ಹೇಮರಡ್ಡಿ ಮಲ್ಲಮ್ಮ ಆದರ್ಶ ಮಾದರಿ: ಸಚಿವ ಎಚ್‌.ಕೆ.ಪಾಟೀಲ


Team Udayavani, Aug 7, 2024, 2:17 PM IST

ಹೇಮರಡ್ಡಿ ಮಲ್ಲಮ್ಮ ಆದರ್ಶ ಮಾದರಿ: ಸಚಿವ ಎಚ್‌.ಕೆ.ಪಾಟೀಲ

ಉದಯವಾಣಿ ಸಮಾಚಾರ
ಮುಧೋಳ: ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ಆದರ್ಶವನ್ನು ಅಳವಡಿಸಿಕೊಂಡು ಎಲ್ಲರೂ ಜೀವನದಲ್ಲಿ ಯಶಸ್ಸು ಸಾಧಿಸೋಣ ಎಂದು ಕಾನೂನು ಮತ್ತು ಸಂಸದೀಯ ಮಂಡಳಿ ಸಚಿವ ಎಚ್‌.ಕೆ.ಪಾಟೀಲ ಹೇಳಿದರು.

ಮೆಟಗುಡ್ಡ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹಾಸಾ ದ್ವಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಹಾಗೂ ಹೇಮ-ವೇಮ ಸಭಾಭವನ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮೆಟಗುಡ್ಡ ಗ್ರಾಮದಲ್ಲಿ ಸಮಾಜದ ರಚನಾತ್ಮಕ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಹಿಂದಿನ ದಿನಮಾನದಲ್ಲಿ ಹೇಮರಡ್ಡಿ ಮಲ್ಲಮ್ಮನನ್ನು ಕೇವಲ ಜ.19ರಂದು ಮಾತ್ರ ನೆನಪಿಸಿಕೊಳ್ಳುತ್ತಿದ್ದರು. ಆದರೆ, ಇಂದಿನ ದಿನಮಾನದಲ್ಲಿ ಎರೆಹೊಸಳ್ಳಿ ಶ್ರೀಗಳ ಪರಿಶ್ರಮದಿಂದ ಪ್ರತಿಯೊಂದು ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮನ ದೇವಸ್ಥಾನ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿರುವುದರಿಂದ ಮನೆ ಮನೆಗೂ ಹೇಮರಡ್ಡಿ ಮಲ್ಲಮ್ಮನ ಮಹಿಮೆ ತಲುಪುವಂತಾಗಿದೆ ಎಂದರು.

ಮಹಾಯೋಗಿ ವೇಮನರು ಜಗತ್ತು ಕಂಡ ಮಹಾನ್‌ ಯೋಗಿಯಾಗಿದ್ದಾರೆ. ಅವರ ಸಾಹಿತ್ಯ, ಸಂದೇಶ, ಮಾರ್ಗದರ್ಶನದಲ್ಲಿ ಎಲ್ಲರೂ ಮುನ್ನಡೆದು ಸಮುದಾಯದ ಜತೆಗೆ ಇತರರಿಗೂ ಮಾದರಿಯಾಗಿ ಜೀವಿಸೋಣ, ಹೇಮರಡ್ಡಿ ಮಲ್ಲಮ್ಮನ ಪ್ರೇರಣೆಯಿಂದ ಮಹಾಯೋಗಿ ವೇಮನ ನಿರೂಪಿತರಾದರು. ನಮ್ಮತನವನ್ನು ನೆನಪಿಸುವ ವೃತ್ತಿಯನ್ನು ಮರೆಯದೆ
ನಮ್ಮ ಸಮಾಜ ಬೇರೆ-ಬೇರೆ ರಂಗದಲ್ಲಿಯೂ ವಿಶೇಷ ಸಾಧನೆ ಮಾಡಿದೆ ಎಂದರು.

ಅನ್ಯಾಯ ಕಂಡಲ್ಲಿ ಪ್ರತಿಭಟನೆಗೆ ನಮ್ಮ ಸಮುದಾಯ ಕೂಡಲೇ ಮುಂದಾಗುತ್ತದೆ. ವೇಮನರ ಚಿಂತನೆಯೊಂದಿಗೆ ನಾವೆಲ್ಲರೂ ಜೀವನದಲ್ಲಿ ಬದುಕಿ ಸುಂದರ ಜೀವನ ನಿರೂಪಿಸಿಕೊಳ್ಳೋಣ ಎಂದರು.

ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮಾತನಾಡಿ, ಕೌಟುಂಬಿಕ ಬದುಕಿನ ಚಿತ್ರಣ ನೀಡಿದ ಮಲ್ಲಮ್ಮ ಹಾಗೂ ವೇಮನರ ವಚನಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡರೆ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ. ವೇಮನರ ವಚನಗಳ ಅಧ್ಯಯನದಿಂದ ಜೀವನದಲ್ಲಿ ಬದಲಾವಣೆ ಸಾಧ್ಯ ಎಂದು ತಿಳಿಸಿದರು.

ಎಚ್‌.ಕೆ. ಪಾಟೀಲರ ಇಚ್ಛಾಶಕ್ತಿಯಿಂದಾಗಿ ಈ ಭಾಗದಲ್ಲಿ ಘಟಪ್ರಭಾ ಬಲದಂಡೆ ಕಾಲುವೆ ನಿರ್ಮಾಣಗೊಂಡು ಈ ಭಾಗ ನೀರಾವರಿಯಿಂದ ಹಸಿರುಮಯವಾಗಿದೆ ಎಂದು ಚ್‌.ಕೆ.ಪಾಟೀಲರ  ಕಾರ್ಯವೈಖರಿ ಕೊಂಡಾಡಿದರು.

ಸಾರ್ವಜನಿಕ ಜೀವನದಲ್ಲಿ ಜನಪರ ಕಾಳಜಿಯಿಂದ ಕಾರ್ಯನಿರ್ವಹಿಸಿದರೆ ನಮ್ಮ ಸೇವೆಗೆ ಒಂದು ಅರ್ಥಬರುತ್ತದೆ. ಹೇಮರಡ್ಡಿ ಮಲ್ಲಮ್ಮ ಶಾಲೆಗೆ 20 ಹಾಗೂ ಹೇಮರಡ್ಡಿ ಸಮುದಾಯ ಭವನಕ್ಕೆ 10 ಲಕ್ಷ ನೀಡುವುದಾಗಿ ಭರವಸೆ ನೀಡಿದರು.

ಸಾಮರಸ್ಯತೆಯನ್ನು ಮೈಗೂಡಿಸಿಕೊಂಡಿರುವ ರಡ್ಡಿ ಸಮುದಾಯ ನೋಡಿ ಕಲಿಯುವುದು ಸಾಕಷ್ಟಿದೆ ಎಂದು ಹೇಳಿದರು. ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ, ರಡ್ಡಿ ಸಮುದಾಯ ಹಲವಾರು ದಾರ್ಶನಿಕರನ್ನು ಸಮಾಜಕ್ಕೆ ನೀಡಿದ ಸಮಾಜವಾಗಿದೆ. ದಾರ್ಶನಿಕರ ಸಾಧನೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಮಾಜಿ ಸಚಿವ ಎಸ್‌.ಆರ್‌. ಪಾಟೀಲ ಮಾತನಾಡಿ, ಹೇಮ-ವೇಮ ದಾಸೋಹ ಭವನಕ್ಕೆ ವೈಯಕ್ತಿಕವಾಗಿ 2 ಲಕ್ಷ ರೂ. ನೀಡಿದರು.
ಎರೆಹೊಸಳ್ಳಿ ಮಹಾಯೋಗಿ ವೇಮನ ಸಂಸ್ಥಾನಮಠದ ವೇಮನಾನಂದ ಶ್ರೀಗಳು ಆಶೀರ್ವಚನ ನೀಡಿದರು. ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಮಾತನಾಡಿದರು. ಶಾಸಕ ಎನ್‌.ಎಚ್‌. ಕೋನರಡ್ಡಿ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ರಾಮಣ್ಣ ತಳೇವಾಡ, ಬಿ.ಆರ್‌.ಪಾಟೀಲ ಯಾವಗಲ್ಲ, ಹೇಮ-ವೇಮ ಸಂಸ್ಥೆ ಅಧ್ಯಕ್ಷ ದಯಾನಂದ ಪಾಟೀಲ, ಅರಳಿಕಟ್ಟಿ ಫೌಂಡೇಶನ್‌ ಅಧ್ಯಕ್ಷ ತಿಮ್ಮಣ್ಣ ಅರಳಿಕಟ್ಟಿ, ವಿ.ಆರ್‌. ನಾಡಗೌಡ, ಶಿವನಗೌಡ ನಾಡಗೌಡ, ಸುರೇಶ ಮಾಸರಡ್ಡಿ, ಎಸ್‌.ಟಿ.ಪಾಟೀಲ, ಸತೀಶ ಬಂಡಿವಡ್ಡರ ಸೇರಿದಂತೆ ಇತರರು ಇದ್ದರು.

ಶ್ರಮಪಟ್ಟು ಹೇಮವೇಮ ಸಂಸ್ಥೆಯವರು ಮಲ್ಲಮ್ಮ ದೇವಸ್ಥಾನ ಹಾಗೂ ಸಮುದಾಯಭವನ ನಿರ್ಮಾಣ ಮಾಡಿದ್ದೀರಿ ಅದನ್ನು ಸಾರ್ವಜನಿಕರು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು.
●ಗೋವಿಂದ ಕಾರಜೋಳ,
ಚಿತ್ರದುರ್ಗ ಸಂಸದ

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

9

Uppur: ಮೃತದೇಹ ಪತ್ತೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.