Mangaluru: ಜಾಹೀರಾತು ಫಲಕ ನಿರ್ವಹಣೆಗೆ ಹೊಸ ಆ್ಯಪ್‌

ಜನರೂ ಭಾಗಿಗಳಾಗಲು ಅವಕಾಶ; ತಿಂಗಳೊಳಗೆ ಆನ್‌ಲೈನ್‌ ತಂತ್ರಾಂಶ ಜಾರಿಗೆ ಸಿದ್ಧತೆ

Team Udayavani, Aug 6, 2024, 5:22 PM IST

Screenshot (118) copy

ಮಹಾನಗರ: ಸರಕಾರಿ ಮತ್ತು ಖಾಸಗಿ ಜಾಗದಲ್ಲಿ ಜಾಹೀರಾತು ಫಲಕ ಅಳವಡಿಸಲು, ನವೀಕರಿಸಲು, ತೆರವುಗೊಳಿಸಲು ಮತ್ತು ಶುಲ್ಕ ಪಾವತಿಗೆ ಇದೀಗ ಹೊಸ ಆ್ಯಪ್‌ ಅಭಿವೃದ್ಧಿಪಡಿಸಲು ಮಹಾನಗರ ಪಾಲಿಕೆ ಮುಂದಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ಆನ್‌ಲೈನ್‌ ವ್ಯವಸ್ಥೆಗೆ ಒಗ್ಗಿಕೊಳ್ಳುತ್ತಿದ್ದು, ಈಗಾಗಲೇ ಹಲವು ಸೇವೆಗಳು ಆನ್‌ ಲೈನ್‌ ಇದ್ದು, ಜಾಹೀರಾತು ಫಲಕ ನಿರ್ವಹಣೆಯೂ ಇದೇ ವ್ಯವಸ್ಥೆಗೆ ಸೇರಿಸಲಾಗುತ್ತಿದೆ. ಈ ಆ್ಯಪ್‌ ಮೂಲಕ ಅರ್ಜಿದಾರರು ಜಾಹೀರಾತು ಫಲಕ ಅಳವಡಿಸಲು ನಿಗದಿ ಪಡಿಸಿದ ಸ್ಥಳಗಳ ಮಾಹಿತಿ (ಜಿಯೋ ಟ್ಯಾಗಿಂಗ್‌ ಮೂಲಕ) ಪಡೆಯಲು ಅವಕಾಶ ಇರುತ್ತದೆ. ಪಾಲಿಕೆ ಅಧಿಕಾರಿಗಳಿಂದ ಸ್ಥಳ ಪರಿಶೀಲಿಸಲು, ಜಾಹೀರಾತು ಫಲಕಗಳ ನವೀಕರಿಸಲು ಕೂಡ ಈ ತಂತ್ರಾಂಶದ ಮೂಲಕ ಅವಕಾಶ ಮಾಡಿಕೊಡಲಾಗುತ್ತದೆ. ಈಆ್ಯಪ್‌ ಮೂಲಕ ಅರ್ಜಿದಾರರು ಪರವಾನಿಗೆ ಶುಲ್ಕ ಆನ್‌ಲೈನ್‌ ಮೂಲಕ ಪಾವತಿಗೆ ಬ್ಯಾಂಕ್‌ನೊಂದಿಗೆ ಇಂಟರ್‌ಗ್ರೇಶನ್‌ ಮಾಡಬೇಕಾಗಿದೆ. ತನ್ನ ಜಾಹೀರಾತು ಫಲಕದ ಪರವಾನಿಗೆಯ ಪ್ರಸ್ತುತ ಸ್ಥಿತಿ (ಟ್ರ್ಯಾಕ್‌ ಸ್ಟೇಟಸ್‌) ನೋಡಲು ಈ ತಂತ್ರಾಂಶದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ.

ಪಾಲಿಕೆ ವ್ಯಾಪ್ತಿಯ ಅಧಿಕೃತ, ಅನಧಿಕೃತ ಜಾಹೀರಾತು ಫಲಕಗಳನ್ನು ಮತ್ತು ನವೀಕರಿಸಬೇಕಾದ ಫಲಕಗಳ ವರದಿಯನ್ನು ಅಧಿಕಾರಿಗಳಿಗೆ ಸುಲಭವಾಗಿ ಪಡೆಯಲು ಸಹಕಾರಿ.

ಹಲವು ಸೇವೆಗಳಿಗೆ ಆನ್‌ಲೈನ್‌ ಟಚ್‌

ಪಾಲಿಕೆಯ ಹಲವು ಸೇವೆಗಳು ಈಗಾಗಲೇ ಆನ್‌ಲೈನ್‌ ಆಗಿದ್ದು, ನೀರಿನ ಬಿಲ್‌ ಪಾವತಿ, ಆಸ್ತಿ ತೆರಿಗೆ, ಉದ್ದಿಮೆ ಪರವಾನಿಗೆಯನ್ನು ಆನ್‌ಲೈನ್‌ ಮೂಲಕ ಬಳಸಿಕೊಳ್ಳಬಹುದು. ಅದೇ ರೀತಿ, ಕುದ್ಮುಲ್ ರಂಗರಾವ್‌ ಪುರಭವನ, ಡಾ| ಬಿ.ಆರ್‌. ಅಂಬೇಡ್ಕರ್‌ ಭವನ ಬುಕ್ಕಿಂಗ್‌ ಮಾಡಲೂ ಆನ್‌ಲೈನ್‌ ತಂತ್ರಾಂಶ ಬರಲಿದೆ. ಸ್ಮಾರ್ಟ್‌ ಸಿಟಿ ಯೋಜನೆಯ ಮೂಲಕ “ಒನ್‌ ಟಚ್‌ ಮಂಗಳೂರು’ ಎಂಬ ಹೊಸ ಆ್ಯಪ್‌ ರೂಪುಗೊಂಡಿದ್ದು, ಸದ್ಯ ಚಾಲ್ತಿಯಲ್ಲಿದೆ. ಇದರಲ್ಲಿಯೂ ಹಲವು ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ. ಸ್ಮಾರ್ಟ್‌ಸಿಟಿ ಕಮಾಂಡ್‌ ಕಂಟ್ರೋಲ್‌ ಸೆಂಟರ್‌ನಿಂದ ಇದನ್ನು ನಿಗಾ ವಹಿಸಲಾಗುತ್ತಿದೆ.

ಜನಸ್ನೇಹಿ ಆ್ಯಪ್‌

ನಗರದಲ್ಲಿ ಅನಧಿಕೃತ ಜಾಹೀರಾತುಗಳು, ಅಪಾಯಕಾರಿ ಜಾಹೀರಾತುಗಳು, ಫುಟ್‌ಪಾತ್‌ಗಳಲ್ಲಿ ಅಳವಡಿಸುವ ಜಾಹೀರಾತುಗಳು ಸಹಿತ ಜಾಹೀರಾತು ಫಲಕಗಳಿಂದ ಜನರಿಗೆ ಆಗುವ ತೊಂದರೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಆ್ಯಪ್‌ನಲ್ಲಿ ಪ್ರತ್ಯೇಕ ವಿಭಾಗ ರೂಪಿಸಲಾಗುವುದು. ಈ ಮೂಲಕ ಜನಸ್ನೇಹಿ ಆ್ಯಪ್‌ ರೂಪಿಸಲು ಪಾಲಿಕೆ ಮುಂದಾಗಿದೆ’ ಎನ್ನುತ್ತಾರೆ ಪಾಲಿಕೆ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲು ಸ್ಥಾಯೀ ಸಮಿತಿ ಅಧ್ಯಕ್ಷ ವರುಣ್‌ ಚೌಟ.

ತಿಂಗಳೊಳಗೆ ಜಾರಿಗೆ

ನಗರದಲ್ಲಿ ಜಾಹೀರಾತು ಫಲಕ ಅಳವಡಿಸಲು, ನವೀಕರಣಕ್ಕೆ ಮತ್ತು ತೆರವುಗೊಳಿಸಲು, ಶುಲ್ಕ ಪಾವತಿಗೆ ಆನ್‌ಲೈನ್‌ ವ್ಯವಸ್ಥೆ ಜಾರಿಗೆ ಪಾಲಿಕೆ ಮುಂದಾಗಿದೆ. ಕೆಲವು ಕಡೆ ಪಾಲಿಕೆಯಿಂದ ಪಡೆದ ಪರವಾನಿಗೆಯ ರೀತಿಯೇ ಜಾಹೀರಾತು ಅಳವಡಿಸುವುದಿಲ್ಲ. ಅವಧಿ ಮುಗಿದ ಜಾಹೀರಾತು ಫಲಕವೂ ನಗರದಲ್ಲಿದೆ. ಇವೆಲ್ಲದರ ಮೇಲೆ ನಿಗಾ ವಹಿಸಲು ತಂತ್ರಾಂಶದಿಂದ ಸಾಧ್ಯವಿದೆ. ಇನ್ನೇನು ತಿಂಗಳೊಳಗೆ ಆನ್‌ಲೈನ್‌ ತಂತ್ರಾಂಶ ಜಾರಿಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ.

– ಸುಧೀರ್‌ ಶೆಟ್ಟಿ ಕಣ್ಣೂರು, ಮೇಯರ್‌

‘ಸರ್ವರ್‌ ಸಮಸ್ಯೆ’ಯೇ ಪಾಲಿಕೆಗೆ ಸವಾಲು

ಮಂಗಳೂರು ಪಾಲಿಕೆಯಿಂದ ಹಲವು ಆನ್‌ಲೈನ್‌ ಸೇವೆ ಇದ್ದರೂ “ಸರ್ವರ್‌ ಸಮಸ್ಯೆ’ಯೇ ಪಾಲಿಕೆಗೆ ಸವಾಲಾಗಿ ಪರಿಣಮಿಸುತ್ತಿದೆ. ಇ-ಖಾತೆ ಪಡೆಯಲು ಕಳೆದ ಅನೇಕ ತಿಂಗಳಿನಿಂದ ಆಗಾಗ್ಗೆ ಸಮಸ್ಯೆ ಬರುತ್ತಿದೆ. ಇನ್ನುಳಿದ ಕೆಲವು ಸೇವೆಯೂ ಸರ್ವರ್‌ ಕಾರಣದಿಂದ ವ್ಯತ್ಯಯಗೊಳ್ಳುತ್ತಿದೆ. ಆನ್‌ಲೈನ್‌ ವ್ಯವಸ್ಥೆಯ ಆರಂಭ ಒಳ್ಳೆಯ ಉದ್ದೇಶವಾದರೂ ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ಈಗಲೇ ಯೋಜನೆ ರೂಪಿಸಬೇಕಿದೆ ಎನ್ನುತ್ತಾರೆ ಸಾರ್ವಜನಿಕರು.

– ನವೀನ್‌ ಭಟ್‌ ಇಳಂತಿಲ

 

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.