Malpe -ಕಲಾಡಿ: ರಸ್ತೆಯೇ ಮಾಯ, ಎಲ್ಲವೂ ಹೊಂಡಮಯ!

ಶೀಘ್ರ ದುರಸ್ತಿಗೆ ಸಾರ್ವಜನಿಕರ ಆಗ್ರಹ

Team Udayavani, Aug 6, 2024, 6:25 PM IST

Screenshot (122)

ಮಲ್ಪೆ: ರಾಷ್ಟ್ರೀಯ ಹೆದ್ದಾರಿ ಎಂದೆನಿಸಿದ ಮಲ್ಪೆ -ಕಲ್ಮಾಡಿ ಮುಖ್ಯ ರಸ್ತೆಯು ತೀರ ಹದಗೆಟ್ಟಿದ್ದು ಸುಗಮ ಸಂಚಾರಕ್ಕೆ ಅಸಾಧ್ಯವಾಗಿದೆ. ಇಲ್ಲಿನ ರಸ್ತೆಯನ್ನು ಶೀಘ್ರ ದುರಸ್ತಿಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮಲ್ಪೆಯಿಂದ ಕಲ್ಮಾಡಿಯವರೆಗೆ ಸುಮಾರು 1 ಕಿ.ಮೀ ರಸ್ತೆ ಒಂದೇ ಸವನೆ ಹೊಂಡದ ರಾಶಿಯೇ ಎದ್ದು ಕಾಣುತ್ತಿದ್ದು ದ್ವಿಚಕ್ರ ಸವಾರರು ಸಂಚರಿಸಲು ಹರಸಾಹಸ ಪಡಬೇಕಾಗಿದೆ. ಎಲ್ಲ ವಾಹನ ಚಾಲಕರಂತೂ ಆಡಳಿತ ವ್ಯವಸ್ಥೆಯ ಕುರಿತು ಗೊಣಗುತ್ತಲೇ ವಾಹನ ಓಡಿಸುತ್ತಿದ್ದಾರೆ. ಮಳೆಯ ಅರ್ಭಟಕ್ಕೆ ಈಗ ಸಂಪೂರ್ಣ ಹದಗೆಟ್ಟು ಬಾಯ್ದೆರೆದು ನಿಂತಿದೆ.

ಹದಗೆಟ್ಟ ರಸ್ತೆಯ ಸಮೀಪವೇ ಸರಕಾರಿ ಪದವಿ ಪೂರ್ವ ಕಾಲೇಜು, ಎರಡೂ ಪ್ರೌಢಶಾಲೆಗಳು ಇದ್ದು, ದಿನನಿತ್ಯ ಸಾವಿರಾರು ವಿದ್ಯಾರ್ಥಿಗಳು ಸಂಚಾರ ಮಾಡುತ್ತಾರೆ. ಮೀನುಗಾರಿಕೆ ಬಂದರು ಇರುವುದರಿಂದ ಪ್ರಸ್ತುತ ಋತು ಆರಂಭವಾಗಿದ್ದು ಇದೀಗ ಇಲ್ಲಿ ದಿನದ ಪೂರ್ತಿ ವಾಹನ ಸಂಚಾರ ಇರುತ್ತದೆ. ಈ ಎಲ್ಲ ವಾಹನಗಳು ಇದೇ ರಸ್ತೆಯಲ್ಲಿ ಪ್ರಯಾಸ ಪಟ್ಟು ಸಂಚಾರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಎಲ್ಲ ಕಡೆ ಹೊಂಡದ ರಾಶಿಯೇ ಇದ್ದು ವಾಹನ ಚಾಲಕರು ಸರ್ಕಸ್‌ ಮಾಡುತ್ತಲೇ ವಾಹನ ಚಲಾಯಿಸಬೇಕಾಗಿದೆ.
ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ನೀಡಿದರೂ ಏನೂ ಪ್ರಯೋಜನವಾಗಿಲ್ಲ. ಕೆಲವೇ ದಿನದ ಹಿಂದಷ್ಟೆ ಕೆಲವಡೆ ಕಾಟಚಾರಕ್ಕೆ ಎಂಬಂತೆ ಗುಂಡಿಗೆ ಸಿಮೆಂಟು ಮಿಶ್ರಿತ ಕಲ್ಲುಗಳನ್ನು ಸುರಿದು ತೇಪೆ ಹಚ್ಚುವ ಕಾರ್ಯ ಮಾಡಿದ್ದಾರೆ. ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕಲ್ಲು ಮಣ್ಣುಗಳೆಲ್ಲವೂ ಕೊಚ್ಚಿ ಹೋಗಿ ಪುನ್‌ ಅದೇ ಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟಿರುವ ರಸ್ತೆಯಿಂದ ಬೇಸತ್ತಿರುವ ಸಾರ್ವಜನಿಕರು ಆಡಳಿತ ವ್ಯವಸ್ಥೆಯ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಶೀಘ್ರದಲ್ಲಿ ರಸ್ತೆ ಸರಿ ಪಡಿಸದಿದ್ದಲ್ಲಿ ಪ್ರತಿಭಟನೆ ಎಚ್ಚರಿಕೆ ಯನ್ನು ನೀಡಿದ್ದಾರೆ ಎಂದು ಹೇಳುತ್ತಾರೆ ಮಲ್ಪೆಯ ಮಹೇಶ್‌ ಬಂಗೇರ.

ತುರ್ತು ಅಭಿವೃದ್ಧಿ ಕೈಗೊಳ್ಳಲಿ
ರಸ್ತೆ ವಿಸ್ತರೀಕರಣದ ಟೆಂಡರ್‌ ಪ್ರಕ್ರಿಯೆ ಪ್ರಾರಂಭವಾದ ವರ್ಷಗಳಿಂದ ಇಲ್ಲಿನ ರಸ್ತೆಗೆ ಸರಿಯಾಗಿ ಡಾಮರೀಕರಣವಾಗದೇ ಹೊಂಡ ಗುಂಡಿಗಳಿಂದ ಕೂಡಿದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಆತಂಕದಿಂದಲೇ ವಾಹನ ಚಲಾಯಿಸಬೇಕಾಗಿದೆ. ಘನ ವಾಹನಗಳು ದಟ್ಟವಾಗಿ ಸಂಚರಿಸುವ ಈ ಮಾರ್ಗದಲ್ಲಿ ದ್ವಿಚಕ್ರ ವಾಹನ ಸವಾರರು ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡೇ ಸಂಚರಿಸಬೇಕಾದಂತಹ ಅನಿವಾರ್ಯತೆ ಇದೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ಜನರ ಹಿತದೃಷ್ಟಿಯಿಂದ ತುರ್ತು ಅಭಿವೃದ್ಧಿಯನ್ನು ಕೈಗೊಳ್ಳಬೇಕಾಗಿದೆ.

– ಸುನೀಲ್‌ದಾಸ್‌ ಎಂ., ಮಲ್ಪೆ, ಸಸಿತೋಟ

ರಿಕ್ಷಾ ಬರಲು ಹಿಂದೇಟು

ಇಲ್ಲಿನ ವಾಹನ ಸಂಚಾರ ಬಿಡಿ ನಡೆದಾಡಲು ಪರದಾಡುವಂತಾಗಿದೆ. ಈ ರಸ್ತೆ ತೀರ ಹದಗೆಟ್ಟಿರುವುದರಿಂದ ರಿಕ್ಷಾ ಚಾಲಕರು ಬಾಡಿಗೆಗೆ ಬರಲು ಹಿಂದೇಟು ಹಾಕುತಿದ್ದಾರೆ. ಮಲ್ಪೆ ರಿಕ್ಷಾ ಉಡುಪಿ ಬಾಡಿಗೆಗೆ, ಉಡುಪಿಯ ರಿಕ್ಷಾ ಮಲ್ಪೆಗೆ ಬಾಡಿಗೆಗೆ ಬರಲು ಈ ರಸ್ತೆಯಲ್ಲಿ ಒಪ್ಪುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಮಲ್ಪೆ -ಕಲ್ಮಾಡಿ ದಾಟುವ ವರೆಗೂ ಆತಂಕ

ಕೆಲವು ವರ್ಷಗಳ ಹಿಂದೆ ಕಲ್ಮಾಡಿ ರಸ್ತೆಯ ಕಾಂಕ್ರೀ ಟಿಕರಣ ನಡೆದಾಗ, ಎರಡೂ ಬದಿಯಲ್ಲಿ ಡಾಮರೀಕರಣ ಮಾಡುವ ಬದಲು ಇಂಟರ್‌ಲಾಕ್‌ಅನ್ನು ಅಳವಡಿಸಲಾಗಿತ್ತು. ಇದು ತಕ್ಕಮಟ್ಟಿಗೆ ರಸ್ತೆಯ ಸಮತಟ್ಟು ಸರಿಹೊಂದುವಂತೆ ಮಾಡಿದರೂ, ದ್ವಿಚಕ್ರ ಸವಾರರಿಗೆ ಕಂಟಕಪ್ರಾಯವಾಯಿತು. ಮೀನು ತುಂಬಿದ ಲಾರಿಗಳು ಬೇಕಾಬಿಟ್ಟಿಯಾಗಿ ನೀರನ್ನು ಚೆಲ್ಲಿಕೊಂಡು ಹೋದ ಕಾರಣ ಹಲವಾರು ದ್ವಿಚಕ್ರ ವಾಹನ ಸವಾರರು ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಇದೀಗ ಹಾಕಿದ ಇಂಟರ್‌ಲಾಕ್‌ ಎದ್ದು ಹಾಳಾಗಿ ವರ್ಷಗಳೆ ಕಳೆದವು. ದ್ವಿಚಕ್ರ ವಾಹನ ಸವಾರರು ಕಲ್ಮಾಡಿ ದಾಟುವವರೆಗೆ ಆತಂಕದಿಂದಲೇ ಇರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸುತ್ತಾರೆ ಮಲ್ಪೆಯ ಸುನೀಲ್‌ದಾಸ್‌.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.