Indrali: ರಸ್ತೆಯಲ್ಲೇ ನಿಲ್ಲುವ ಬಸ್‌, ಗುಂಡಿಗಳಿಂದ ಅಪಾಯಕ್ಕೆ ಆಹ್ವಾನ


Team Udayavani, Aug 6, 2024, 6:12 PM IST

Screenshot (121)

ಉಡುಪಿ: ಇಂದ್ರಾಳಿ ಬಸ್‌ ನಿಲ್ದಾಣ ಸಮೀಪದ ರಸ್ತೆ ಬದಿಯಲ್ಲಿರುವ ಗುಂಡಿಗಳು ದಿನದಿಂದ ದಿನಕ್ಕೆ ಬೃಹತ್‌ ಗಾತ್ರದ ಸ್ವರೂಪ ಪಡೆಯುವ ಮೂಲಕ ಅಪಾಯವನ್ನು ಆಹ್ವಾನಿಸುತ್ತಿದೆ. ಇನ್ನೊಂದೆಡೆ ಜಂಕ್ಷನ್‌ನ ರಸ್ತೆಯಲ್ಲಿಯೇ ಬಸ್‌ ನಿಲುಗಡೆ ಮಾಡುತ್ತಿರುವುದರಿಂದ ಪ್ರಯಾಣಿಕರು, ಸವಾರರಿಗೆ ಸಂಕಟ ಎದುರಾಗಿದೆ.

ಮಣಿಪಾಲ-ಉಡುಪಿ ಮುಖ್ಯರಸ್ತೆ ಯಲ್ಲಿ ಪ್ರಮುಖ ಪ್ರದೇಶವಾದ ಇಂದ್ರಾಳಿ ಪರಿಸರವು ಶಾಲೆ, ರೈಲ್ವೇ ನಿಲ್ದಾಣ, ರುದ್ರಭೂಮಿ ಸಹಿತ ಪ್ರಮುಖ ಸಂಸ್ಥೆ, ಸ್ಥಳಗಳನ್ನು ಹೊಂದಿದೆ. ಈ ಭಾಗದಲ್ಲಿ ಜನ ಓಡಾಟ ಅತ್ಯಂತ ಹೆಚ್ಚಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯರಸ್ತೆಯ ಬದಿಯಲ್ಲಿ ಬೃಹತ್‌ ಗುಂಡಿ ಸವಾರರನ್ನು ದಂಗು ಬಡಿಸುವಂತಿದೆ. ಇಲ್ಲಿನ ಹೆದ್ದಾರಿ ರಸ್ತೆ ವ್ಯವಸ್ಥಿತಗೊಂಡು ಎರಡು ವರ್ಷ ಕಳೆದಿದೆ. ಆದರೆ ರೈಲ್ವೇ ಮೇಲ್ಸೇತುವೆ ಸರಿಯಾಗಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಈ ರೀತಿ ಕೆಲವು ಸಮಸ್ಯೆಗಳು ಇನ್ನೂ ಜೀವಂತವಿದೆ.

ಇಂದ್ರಾಳಿ ಶ್ರೀ ಪಂಚದುರ್ಗಾ ಪರಮೇಶ್ವರೀ ದೇವಸ್ಥಾನ ಕಡೆಗೆ ಹೋಗುವ ರಸ್ತೆಯ ಅಂಚಿನಲ್ಲಿ ಮೂರು ಬೃಹತ್‌ ಗುಂಡಿಗಳು ಸಾಲಾಗಿ ನಿರ್ಮಾಣಗೊಂಡಿದ್ದು, ಸವಾರರಿಗೆ ಮರಣ ಬಾವಿಯಂತೆ ಬಾಯ್ದೆರೆದುಕೊಂಡಿವೆ. ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಹೋಗುವವರು ವೇಗವಾಗಿ ಓವರ್‌ಟೇಕ್‌ ಮಾಡುವ ಭರದಲ್ಲಿ ಸಾಗಿದರೆ ಈ ಗುಂಡಿಗೆ ವಾಹನಗಳು ಬಿದ್ದು ಖಂಡಿತ ಅಪಘಾತ ಸಂಭವಿಸುತ್ತದೆ.

ಗುಂಡಿಗಳು ಅರಿವಿಗೆ ಬಾರದೆ ಅಪಘಾತ

ಮಳೆಗಾಲ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿರುವ ಈ ಬೃಹತ್‌ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತವೆ. ಓವರ್‌ಟೇಕ್‌ ಭರದಲ್ಲಿ ಸಾಗುವ ವಾಹನಗಳು ಗುಂಡಿಯ ಗಾತ್ರದ ಅರಿವಿಲ್ಲದೆ ವೇಗವನ್ನು ತಗ್ಗಿಸದೆ ವಾಹನ ಚಲಾಯಿಸುತ್ತಾರೆ. ಈ ವೇಳೆ ನಿಯಂತ್ರಣ ತಪ್ಪಿ ಕೆಲವರು ಬಿದ್ದ ಘಟನೆಗಳು ನಡೆದಿದೆ. ರಾತ್ರಿವೇಳೆ ಇಲ್ಲಿನ ವಾಹನ ಚಾಲನೆ ಮತ್ತಷ್ಟು ಅಪಾಯಕಾರಿಯಾಗಿದೆ. ತಾತ್ಕಾಲಿಕ ನೆಲೆಯಲ್ಲಿಯಾದರೂ ರಸ್ತೆ ಬದಿಯ ಗುಂಡಿ ಮುಚ್ಚುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ದ್ವಿಚಕ್ರವಾಹನ ಸವಾರರು ಸ್ವಲ್ಪಮಟ್ಟಿನ ಅಜಾಗರೂಕತೆ ತೋರಿದರೂ ಅಪಘಾತ ಕಟ್ಟಿಟ್ಟ ಬುತ್ತಿ ಎಂಬಂತಿದೆ. ಈಗಾಗಲೆ ಕೆಲವು ಈ ಗುಂಡಿ ಅವ್ಯವಸ್ಥೆಯಿಂದ ಬಿದ್ದು ಪೆಟ್ಟು ಮಾಡಿಕೊಂಡ ಘಟನೆಗಳು ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಸ್‌ ನಿಲ್ದಾಣದ ಎದುರು ಬಸ್‌ ಗಳನ್ನು ನಿಲುಗಡೆ ಮಾಡುವಂತೆ ಪೊಲೀಸ್‌ ಇಲಾಖೆ ಕ್ರಮ ತೆಗೆದುಕೊಳ್ಳಬೇಕು. ಅಪಾಯಕಾರಿ ಗುಂಡಿಗಳನ್ನು ಮುಚ್ಚಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ನಗರಸಭೆ, ಸಂಬಂಧಪಟ್ಟ ಇಲಾಖೆ ಮುಂದಾಗಬೇಕು ಎಂದು ನಾಗರಿಕರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.