Paris Olympics; ವಿನೀಶ್‌ ಫೋಗಾಟ್‌ ಐತಿಹಾಸಿಕ ಸಾಧನೆ; ಫೈನಲ್‌ ಪ್ರವೇಶಿಸಿದ ಗಟ್ಟಿಗಿತ್ತಿ


Team Udayavani, Aug 6, 2024, 10:49 PM IST

Paris Olympics; ವಿನೀಶ್‌ ಫೋಗಾಟ್‌ ಐತಿಹಾಸಿಕ ಸಾಧನೆ; ಫೈನಲ್‌ ಪ್ರವೇಶಿಸಿದ ಗಟ್ಟಿಗಿತ್ತಿ

ಪ್ಯಾರಿಸ್‌: ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ (Paris Games) ಮೂರು ಕಂಚು ಗೆದ್ದಿರುವ ಭಾರತಕ್ಕೆ ಪದಕದ ಬಣ್ಣ ಬದಲಾಗುವ ಕಾಲ ಬಂದಿದೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಭಾರತದ ವಿನೀಶ್‌ ಫೋಗಾಟ್‌ (Vinesh Phogat)ಅವರು ಫೈನಲ್‌ ಪ್ರವೇಶಿಸಿದ್ದಾರೆ.

ಮಂಗಳವಾರ (ಆ.06) ನಡೆದ ಸೆಮಿ ಫೈನಲ್‌ ಪಂದ್ಯದಲ್ಲಿ ಅವರು ಕ್ಯೂಬಾದ ಗುಸ್ಮನ್‌ ಲೋಪೆಜ್‌ ಅವರನ್ನು 5-0 ಅಂತರದಿಂದ ಸೋಲಿಸಿದರು. ಈ ಮೂಲಕ ಒಲಿಂಪಿಕ್‌ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಸಾಧನೆ ಮಾಡಿದ್ದಾರೆ.

ಮಂಗಳವಾರ ಇದಕ್ಕೂ ಮೊದಲು ನಡೆದ ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ಹಾಲಿ ಚಾಂಪಿಯನ್‌, ವಿಶ್ವದ ನಂ.1 ರೆಸ್ಲರ್‌, ಜಪಾನ್‌ನ ಯೂಯಿ ಸುಸಾಕಿ ವಿರುದ್ಧ ಗೆದ್ದು ಅಚ್ಚರಿಗೊಳಿಸಿದರು. ಕ್ವಾರ್ಟರ್‌ ಫೈನಲ್‌ನಲ್ಲೂ ಆಕ್ರಮಣ ಮುಂದುವರಿಸಿದ ವಿನೇಶ್‌, ಉಕ್ರೇನ್‌ನ ಒಕ್ಸಾನಾ ಲಿವೆಚ್‌ ವಿರುದ್ಧ ಗೆದ್ದು ಸೆಮಿಫೈನಲ್‌ಗೇರಿದರು.

ಮಂಗಳವಾರದ ಮೊದಲ ಪಂದ್ಯದಲ್ಲೇ 29 ವರ್ಷದ ವಿನೇಶ್‌ ಪದಕದ ಭರವಸೆ ಮೂಡಿಸುವಂಥ ಪ್ರದರ್ಶನ ನೀಡಿದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬಂಗಾರ ಗೆದ್ದಿದ್ದ ಜಪಾನ್‌ನ ಯುಯಿ ಸುಸಾಕಿ ವಿರುದ್ಧ ಬಿಗಿ ಪಟ್ಟು ಹಾಕಿದ ವಿನೇಶ್‌ 3-2 ಅಂತರದಿಂದ ಗೆದ್ದರು. ಇಲ್ಲಿಗೆ ಜಪಾನ್‌ ಒಲಿಷ್ಠೆ ಸುಸಾಕಿಯ ವಿಶೇಷ ದಾಖಲೆಯೊಂದು ಮುರಿದುಬಿದ್ದಿದೆ. ತನ್ನ ವೃತ್ತಿ ಜೀವನದಲ್ಲಿ ಸತತ 82 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದಿದ್ದ ಸವ್ಯಸಾಚಿ ಸುಸಾಕಿಗೆ ವಿನೇಶ್‌ ಮೊದಲ ಸೋಲುಣಿಸಿದರು!

ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲೂ ವಿನೇಶ್‌ ಆಕ್ರಮಣ ಮುಂದುವರಿಯಿತು. ಉಕ್ರೇನಿನ ಒಕ್ಸಾನಾ ಲಿವಚ್‌ ವಿರುದ್ಧ 7-5 ಅಂತರದಿಂದ ಗೆದ್ದರು. ಕಳೆದ ಟೋಕಿಯೊ ಒಲಿಂಪಿಕ್ಸ್‌ ವೇಳೆ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶ್‌ ಈ ಬಾರಿ ತನ್ನ ತೂಕದ ವಿಭಾಗವನ್ನು 50 ಕೆಜಿಗೆ ಇಳಿಸಿಕೊಂಡಿದ್ದಾರೆ.

ಜನಪ್ರಿಯ ಬಾಲಿವುಡ್‌ ಚಿತ್ರ ದಂಗಲ್‌ನ ಫೋಗಾಟ್‌ ಕುಟುಂಬಕ್ಕೆ ವಿನೇಶ್‌ ಫೋಗಾಟ್‌ ಸೇರಿದ್ದಾರೆ. ಮಹಾವೀರ್‌ ಫೊಗಾಟ್‌ ಅವರ ತಮ್ಮನ ಮಗಳು ವಿನೇಶ್‌. ಕಾಮನ್‌ವೆಲ್ತ್‌ ಗೇಮ್ಸ್‌ ಮತ್ತು ಏಷ್ಯನ್‌ ಗೇಮ್ಸ್‌ನಲ್ಲಿ ಬಂಗಾರ ಗೆದ್ದ ಮೊದಲ ಭಾರತೀಯ ಕುಸ್ತಿಪಟು ಎಂಬ ದಾಖಲೆ ಹೊಂದಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ 1, ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ 3 ಮತ್ತು ಏಷ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ 1 ಪದಕ ಗೆದ್ದ ಸಾಧನೆ ವಿನೇಶ್‌ ಅವರದ್ದಾಗಿದೆ.

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ccrr

Cricket ದಾಖಲೆಯ ಹೊಸ್ತಿಲಲ್ಲಿ ಭಾರತ-ಬಾಂಗ್ಲಾ ಸರಣಿ

K L RAhul

KL Rahul ಮತ್ತೆ ಆರ್‌ಸಿಬಿಗೆ ? ವೀಡಿಯೊ ವೈರಲ್‌

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.