Karkala: ಬೈಕ್ ಅಪಘಾತ: ಯುವ ಉದ್ಯಮಿ ಸಾವು
Team Udayavani, Aug 6, 2024, 8:02 PM IST
ಕಾರ್ಕಳ: ಮಿಯ್ನಾರು ಬಳಿಯ ನಲ್ಲೂರು ಬಸದಿ ತಿರುವಿನಲ್ಲಿ ಸಂಭವಿಸಿದ ಬೈಕ್-ಟೆಂಪೋ ನಡುವಿನ ಅಪಘಾತದಲ್ಲಿ ಯುವ ಉದ್ಯಮಿ ಕಾಶಿನಾಥ್ (38) ಅವರು ಮೃತಪಟ್ಟಿರುವ ಘಟನೆ ಮಂಗಳವಾರ(ಆ.6) ನಡೆದಿದೆ..
ಕಲ್ಯಾದ ಹಾಳೆಕಟ್ಟೆಯಲ್ಲಿ ಸಲೂನ್ ಅಂಗಡಿ ಹೊಂದಿದ್ದ ಅವರು ಆ. 5ರಂದು ರಾತ್ರಿ ಕೆಲಸ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಸದಿ ತಿರುವಿನಲ್ಲಿ ಮನೆ ಕಡೆಗೆ ಬೈಕ್ ತಿರುಗಿಸುವಾಗ ಎದುರಿನಿಂದ ವೇಗವಾಗಿ ಬಂದ ಟೆಂಪೋವೊಂದು ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಶಿನಾಥ್ ಅವರನ್ನು ಕೂಡಲೇ ಕಾರ್ಕಳದ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಕಲ್ಯಾ ಹಾಳೆಕಟ್ಟೆಯ ಚೈತನ್ಯ ಮಿತ್ರ ಮಂಡಳಿಯಲ್ಲಿ ಅಧ್ಯಕ್ಷರಾಗಿ ಕಾರ್ಯರ್ನಿಹಿಸಿದ್ದ ಅವರು ಅವಿವಾಹಿತರಾಗಿದ್ದು, ತಾಯಿ ಮತ್ತು ಸಹೋದರರಿಬ್ಬರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.