BJP-JDS Padayathre; ಕೇವಲ 16 ತಿಂಗಳಲ್ಲಿ ರಾಜ್ಯಕ್ಕೆ ದುಸ್ಥಿತಿ: ಬಿ.ವೈ. ವಿಜಯೇಂದ್ರ ಟೀಕೆ

ರಾಜ್ಯ ಕಾಂಗ್ರೆಸ್‌ ಸರಕಾರವನ್ನು ಬುಡ ಸಮೇತ ಕಿತ್ತು ಹಾಕಲು ಯಾತ್ರೆ

Team Udayavani, Aug 7, 2024, 6:38 AM IST

BJP-Rally

ಮದ್ದೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಸಾಕಷ್ಟು ಭರವಸೆ ಕೊಟ್ಟಿದ್ದರು. ಕಳೆದ 16 ತಿಂಗಳಲ್ಲಿ ರಾಜ್ಯ ದುಸ್ಥಿತಿಗೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದರು.

ಬಿಜೆಪಿ-ಜೆಡಿಎಸ್‌ ಪಾದಯಾತ್ರೆ 4ನೇ ದಿನ ಮಂಗಳವಾರ ಮದ್ದೂರು ಪಟ್ಟಣ ತಲುಪಿದಾಗ ಶ್ರೀರಾಮ ಮಂದಿರ ಪಾರ್ಕ್‌ ಬಳಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ದಿನಬಳಕೆ ವಸ್ತುಗಳ ದರ ಏರಿಕೆಯಾಗಿದ್ದು ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡದೆ ಸಿದ್ದರಾಮಯ್ಯ ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತ ಜನರನ್ನು ವಂಚಿಸುತ್ತಿದ್ದಾರೆ ಎಂದರು.

ನಮಗೆ ಅಧಿಕಾರದ ದಾಹ ಇಲ್ಲ. ಭ್ರಷ್ಟ ಕಾಂಗ್ರೆಸ್‌ ಸರಕಾರವನ್ನು ಬುಡ ಸಮೇತ ಕಿತ್ತು ಹಾಕುವುದಕ್ಕಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ಸಾವಿರಾರು ಕೋಟಿ ರೂ. ರೈತರ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡದೆ ಅಯೋಗ್ಯ ಕಾಂಗ್ರೆಸ್‌ ಸರಕಾರ ಬಂದ ಮೇಲೆ 1.95 ಲಕ್ಷ ಕೋಟಿ ರೂ. ಸಾಲ ಮಾಡಿದೆ. ಎಸ್‌ಇಪಿ, ಟಿಎಸ್ಪಿ ಹಣ ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದೆ. ದಲಿತರ ಹೆಸರು ಹೇಳಿ ಅ ಧಿಕಾರಕ್ಕೆ ಬಂದ ಕಾಂಗ್ರೆಸ್‌ ದಲಿತರಿಗೆ ಅನ್ಯಾಯ ಮಾಡಿದ್ದು ಇಂತಹ ಭ್ರಷ್ಟ ಮುಖ್ಯಮಂತ್ರಿ ನಮಗೆ ಬೇಕಾ ಎಂದು ಪ್ರಶ್ನಿಸಿ ಇವರಿಂದ ಜನರಿಗೆ, ರೈತರಿಗೆ ಒಳ್ಳೆಯದಾಗುವುದಿಲ್ಲ ಎಂದರು.

ಎಚ್‌ಡಿಕೆ ಸೇರಿ ಹಿರಿಯ ನಾಯಕರು ಗೈರು
ಮಂಡ್ಯ: ಮೈತ್ರಿ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸೇರಿ ಬಿಜೆಪಿ ಹಿರಿಯ ನಾಯಕರು ಗೈರು ಹಾಜರಾಗಿದ್ದರು. ಮಂಡ್ಯ ಜಿಲ್ಲೆಯ ಸಂಸದರಾಗಿ ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಜಿಲ್ಲೆಯಲ್ಲಿ ನಡೆಯುವ ಪಾದಯಾತ್ರೆಗೆ ಆಗಮಿಸಲಿದ್ದಾರೆ ಎಂದು ನಿರೀಕ್ಷಿಸ ಲಾಗಿತ್ತು. ವಿಪಕ್ಷದ ನಾಯಕ ಆರ್‌.ಅಶೋಕ್‌, ಮಾಜಿ ಸಚಿವ ಹಾಗೂ ಶಾಸಕ ಡಾ| ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ಕೆ.ಸಿ. ನಾರಾಯಣ ಗೌಡ ಹೊರತುಪಡಿಸಿದರೆ ಹಿರಿಯ ಬಿಜೆಪಿ ನಾಯಕರು ಭಾಗವಹಿಸಲಿಲ್ಲ.

ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ನಿಖಿಲ್‌
ಮದ್ದೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಭ್ರಷ್ಟಾಚಾರ, ಹಗರಣ, ಅಕ್ರಮಗಳಲ್ಲಿ ಮುಳುಗಿದೆ. ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಅಹಿಂದ ವರ್ಗದ ಮೇಲೆ ಕಾಳಜಿ ಇದ್ದರೆ ಹಾಗೂ ನೈತಿಕತೆ ಪದದ ಅರ್ಥ ಗೊತ್ತಿದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖೀಲ್‌ ಕುಮಾರಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ವಾಲೀ¾ಕಿ, ಮುಡಾ ಹಗರಣದಲ್ಲಿ ಹಣ ಲೂಟಿ ಮಾಡಲಾಗಿದೆ. ಕನ್ನಡಿಗರ ತೆರಿಗೆ ಹಣವನ್ನು ನುಂಗಿದ್ದಾರೆ. ಅದಕ್ಕಾಗಿ ಬಿಜೆಪಿ-ಜೆಡಿಎಸ್‌ ಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ಮಾಡಲಾಗುತ್ತಿದೆ ಎಂದರು.

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಎಚ್‌.ಡಿ.ಕುಮಾರಸ್ವಾಮಿ ಗೆದ್ದು ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದು ಇದಕ್ಕೆ ಮದ್ದೂರು ಜನರ ಆಶೀರ್ವಾದ ಇದೆ. ಕುಮಾರಸ್ವಾಮಿ ಅವರ ಅವ ಧಿ ಪೂರೈಸುವುದರೊಳಗೆ ಜಿಲ್ಲೆಯ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ಸೃಷ್ಟಿ ಮಾಡಲು ಚಿಂತನೆ ನಡೆಸುವ ಜತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕನಸು ಕಂಡಿದ್ದಾರೆ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.