ವಿಗ್ರಹ ನಕಲಿ ಅಲ್ಲ ಎಂದು ಪ್ರಮಾಣ ಮಾಡಲಿ:ಮುನಿಯಾಲು ಉದಯಕುಮಾರ್‌ ಶೆಟ್ಟಿ ಸವಾಲು

ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ.

Team Udayavani, Aug 7, 2024, 10:10 AM IST

ವಿಗ್ರಹ ನಕಲಿ ಅಲ್ಲ ಎಂದು ಪ್ರಮಾಣ ಮಾಡಲಿ ಮುನಿಯಾಲು ಉದಯಕುಮಾರ್‌ ಶೆಟ್ಟಿ ಸವಾಲು

ಕಾರ್ಕಳ: ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮ ವಿಗ್ರಹ ನಕಲಿ ಅಲ್ಲ. ಅಸಲಿ ಕಂಚಿನದ್ದೆ ಎಂದು ದೇವಸ್ಥಾನ, ದೈವಸ್ಥಾನ ಅಥವಾ ಪರಶುರಾಮ ಬೆಟ್ಟದ ಮೇಲೆ ಎಲ್ಲಿ ಬೇಕಾದರೂ ಶಾಸಕ ವಿ. ಸುನಿಲ್‌ಕುಮಾರ್‌ ಬಂದು ಪ್ರಮಾಣ ಮಾಡಲಿ ಎಂದು ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯಕುಮಾರ್‌ ಶೆಟ್ಟಿ ಹೇಳಿದರು.

ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ್ಕಳದ ಚರಿತ್ರೆಯಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಾಯಿ ಚಪಲಕ್ಕೆ ಮಾತನಾಡುವವರಿಗೆ ಉತ್ತರ ನೀಡುವುದು ಪ್ರಜಾಪ್ರಭುತ್ವದಲ್ಲಿ ಅನಿವಾರ್ಯ. ನಕಲಿ ಮೂರ್ತಿ ಸ್ಥಾಪಿಸಿ ಧರ್ಮದ ವಿಷಯದಲ್ಲಿ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದಾ ರೆ. ಆಗಿರುವ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಕೆಲವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ
ಏನೇನೋ ಮಾತನಾಡಿದ್ದಾರೆ. ನಾನು ಧರಿಸಿದ್ದ ಉಡುಗೆಯ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ಮುಂದೆ ನಾನು ಬೇಕಾದರೆ ಅವರಲ್ಲಿ ಯಾವ ರೀತಿಯ ಉಡುಗೆ ಧರಿಸಬೇಕೆಂದು ಕೇಳಿಯೇ ಉಡುತ್ತೇನೆ ಎಂದರು.

ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದು ಒಳ್ಳೆಯ ಸಾಮಾಜಿಕ ಕಾರ್ಯ ನಡೆಸಲು. ಸುನಿಲ್‌ ಕುಮಾರ್‌ ಅವರ ಹಾಗೆ ಅಧಿಕಾರ, ದುಡ್ಡು ಗಳಿಸಲು ಅಲ್ಲ. ಇವರು ಕಾಂಗ್ರೆಸ್‌ನವರಿಗೆ ಮಾಡಿದ ಅನ್ಯಾಯವನ್ನು ಎಳೆಎಳೆಯಾಗಿ ಹೇಳಬಲ್ಲೆ ಎಂದರು.

ಈಗ ಬಿಜೆಪಿಯವರ ಬಾಯಿಯಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ ಹಾಗೂ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಹೆಸರು ಬರುತ್ತಿರುವುದು ಒಳ್ಳೆಯ ವಿಷಯ. ಆದರೆ ಅದೇ ಚುನಾವಣೆಯ ಸಂದರ್ಭ ಅವರ ವಿರುದ್ಧ ಏನೇನೋ ಮಾತನಾಡಿರುವುದನ್ನು ಮರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಇಡೀ ಪ್ರತಿಮೆಯೇ ನಕಲಿ: ಶುಭದ ರಾವ್‌ ಕಾಂಗ್ರೆಸ್‌ ವಕ್ತಾರ ಶುಭದ ರಾವ್‌ ಮಾತನಾಡಿ, ಬೆಂಗಳೂರಿನಿಂದ ಪರಶುರಾಮನ ಮೂರ್ತಿಯ ಭಾಗಗಳನ್ನು ಪೊಲೀಸರು ವಶಕ್ಕೆ ಪಡೆದು ತಂದ ಬಳಿಕ ಇಡೀ ಪ್ರತಿಮೆಯೇ ನಕಲಿಯಾಗಿದೆ ಎಂದು
ಜಗಜ್ಜಾಹೀರಾಗಿದೆ. ಬೆಂಗಳೂರಿನಲ್ಲಿ ಪರಶುರಾಮನ ಮೂರ್ತಿಯ ಕಾಲು ಸೇರಿದಂತೆ ಸೊಂಟದ ಕೆಳಗಿನ ಎಲ್ಲ ಭಾಗಗಳು ದೊರೆತಿರುವುದರಿಂದ ಬೆಟ್ಟದ ಮೇಲೆ ಈಗ ಇರುವ ಭಾಗವೂ ನಕಲಿ ಎಂದು ಸಾಬೀತಾಗಿದೆ.

ಶಾಸಕರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಹೇಳಿದ್ದ ಸುಳ್ಳು ಜಗತ್ತಿಗೆ ಗೊತ್ತಾಗಿದೆ. ಕಾರ್ಕಳ ಶಾಸಕರು ಕ್ಷಮಾಪಣೆ ಕೇಳಿ ಪ್ರಾಯಶ್ಚಿತ್ತದ ಸಲುವಾಗಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದರು. ಬಿಪಿನ್‌ಚಂದ್ರಪಾಲ್‌ ನಕ್ರೆ, ವಿವೆಕಾನಂದ ಶೆಣೈ, ದಿನೇಶ್‌, ಅಜಿತ್‌ಕುಮಾರ್‌ ಹೆಗ್ಡೆ, ತಾರಾನಾಥ ಕೋಟ್ಯಾನ್‌, ದಿನೇಶ್‌ ಶೆಟ್ಟಿ, ಶಶಿಕಲಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.