Bangladesh Unrest; ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು
Team Udayavani, Aug 6, 2024, 9:47 PM IST
ಬೆಳಗಾವಿ: ಗಲಭೆ ಪೀಡಿತ ಬಾಂಗ್ಲಾದೇಶದಿಂದ 25 ವೈದ್ಯಕೀಯ ವಿದ್ಯಾರ್ಥಿಗಳು ಪಾರಾಗಿ ಬೆಳಗಾವಿಗೆ ಆಗಮಿಸಿದ್ದಾರೆ.
ನಾಲ್ಕು ದಿನಗಳ ಹಿಂದೆಯೇ ಈ ಎಲ್ಲ ವಿದ್ಯಾರ್ಥಿಗಳು ಬೆಳಗಾವಿಗೆ ಬಂದಿದ್ದಾರೆ. ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೆರವಿನಿಂದ ಸುರಕ್ಷಿತವಾಗಿ ಬೆಳಗಾವಿಗೆ ಬಂದಿದ್ದಾರೆ.
ಬಾಂಗ್ಲಾದಿಂದ ಬೆಳಗಾವಿಗೆ ಬಂದ ವೈದ್ಯಕೀಯ ವಿದ್ಯಾರ್ಥಿ ನೇಹಲ್ ಸವಣೂರು ಮಾಧ್ಯಮದವರೊಂದಿಗೆ ಮಾತನಾಡಿ, ಬಾಂಗ್ಲಾದಲ್ಲಿ ನಾನೂ ಭಯಭೀತನಾಗಿದ್ದೆ. ಈಗಿನ ಪರಿಸ್ಥಿತಿ ಇನ್ನೂ ಭಯಂಕರ ಇದೆ. ಹೇಗೋ ಬಚಾವ್ ಆಗಿ ಗಲಭೆ ಪೀಡಿತ ದೇಶದಿಂದ ಬಂದಿದ್ದೇವೆ. ಈ ಸಂದರ್ಭದಲ್ಲಿ ನಾವು ಬಾಂಗ್ಲಾದಲ್ಲಿಯೇ ಇದ್ದಿದ್ದರೆ ಕೊಠಡಿಯಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದರು ಎಂದು ಬಾಂಗ್ಲಾದಲ್ಲಿನ ಹಿಂಸಾಚಾರದ ಭಯಾನಕ ಘಟನೆಯನ್ನು ನೇಹಲ್ ನೆನಪಿಸಿಕೊಂಡರು.
ಗಲಭೆ ಪೀಡಿತ ಬಾಂಗ್ಲಾದೇಶದಲ್ಲಿ ಸಾಕಷ್ಟು ನೋವು ಅನುಭವಿಸಿದ್ದೇವೆ. ಎಲ್ಲ ಕಡೆಯೂ ಕರ್ಪ್ಯೂ ಇತ್ತು, ಊಟಕ್ಕೂ ಪರದಾಡಬೇಕಾಯಿತು. ಎರಡೇ ನಿಮಿಷದಲ್ಲಿ ಹೊರಗೆ ಹೋಗಿ ತಿನ್ನಲು ಏನಾದರೂ ತಂದು ರೂಮ್ ಸೇರುತ್ತಿದ್ದೇವು. ಮಹಿಳಾ ಹಾಸ್ಟೆಲ್ ಹತ್ತಿರ ಬಹಳ ಸಮಸ್ಯೆ ಇತ್ತು. ಅಲ್ಲಿ ಊಟವೂ ಇರಲಿಲ್ಲ. ಹಿಂದೂಗಳನ್ನೇ ಬಾಂಗ್ಲಾಗರು ಟಾರ್ಗೆಟ್ ಮಾಡಲು ಶುರು ಮಾಡಿದ್ದರು. ನೆಟ್ ವರ್ಕ್ ಇರಲಿಲ್ಲ, ಪೋಷಕರ ಜತೆಗೆ ಮಾತನಾಡಲೂ ಆಗಲಿಲ್ಲ ಎಂದು ನೋವು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ
Bengaluru: ಪೊಲೀಸ್ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು
ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್
Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಇನ್ನಷ್ಟು ಕಠಿನ! 3 ನೀಲನಕ್ಷೆ ಪ್ರಕಟಿಸಿದ ಮಂಡಳಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.