Peruvayi : ಆಟೋರಿಕ್ಷಾ-ಬೈಕ್ ಢಿಕ್ಕಿ : ಮೂವರಿಗೆ ಗಾಯ
Team Udayavani, Aug 6, 2024, 9:01 PM IST
ವಿಟ್ಲ: ಪೆರುವಾಯಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಆಟೋರಿಕ್ಷಾ-ಬೈಕ್ ಢಿಕ್ಕಿಯಾಗಿ ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ(ಆ.6) ನಡೆದಿದೆ.
ಅಪಘಾತದಲ್ಲಿ ಬೋಳಂತೂರು ಗ್ರಾಮದ ನಿವಾಸಿಗಳಾದ ರುಕಿಯಾ, ಆಸಿಯ ಮರಿಯಮ್ಮ, ಬಶೀರ್ ಗಾಯಗೊಂಡಿದ್ದು,ಗಾಯಾಳುಗಳನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸೇರ್ಪಡೆಗೊಳಿಸಲಾಗಿದೆ.
ಬೋಳಂತೂರಿನಿಂದ ಪೆರುವಾಯಿಗೆ ಈ ಮೂವರನ್ನು ರಿಕ್ಷಾದಲ್ಲಿ ಕುಳ್ಳಿರಿಸಿ ಚಾಲಕ ನವಾಜ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಸಂದರ್ಭ ಪೆರುವಾಯಿಯಲ್ಲಿ ದ್ವಿಚಕ್ರ ವಾಹನ ಸವಾರ ಗಣೇಶ್ ಅವರು ರಿಕ್ಷಾಕ್ಕೆ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸದ್ಯ ಈ ಕುರಿತಂತೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ಗೆ ಟಿಪ್ಪರ್ ಢಿಕ್ಕಿ : ಸವಾರನಿಗೆ ಗಾಯ
ಪುಣಚ ಗ್ರಾಮದ ದೇವಸ್ಯ ಎಂಬಲ್ಲಿ ಬೈಕ್ಗೆ ಟಿಪ್ಪರ್ ಲಾರಿ ಢಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಮಂಗಳವಾರ(ಆ.6) ನಡೆದಿದೆ. ಅಪಘಾತದಲ್ಲಿ ಸೀತಾರಾಮ ಕೆ.(21) ಅವರು ಗಾಯಗೊಂಡವರು.
ಪುಣಚ ಗ್ರಾಮದ ಕೊಲ್ಲಪದವು ಬೈರಿಕಟ್ಟೆ ಎಂಬಲ್ಲಿಂದ ಪುತ್ತೂರಿಗೆ ಹೊರಟ ಸೀತಾರಾಮ ಅವರ ಬೈಕ್ಗೆ ಪರಿಯಾಲ್ತಡ್ಕದಿಂದ ಬಂದ ಟಿಪ್ಪರ್ ಲಾರಿ ದೇವಸ್ಯದಲ್ಲಿ ಢಿಕ್ಕಿ ಹೊಡೆದಿದೆ. ಬೈಕ್ ಸವಾರ ಅವರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯೇ ಈ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಸದ್ಯ ಈ ಕುರಿತಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು
Audio controversy: ಬಿ.ಸಿ.ರೋಡ್: ಉದ್ವಿಗ್ನಗೊಂಡು ತಿಳಿಯಾದ ಪರಿಸ್ಥಿತಿ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.