Shirva: ಮರಗಳ ಅಪಾಯಕಾರಿ ರೆಂಬೆ ತೆರವು
Team Udayavani, Aug 7, 2024, 3:49 PM IST
ಶಿರ್ವ: ಕಟಪಾಡಿ- ಶಿರ್ವ-ಬೆಳ್ಮಣ್ ಮುಖ್ಯರಸ್ತೆಯ ಹನುಮಾನ್ ಟಯರ್ ಬಳಿ ರಸ್ತೆಗೆ ಚಾಚಿಕೊಂಡು ಅಪಾಯಕಾರಿಯಾಗಿ ಪರಿಣಮಿಸಿದ್ದ 2 ಬೃಹತ್ ಮಾವಿನ ಮರಗಳ ರೆಂಬೆ ಮತ್ತು ರಸ್ತೆ ಬದಿಯಲ್ಲಿದ್ದ ಇತರೆ ಅಪಾಯಕಾರಿ ಮರಗಳ ರೆಂಬೆಗಳನ್ನು ಮಂಗಳವಾರ ಅರಣ್ಯ ಇಲಾಖೆ ಕಡಿದು ತೆರವುಗೊಳಿಸಿದೆ.
ಪಡುಬಿದ್ರಿ ಉಪ ವಲಯ ಅರಣ್ಯಾಧಿಕಾರಿ ಜೀವನ್ದಾಸ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಅರಣ್ಯ ರಕ್ಷಕ ಚರಣ್ಜೋಗಿ ಅವರ ನೇತೃತ್ವದಲ್ಲಿ ಮಹಮ್ಮದ್ ಅಶ್ರಫ್ ಅವರ ಸಿಬಂದಿಯ ನೆರವಿನೊಂದಿಗೆ ಮರದ ರೆಂಬೆಗಳನ್ನು ಕಡಿದು ತೆರವುಗೊಳಿಸಲಾಯಿತು.
ಶಿರ್ವ ಮೆಸ್ಕಾಂ ಸೆಕ್ಷನ್ ಆಫೀಸರ್ ಮಂಜಪ್ಪ ಮತ್ತು ಸಿಬಂದಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿ ತಂತಿಗಳನ್ನು ಇಳಿಸಿ ಕೊಂಬೆ ಕಡಿಯಲು ಸಹಕರಿಸಿದರು.
ಮರಗಳು ಮುಖ್ಯ ರಸ್ತೆಬದಿಯಲ್ಲಿದ್ದ ಕಾರಣ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಉದಯವಾಣಿ ಸುದಿನ ವರದಿ
ವಾಹನ ನಿಬಿಡತೆಯಿಂದ ಕೂಡಿದ ಮುಖ್ಯರಸ್ತೆಬದಿಯಲ್ಲಿ ಮಾವಿನ ಮರಗಳು ಅಪಾಯಕಾರಿಯಾಗಿದ್ದು, ಗಾಳಿ ಮಳೆಗೆ ರಸ್ತೆಗೆ ಬೀಳುವ ಸಂಭವ ಇತ್ತು. ಅಪಾಯಕಾರಿ ಮರಗಳ ಬಗ್ಗೆ ಜು. 29ರಂದು ಉದಯವಾಣಿ ಸುದಿನ ವರದಿ ನೀಡಿತ್ತು. ವರದಿಗೆ ಕೂಡಲೇ ಸ್ಪಂದಿಸಿದ ಇಲಾಖೆ ಮರಗಳ ರೆಂಬೆಗಳನ್ನು ತೆರವುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.