Wild Elephant ಮಲೆನಾಡಲ್ಲಿ ಮತ್ತೆ ಹೆಚ್ಚಾದ ಕಾಡಾನೆ ಕಾಟ
Team Udayavani, Aug 7, 2024, 12:20 AM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಕಾಟ ಹೆಚ್ಚುತ್ತಿದೆ. ಹಿಂಡು ಹಿಂಡು ಕಾಡಾನೆಗಳು ಕಾಫಿ ತೋಟಗಳಿಗೆ ಲಗ್ಗೆ ಇಟ್ಟು ಬೆಳೆ ಹಾಳು ಮಾಡುತ್ತಿವೆ.
ಹೀಗಾಗಿ ಜನರು ಜೀವಭಯದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಮಲೆನಾಡು ಭಾಗದಲ್ಲಿ ಬೆಳೆ ಹಾನಿಯಾಗಿದ್ದರೆ ಈಗ ಕಾಡಾನೆಗಳ ಹಾವಳಿಯಿಂದ ಬೆಳೆ ನಷ್ಟ ಉಂಟಾಗುತ್ತಿದೆ.
ಮೂಡಿಗೆರೆ ತಾಲೂಕಿನ ಸಾಲ್ಮರ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆಯೇ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವುದನ್ನು ಅಲ್ಲೇ ಇದ್ದವರು ಮೊಬೈಲ್ನಲ್ಲಿ ವೀಡಿಯೋ ಮಾಡಿದ್ದಾರೆ.
ಪ್ರತಿನಿತ್ಯ ಒಂದು ಕಾಫಿ ತೋಟದಿಂದ ಮತ್ತೂಂದು ಕಾಫಿ ತೋಟಕ್ಕೆ ಲಗ್ಗೆ ಇಡುತ್ತಿವೆ. ಹೊಸಪುರ, ಕಸ್ಕೆಬೈಲು, ಜಿ. ಹೊಸಳ್ಳಿ ಗ್ರಾಮದ ಸುತ್ತಮುತ್ತಲ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿದ್ದು ತೋಟದ ಮಾಲಕರು ನಷ್ಟ ಅನುಭವಿಸುತ್ತಿದ್ದಾರೆ.
ಕಾಡಾನೆಗಳು ಈ ಭಾಗದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದು ವಾಹನ ಸವಾರರು, ಕಾಫಿತೋಟಕ್ಕೆ ತೆರಳುವ ಕಾರ್ಮಿಕರು ತೋಟಗಳಿಗೆ ತೆರಳಲು ಭಯ ಪಡುತ್ತಿದ್ದಾರೆ.
ಯಾವುದೇ ಅನಾಹುತ ಸಂಭವಿಸುವ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬಂದಿ ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟಲು ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.