Padubidri: ಟೋಲ್ ಸಿಬ್ಬಂದಿ ಮೇಲೆ ಹಿಗ್ಗಾಮುಗ್ಗಾ ಹಲ್ಲೆ: ಕಾರು ಮಾಲಕನ ವಿರುದ್ಧ ಪ್ರಕರಣ
Team Udayavani, Aug 7, 2024, 7:45 AM IST
ಪಡುಬಿದ್ರಿ: ಹೆಜಮಾಡಿ ಹಳೇ ಎಂಬಿಸಿ ರಸ್ತೆ ಟೋಲ್ ಪ್ಲಾಝಾದಲ್ಲಿ ಹೆದ್ದಾರಿ ಟೋಲ್ ಪಾವತಿಸದೇ ತನ್ನ ಕಾರನ್ನು ನುಗ್ಗಿಸಿದ್ದರೂ ಕಾರನ್ನು ತಡೆದ ಟೋಲ್ ಸಿಬಂದಿ ದೀಕ್ಷಿತ್ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿ ಪರಾರಿಯಾದ ಕಾರು ಮಾಲಕನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಆ. 6ರಂದು ಪ್ರಕರಣ ದಾಖಲಾಗಿದೆ.
ಬಂಟ್ವಾಳ ಮೂಲದ ಸಲೀಂ ಸುಂಕ ಪಾವತಿಸದೇ ತನ್ನ ಕೆಂಪು ಬಣ್ಣದ ಕಾರನ್ನು ಟೋಲ್ ಗೇಟಲ್ಲಿ ಬೆಳಿಗ್ಗಿನ 9-20ರ ಸುಮಾರಿಗೆ ನುಗ್ಗಿಸಿದ್ದ. ಅದನ್ನು ತಡೆದು ನಿಲ್ಲಿಸಿದ್ದ ಟೋಲ್ ಸಿಬ್ಬಂದಿ ಮೇಲೆ ಕಾರನ್ನು ಅಪಾಯಕಾರಿಯಾಗಿ ಚಲಾಯಿಸಿ ಮುಂದಕ್ಕೊಯ್ದು ನಿಲ್ಲಿಸಿ ಹಿಂದೆ ಮರಳಿ ಬಂದ ಆರೋಪಿಯು ಟೋಲ್ ಸಿಬಂದಿ ದೀಕ್ಷಿತ್ ಮೇಲೆ ಕೈಯಿಂದ ಹಾಗೂ ಕೊಡೆಯಿಂದ ಹಲ್ಲೆ ನಡೆಸಿ, ಬೆದರಿಸಿದ ವೀಡಿಯೋ ಜಾಲತಾಣಗಳಲ್ಲೂ ವೈರಲ್ ಆಗಿದೆ.
ಈ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತಾದ ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣ ಆರೋಪಿಯ ಜಾಡು ಹಿಡಿದು ಉಡುಪಿಯತ್ತ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.