Davanagere; ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ
Team Udayavani, Aug 6, 2024, 8:46 PM IST
ದಾವಣಗೆರೆ: ಪ್ರಶ್ನೆಗಳಿಗೆ ಉತ್ತರ ಬರೆಯಲು ಬಂದ ವಿದ್ಯಾರ್ಥಿಗಳ ಕೈಗೆ ಉತ್ತರ ಪತ್ರಿಕೆಯೇ ಸಿಕ್ಕರೆ ಹೇಗೆ!
ಇಂಥದೊಂದು ಎಡವಟ್ಟು ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಇ-ಕಾಮರ್ಸ್ ಪರೀಕ್ಷೆ ವೇಳೆ ಕಂಡು ಬಂದಿದೆ.
ವಾಣಿಜ್ಯ ವಿಭಾಗದ ಮುಕ್ತ ಆಯ್ಕೆ ಇ-ಕಾಮರ್ಸ್ ಪರೀಕ್ಷೆ ಮಂಗಳವಾರ ನಿಗದಿಯಾಗಿತ್ತು. ನಿಯಮದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಬಂದಿರುವ ಪ್ರಶ್ನೆ ಪತ್ರಿಕೆ ಬಂಡಲ್ ತೆರೆದು ವಿದ್ಯಾರ್ಥಿಗಳ ಕೈಗೆ ನೀಡಿದ್ದಾರೆ. ಇದರಲ್ಲಿ ಪ್ರಶ್ನೆ ಪತ್ರಿಕೆ ಬದಲಾಗಿ ಉತ್ತರ ಪತ್ರಿಕೆ ಇರುವುದು ವಿದ್ಯಾರ್ಥಿಗಳ ಕೈಗೆ ಸಿಕ್ಕ ಮೇಲೆಯೇ ಗೊತ್ತಾಗಿದೆ. ಇನ್ನು ಕೆಲವು ಕಾಲೇಜುಗಳಲ್ಲಿ ಮೇಲ್ವಿಚಾರಕರು ಪತ್ರಿಕೆ ಹಂಚುವ ಮೊದಲೇ ಗುರುತಿಸಿ, ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮುದ್ರಿತ ಉತ್ತರ ಪತ್ರಿಕೆ ಹಂಚಿಕೆಯಾದ ಪ್ರಮಾದ ಗೊತ್ತಾಗುತ್ತಿದ್ದಂತೆ ದಾ.ವಿ.ವಿ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ. ದಾವಣಗೆರೆ ವಿವಿ ವ್ಯಾಪ್ತಿಯ ಕಾಲೇಜಗಳಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಿಷಯ ಆಯ್ಕೆ ಮಾಡಿಕೊಂಡಿದ್ದು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿತ್ತು.
ಪ್ರಶ್ನೆ ಪತ್ರಿಕೆ ಬದಲಾಗಿ ಮುದ್ರಿತ ಉತ್ತರ ಪತ್ರಿಕೆ ಬಂಡಲ್ ಪರೀಕ್ಷಾ ಕೇಂದ್ರಕ್ಕೆ ಹೇಗೆ ಬಂದಿತು. ಇದು ಯಾರ ಪ್ರಮಾದದಿಂದ ಆಗಿದೆ ಎಂಬುದರ ಬಗ್ಗೆ ವಿವಿ ತನಿಖೆಗೆ ಮುಂದಾಗಿದ್ದು ಸದ್ಯ ಪರೀಕ್ಷೆಯನ್ನು ಮುಂದೂಡುವ ನಿರ್ಧಾರ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು
ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್ ಹಬ್- ಜಿ.ಬಿ. ವಿನಯ್ ಕುಮಾರ್
Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್: ರೇಣು
Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ
Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.