MUDA Scam: ಸಿಎಂ ಪ್ರಾಸಿಕ್ಯೂಶನ್‌: ರಾಜ್ಯಪಾಲರ ನಡೆ ನಿಗೂಢ

ಮುಖ್ಯಮಂತ್ರಿಗಳಿಗೆ 2ನೇ ನೋಟಿಸೂ ಇಲ್ಲ, ಅಭಿಯೋಜನೆಗೂ ಅನುಮತಿ ಇಲ್ಲ

Team Udayavani, Aug 7, 2024, 6:35 AM IST

CM-governer

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಿದ್ದ ರಾಜ್ಯಪಾಲರ ನಡೆ ಈಗ ನಿಗೂಢವಾಗಿದೆ.

ಈ ಪ್ರಕರಣದಲ್ಲಿ ಮುಂದೆ ಯಾವ ಕ್ರಮ ಜರಗಿಸಲಿದ್ದಾರೆ ಎಂಬ ಕುತೂಹಲವಂತೂ ಇದ್ದೇ ಇದೆ. ಈ ಮಧ್ಯೆ ಸದ್ಯಕ್ಕೆ ಮತ್ತೂಂದು ನೋಟಿಸ್‌ ನೀಡುವುದಾಗಲೀ ಅಥವಾ ಅಭಿಯೋಜನೆಗೆ ಅನುಮತಿಯನ್ನಾಗಲೀ ಕೊಡದೆ ಕಾದು ನೋಡಲಿದ್ದಾರೆ ಎನ್ನಲಾಗಿದೆ.
ಕಳೆದ 1 ವಾರದಿಂದ ದಿಲ್ಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರಚಂದ್‌ ಗೆಹೊÉàಟ್‌ ಸೋಮವಾರ ರಾತ್ರಿ ಬೆಂಗಳೂರಿಗೆ ಮರಳಿದ್ದು, ತಾವು ಕೊಟ್ಟಿದ್ದ ನೋಟಿಸ್‌ಗೆ ರಾಜ್ಯ ಮಂತ್ರಿ ಪರಿಷತ್‌ ಸಭೆಯ ಶಿಫಾರಸುಗಳು ಹಾಗೂ ಸಿಎಂ ಸಿದ್ದರಾಮಯ್ಯರ ಉತ್ತರವನ್ನು ಪರಿಶೀಲಿಸಿದ್ದಾರೆ.

ಪ್ರಮುಖವಾಗಿ ಇದೊಂದು ಸುಳ್ಳು ದೂರಾಗಿದ್ದು, ದೂರುದಾರರ ಮೇಲೆಯೇ ಸಾಕಷ್ಟು ಆರೋಪಗಳಿವೆ. ಹೀಗಾಗಿ ಶೋಕಾಸ್‌ ನೋಟಿಸ್‌ ಹಿಂಪಡೆಯಬೇಕು, ಅಭಿಯೋಜನೆಗೆ ಅನುಮತಿ ನೀಡಬಾರದೆಂದು ಮಂತ್ರಿ ಪರಿಷತ್‌ ಸಭೆ ನಿರ್ಣಯ ಕೈಗೊಂಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಆ ನಿರ್ಣಯದ ಸಾರಾಂಶವನ್ನೇ ತಮ್ಮ ಉತ್ತರ ಎಂಬಂತೆ ರಾಜ್ಯಪಾಲರಿಗೆ ಕಳುಹಿಸಿದ್ದರು.
ಈ ನಡುವೆ ಮಂಗಳವಾರ ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿರುವ ದೂರುದಾರ ಅಬ್ರಹಾಂ, ತಮ್ಮ ವಿರುದ್ಧ ಮಂತ್ರಿ ಪರಿಷತ್‌ ಹೊರಿಸಿರುವ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ಸಿಎಂ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಮತ್ತೂಮ್ಮೆ ಮನವಿ ಮಾಡಿಕೊಂಡಿದ್ದಾರೆ.

ಸಾಲದ್ದಕ್ಕೆ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದು, ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿರುವುದಲ್ಲದೆ, ಜಿಲ್ಲಾಧಿಕಾರಿಯಿಂದ 15 ದಿನದಲ್ಲಿ ವರದಿ ಪಡೆದು ಸೂಕ್ತ ಕ್ರಮ ಜರಗಿಸುವಂತೆ ಕೋರಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿರುವ ರಾಜ್ಯಪಾಲರು, ಮುಂದೆ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಕುತೂಹಲವಿದೆ.

ಕಾದು ನೋಡಲು ಅಬ್ರಹಾಂ ನಿರ್ಧಾರ
ಮುಡಾ ಹಗರಣದ ವಿಚಾರಣೆಗಾಗಿ ನ್ಯಾ| ದೇಸಾಯಿ ಅವರ ಆಯೋಗವನ್ನು ಸರಕಾರ ರಚಿಸಿದ್ದು, ರಾಜ್ಯಪಾಲರ ನಡೆಯನ್ನು ಕಾದು ನೋಡಲು ನಿರ್ಧರಿಸಿರುವ ದೂರುದಾರ ಅಬ್ರಹಾಂ, ಮುಂದಿನ ದಿನಗಳಲ್ಲಿ ಸಿಬಿಐ ಅಥವಾ ಲೋಕಾಯುಕ್ತ ತನಿಖೆಗೆ ಕೋರುವ ಬಗ್ಗೆ ಕಾನೂನು ಸಲಹೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡದಿದ್ದರೂ ನೇರವಾಗಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲು ಕೇಂದ್ರದ ಕಾಯ್ದೆಗಳಲ್ಲಿ ಅವಕಾಶಗಳಿವೆಯೇ ಎಂಬುದರ ಪರಿಶೀಲನೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.