Bangladesh ರಾಷ್ಟ್ರಧ್ವಜಕ್ಕೆ ಅಪಮಾನ; ಪ್ರಧಾನಿ ಮೌನವಾಗಿರುವುದು ಸರಿಯಲ್ಲ: ಮುತಾಲಿಕ್
Team Udayavani, Aug 7, 2024, 5:45 PM IST
ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ನಮ್ಮ ರಾಷ್ಟ್ರಧ್ವಜಕ್ಕೆ ಅಪಮಾನ ನಡೆಯುತ್ತಿದ್ದರೂ ಪ್ರಧಾನಿ ಮೌನವಾಗಿರುವುದು ಸರಿಯಲ್ಲ. ಕೇಂದ್ರ ಸರ್ಕಾರ ತಕ್ಷಣವೇ ಕಾರ್ಯಾಚರಣೆಗೆ ಮುಂದಾಗಿ ಅಲ್ಲಿನ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಆ.7ರ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪಿಎಂ ಡಾ. ಮನಮೋಹನ್ ಸಿಂಗ್ ಮಾದರಿಯಲ್ಲಿ ಪ್ರಧಾನಿ ಮೋದಿ ಮೌನಿ ಬಾಬಾ ಆಗಿರುವುದು ಖಂಡನೀಯ ಎಂದು ಹೇಳಿದರು.
ಬಾಂಗ್ಲಾದೇಶದಲ್ಲಿ ಹಿಂದೂ ಮಂದಿರಗಳನ್ನು ಧ್ವಂಸ ಮಾಡಲಾಗುತ್ತಿದ್ದು, ರವೀಂದ್ರನಾಥ ಟಾಗೋರ್ ಅವರ ಪ್ರತಿಮೆ ಧ್ವಂಸ ಮಾಡಲಾಗಿದೆ. ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಬಾಂಗ್ಲಾದಲ್ಲಿ ಶೇ.12ರಷ್ಟು ಇದ್ದ ಹಿಂದೂಗಳು ಶೇ.5 ಕ್ಕೆ ಕುಸಿದಿದ್ದಾರೆ. ಭಾರತ ನೀಡಿದ ಅಂಬ್ಯುಲೆನ್ಸ್ ಮೇಲೆ ಇದ್ದ ಭಾರತ-ಬಾಂಗ್ಲಾ ರಾಷ್ಟ್ರಧಜ್ವಗಳಲ್ಲಿ ಭಾರತ ಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದರು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯವನ್ನು ಸಣ್ಣ ಘಟನೆ ಎಂದ ವಿದೇಶಾಂಗ ಸಚಿವರಿಗೆ ನಾಚಿಕೆಯಾಗಬೇಕು. ದೇಶ, ರಾಜ್ಯದಲ್ಲಿನ ಬಾಂಗ್ಲಾ ಅಕ್ರಮ ನಿವಾಸಿಗಳನ್ನು ತಕ್ಷಣವೇ ಒದ್ದು ಹೊರ ಹಾಕಬೇಕು. ರಾಜ್ಯದಲ್ಲಿರುವ ಬಾಂಗ್ಲಾ ಅಕ್ರಮ ವಾಸಿಗಳು, ರೋಹಿಂಗ್ಯಾಗಳ ಮಾಹಿತಿ ಸಂಗ್ರಹಕ್ಕೆ ಸೇನಾ ರಾಜ್ಯಾಧ್ಯಕ್ಷ ಗಂಗಾಧರ ಪಾಟೀಲ ಕುಲಕರ್ಣಿ ಅವರ ನೇತೃತ್ವದಲ್ಲಿ ಐವರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
ಸಮಿತಿ ವರದಿಯನ್ನು ರಾಜ್ಯ ಗೃಹ ಸಚಿವರಿಗೆ ಸಲ್ಲಿಸಲಾಗುವುದು. ಒಂದು ತಿಂಗಳೊಳಗಾಗಿ ಕ್ರಮ ಕೈಗೊಳ್ಳದಿದ್ದರೆ ನಾವೇ ಕಾರ್ಯಾಚರಣೆಗೆ ಇಳಿಯುತ್ತೇವೆ ಎಂದರಲ್ಲದೆ, ಆ.12ರಂದು ಎಲ್ಲ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಎಚ್ಚರಿಕೆ ಪತ್ರ ಸಲ್ಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.