನ್ನು ಒಮ್ಮೆ ಇಣುಕಿ ನೋಡಿದರೆ ಇಲ್ಲಿ ಇಕ್ಕೇರಿ ನಾಯಕರು ಕಟ್ಟಿದ ಭವ್ಯವಾದ ಬೇಕಲ ಕೋಟೆ ಮತ್ತು ಅದರ ಅಕ್ಕಪಕ್ಕದ ನೆಲೆಗಳು ಪುಳಕಿಸುವಂತದ್ದು.

ಸರ್ವ ಧರ್ಮದ ಶಾಂತಿಯ ತೋಟವಾಗಿರುವ, ದೈವಗಳ ಆರಾಧನೆಯ ಬೀಡಾಗಿರುವ ಕಾಸರಗೋಡು ದೇವಾಲಯ, ಮಂದಿರ, ಪಳ್ಳಿಗಳಿಗೆ ಹೆಸರುವಾಸಿ. ಉದಾಹರಣೆಗೆ ಮಧೂರು, ಅಡೂರು, ಅನಂತಪುರ, ಮಾಲಿಕ್‌ ದಿನಾರ್‌ ಹೀಗೆ ಅನೇಕ ಆರಾಧನಾಲಯಗಳು ಇಲ್ಲಿವೆ. ಇದರಿಂದಾಗಿಯೇ ಕಾಸರಗೋಡಿಗೆ ವಾಸ್ತುಶಿಲ್ಪದ ತೊಟ್ಟಿಲ ತೂಗುವ ನಾಡೆಂಬ ಹೆಸರು ಕೂಡ ಬಂದಿದೆ.

ಬೇಕಲಕೋಟೆ ಮತ್ತು ನನ್ನ ಅನುಬಂಧ ಕಿರಿ ವಯಸ್ಸಿನಿಂದಲೇ ಶುರುವಾಗಿದ್ದು, ಇಂದಿಗೂ ಈ ಒಡನಾಟ ಹಸನಾಗಿದೆ. ಕಾಸರಗೋಡು ಮೂಲದವನೇ ಆದ ನನಗೆ ಈ ಕೋಟೆಯ ಸವಿಯ ನೆನೆಯುವುದೆಂದರೆ ಹರುಷ. ದಕ್ಷಿಣದಿ ಅರಬ್ಬಿ ಸಮುದ್ರದ ಅಲೆಗಳ ಝೇಂಕಾರದ ಸದ್ದು ಕಿವಿಗೆ ಇಂಪು, ತಂಗಾಳಿಯ ತಂಪು, ಗರಿಗೆದರಿದ ಕಿರು ಓಲೆಯ ಮಡಲಿನ ತೆಂಗಿನ ಸಾಲು, ಕೊನೆಯಿಲ್ಲದ ನೀಲಾಕಾಶದ ಒಡಲು, ಹಾರಾಡುವ ಹಕ್ಕಿಗಳ ಸಾಲು ಹೀಗೆ ಇಲ್ಲಿನ ಸೌದರ್ಯವನ್ನು ಬಣ್ಣಿಸಲು ಶಬ್ದಗಳು ಸಾಲವು.

40 ಎಕರೆಯ ಕೋಟೆ

ಸೂರ್ಯಾಸ್ತಮಾನದ ಸುಂದರ ದೃಶ್ಯವನ್ನು ಕಣ್ಣಲ್ಲಿ ಸೆರೆ ಹಿಡಿದು ಅದನ್ನು ನೆನಪಿನ ಬುತ್ತಿಯಲ್ಲಿ ಭದ್ರಮಾಡಿ ಇಟ್ಟುಕೊಳ್ಳುವಂತಹ ತಾಣ ಯಾವುದಾದರೂ ಇದ್ದರೆ ಅದು ಕಾಸರಗೋಡು ಜಿಲ್ಲೆಯಲ್ಲಿರುವ ಬೇಕಲಕೋಟೆ. ಬೇಕಲಕೋಟೆಯ ಐತಿಹ್ಯ ನೋಡುವುದಾದರೆ ಸೇನಾ ಕಾರ್ಯಚಟುವಟಿಕೆಗಳನ್ನು ಚುರುಕುಗೊಳಿಸಲು ಹಾಗೂ ರಕ್ಷಣಾ ಕಾರ್ಯದ ಉದ್ದೇಶದಿಂದ ಕೆಳದಿಯ ನಾಯಕರು ಕಟ್ಟಿದ ಸುಂದರ ಕೋಟೆಯಿದು.

ಇದು ಕೇರಳ ರಾಜ್ಯದ ಅತೀ ದೊಡ್ಡ ಕೋಟೆಯೂ ಹೌದು. ಸರಿ ಸುಮಾರು 40 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಕೋಟೆ ಹರಡಿಕೊಂಡಿದೆ. ಬತ್ತೇರಿ, ಉದ್ದನೆಯ ಸಮುದ್ರ ಕಿನಾರೆಗೆ ಮುಖಮಾಡಿರುವ ಹಾದಿ, ರಕ್ಷಣೆಗಾಗಿ ಕೋಟೆಯಲ್ಲಿ ಕಾಣುವಂತಹ ಕಿಂಡಿ, ಸಾಗರ ವೀಕ್ಷಣಾ ಗೋಪುರವನ್ನು ನಾವಿಲ್ಲಿ ಕಾಣಬಹುದು.

ಹಿರಿಯ ವೆಂಕಟಪ್ಪನಾಯಕ ಕೋಟೆಯ ನಿರ್ಮಾಣಕ್ಕೆ ಶಿಲನ್ಯಾಸ ಹಾಕಿದರು. ಶಿವಪ್ಪ ನಾಯಕ ನಿರ್ಮಾಣಕಾರ್ಯವನ್ನು ಪೂರ್ಣಗೊ ಳಿಸಿದರು. ಕಾಲಾನಂತರದಲ್ಲಿ ಈ ಕೋಟೆ ಟಿಪ್ಪುವಿನ ವಶವಾಯಿತು. ಟಿಪ್ಪು ಮರಣದ ಬಳಿಕ ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪೆನಿಯ ವಶವಾ ಯಿತು. ಕೋಟೆಯಲ್ಲಿ ಯಾವುದೇ ಅರಮನೆಗಳು ಇದ್ದ ಕುರುಹುಗಳಿಲ್ಲ. ಈ ಕೋಟೆ ಶಸ್ತಾಸ್ತಗಳ ರಕ್ಷಣೆ ಹೆಸರುವಾಸಿಯಾಗಿತ್ತೆಂದು ಇತಿಹಾಸಕಾರರು ಹೇಳುತ್ತಾರೆ. ಕೋಟೆಯ ಮುಖ್ಯದ್ವಾರದ ಬಳಿ ಮುಖ್ಯಪ್ರಾಣ ದೇವಾಲಯವಿದೆ. ಬೇಕಲ ಕೋಟೆಯಂತೆ ಕಾಸರಗೋಡು ಜಿಲ್ಲೆಯಲ್ಲಿ ಕುಂಬ್ಳೆ ಕೋಟೆ, ಚಂದ್ರಗಿರಿ ಕೋಟೆ, ಹೊಸದುರ್ಗ ಕೋಟೆ ಎಂಬ ಕೋಟೆಗಳಿವೆ.

ಬೇಕಲ ಕೋಟೆಯು ಕಾಸರಗೋಡು-ಕನ್ನೂರು ಮುಖ್ಯ ರಸ್ತೆಯಲ್ಲಿದ್ದು, ಕೋಟೆಗೆ ಕಾಸರಗೋಡಿನಿಂದ 15 ಕಿ.ಮೀ., ಮಂಗಳೂರು ನಗರದಿಂದ 68 ಕಿ.ಮೀ., ಹಾಗೂ ಬೆಂಗಳೂರಿನಿಂದ ಸುಮಾರು 369 ಕಿ.ಮೀ. ದೂರದಲ್ಲಿದೆ. ಕೋಟೆಯ ಸಮೀಪದಲ್ಲೇ ಬೇಕಲ್‌ ಫೋರ್ಟ್‌ ರೈಲು ನಿಲ್ದಾಣವಿದ್ದು, ಪ್ರವಾಸಿಗರಿಗೆ ಅನುಕೂಲವಾಗಿದೆ. ಇದಲ್ಲದೆ ಕೋಟೆಯ ಬಳಿ ಬೇಕಲ ಬೀಚ್‌ ಮತ್ತು ರೆಡ್‌ ಮೂನ್‌ ಬೀಚ್‌ ಎಂಬ ಅವಳಿ ಬೀಚ್‌ಗಳಿದ್ದು, ಒಟ್ಟಿನಲ್ಲಿ ಉತ್ತಮವಾದ ಪ್ರವಾಸಿ ತಾಣವಾಗಿದೆ.

 -ಗಿರೀಶ್‌ ಪಿ.ಎಂ.

ವಿವಿ ಕಾಲೇಜು ಮಂಗಳೂರು

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-uv-fusion

Education System: ಶಿಕ್ಷಕರು, ಶಿಕ್ಷಣ ಹೇಗಿದ್ದರೆ ಚೆನ್ನ..?

19-uv-fusion

UV Fusion: ಶಿಕ್ಷಕರೊಂದಿಗಿನ ನೆನಪುಗಳು

18-uv-fusion

UV Fusion: ಬಯಕೆಯ ಬೆನ್ನೇರಿದಷ್ಟು ನೆಮ್ಮದಿ ಮರೀಚಿಕೆಯಷ್ಟೇ?

17-uv-fusion

Kasaragod Inscriptions: ಇತಿಹಾಸದ ಕಥೆ ಹೇಳುವ ಕಾಸರಗೋಡಿನ ಶಾಸನಗಳು

16-uv-fusion

UV Fusion: ಮಾತು ಅತಿಯಾಗದಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.