PSI Case; ಶಾಸಕ,ಪುತ್ರನನ್ನು ಬಂಧಿಸಿ ನಮ್ಮನೆಗೆ ಬನ್ನಿ: ಗೃಹ ಸಚಿವರಿಗೆ ಕುಟುಂಬಸ್ಥರ ತಾಕೀತು


Team Udayavani, Aug 6, 2024, 6:43 PM IST

PSI Case; ಶಾಸಕ,ಪುತ್ರನನ್ನು ಬಂಧಿಸಿ ನಮ್ಮನೆಗೆ ಬನ್ನಿ: ಗೃಹ ಸಚಿವರಿಗೆ ಕುಟುಂಬಸ್ಥರ ತಾಕೀತು

ಕೊಪ್ಪಳ: ಯಾದಗಿರಿ ಪಿಎಸ್‌ಐ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನನ್ನ ತಮ್ಮನ ಸಾವಿಗೆ ಕಾರಣರಾದ ಯಾದಗಿರಿಯ ಶಾಸಕ ಹಾಗೂ ಆತನ ಪುತ್ರನನ್ನು ಮೊದಲು ಬಂಧಿಸಿ, ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ನಮ್ಮ ಮನೆಗೆ ಬರಲಿ ಎಂದು ಮೃತ ಪಿಎಸ್‌ಐ ಪರಶುರಾಮ ಅವರ ಸಹೋದರ ಹನುಮಂತಪ್ಪ ಛಲವಾದಿ ಒತ್ತಾಯ ಮಾಡಿದ್ದಾರೆ.

ಕಾರಟಗಿ ತಾಲೂಕಿನ ಸೋಮನಾಳ ಗ್ರಾಮಕ್ಕೆ ಆ.೦7 ರಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭೇಟಿ ನೀಡಲಿದ್ದಾರೆ. ಈ ವೇಳೆ ಮೃತ ಪಿಎಸ್‌ಐ ಹೆತ್ತವರಿಗೆ ಸಾಂತ್ವಾನ ಹೇಳಲಿದ್ದಾರೆ.

ಪಿಎಸ್‌ಐ ಪರಶುರಾಮ ಸಾವಿಗೆ ಯಾದಗಿರಿ ಶಾಸಕ ಹಾಗೂ ಆತನ ಪುತ್ರನೇ ಕಾರಣ. ಅವರ ವಿರುದ್ದ ನಾವು ದೂರು ಕೊಟ್ಟಿದ್ದೇವೆ. ಆದರೆ ಈವರೆಗೂ ಆ ಆರೋಪಿಗಳ ಬಂಧನವಾಗಿಲ್ಲ. ನಮ್ಮ ಮನೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ಮುಖ್ಯ ಸಚೇತಕ ಛಲವಾದಿ ನಾರಾಯಣಸ್ವಾಮಿ ಸಾಂತ್ವಾನ ಹೇಳಲು ಬಂದಿದ್ದಾರೆ. ಆ.೦7ಕ್ಕೆ ನಮ್ಮ ಮನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಆಗಮಿಸುವುದಾಗಿ ಮಾಹಿತಿ ಗೊತ್ತಾಗಿದೆ. ಅವರು ಸರ್ಕಾರದ ಭಾಗವಾಗಿ ನಮ್ಮ ಮನೆಗೆ ಆಗಮಿಸುತ್ತಿದ್ದಾರೆ. ನನ್ನ ತಮ್ಮನ ಸಾವಿಗೆ ನ್ಯಾಯ ಸಿಗಬೇಕು. ಸಾವಿಗೆ ಕಾರಣರಾದವನ್ನು ಬಂಧಿಸದೆ ಸಾಂತ್ವಾನ ಹೇಳಲು ಬರುವುದು ಸರಿಯಲ್ಲ. ಮೊದಲು ಆರೋಪಿಗಳ ಬಂಧಿಸಿ ನಂತರ ನಮ್ಮ ಮನೆಗೆ ಬರಲಿ. ಗೃಹ ಸಚಿವರು ನಮ್ಮ ಮನೆಗೆ ಸಾಂತ್ವಾನ ಹೇಳಲು ಬರುತ್ತಿರುವುದಕ್ಕೆ ನಮ್ಮ ವಿರೋಧವೇನು ಇಲ್ಲ. ಸರ್ಕಾರದ ಪ್ರತಿನಿಧಿಯಾಗಿ ಅವರು ಬರುತ್ತಿದ್ದು ಆರೋಪಿಗಳನ್ನು ಐದು ದಿನಗಳಾದರೂ ಬಂಧಿಸಿಲ್ಲ ಎಂದು ಮೃತ ಪಿಎಸ್‌ಐ ಸಹೋದರ ಹನುಮಂತಪ್ಪ ಹೇಳಿದ್ದಾರೆ.

ಛಲವಾದಿ ನಾರಾಯಣ ಸ್ವಾಮಿ ಭೇಟಿ

ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪಿಎಸ್ಐ ಪರಶುರಾಮ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಇದೇ ವೇಳೆ ಪರಶುರಾಮ ಕುಟುಂಬಕ್ಕೆ ತಮ್ಮ ಒಂದು ತಿಂಗಳ ವೇತನದ ಚೆಕ್ ಹಸ್ತಾಂತರ ಮಾಡಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ಯಾದಗಿರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಲಿ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ ಎಂದು ಆಗ್ರಹಿಸಿದರು.

ಪಿಎಸ್ಐ ಒತ್ತಡ, ಮಾನಸಿಕ ಕಿರುಕುಳದಿಂದ ಮೃತಪಟ್ಟಿದ್ದಾರೆ. ಪರಶುರಾಮ್ ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರ ಕಾರಣ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಲಿಖಿತ ದೂರು ಕೊಟ್ಟಿದ್ದಾರೆ. ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಉಳಿಗಾಲವಿಲ್ಲ. ಈ ಕೂಡಲೇ ತಪ್ಪಿತಸ್ಥರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

puಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ

Govt., ಕಲ್ಯಾಣ ಅಭಿವೃದ್ಧಿಗೆ ಸರಕಾರದಿಂದ ಪಣ: ದಶಕದ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

Govt., ಕಲ್ಯಾಣ ಅಭಿವೃದ್ಧಿಗೆ ಸರಕಾರದಿಂದ ಪಣ: ದಶಕದ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.