Wayanad landslides ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ನೆರವು


Team Udayavani, Aug 7, 2024, 6:06 PM IST

18-wayanad

ವಯನಾಡ್‌: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರ ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್ ಫೌಂಡೇಷನ್ ಯೋಜನೆ ಮಾಡಿದೆ.

ಫೌಂಡೇಷನ್ ನಿಂದ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ಆಹಾರ ಪದಾರ್ಥಗಳು, ಒಣಹಣ್ಣುಗಳು, ಹಾಲು, ಪಡಿತರ, ಅಡುಗೆ ಪಾತ್ರೆಗಳು, ಕುಡಿಯುವ ನೀರು, ಮೂಲಭೂತ ನೈರ್ಮಲ್ಯ ವಸ್ತುಗಳು, ಟೆಂಟ್‌ಗಳು, ಹಾಸಿಗೆಗಳು, ಸೋಲಾರ್ ಚಾಲಿತ ಸಾಧನಗಳು ಮತ್ತು ಟಾರ್ಚ್‌ಗಳಂತಹ ವಸ್ತುಗಳನ್ನು ಒದಗಿಸುತ್ತಿದೆ.

ಸಂತ್ರಸ್ತ ಕುಟುಂಬಗಳಿಗೆ ಬೀಜಗಳು, ಮೇವು, ಉಪಕರಣಗಳು ಮತ್ತು ವೃತ್ತಿಪರ ತರಬೇತಿಯನ್ನು ನೀಡಲಾಗುವುದು. ಇದರಿಂದಾಗಿ ಅವರ ಜೀವನ ಮತ್ತೆ ಹಳಿಗೆ ಮರಳುತ್ತದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ಅಡೆತಡೆಗಳು ಆಗದಿರುವಂತೆ ರಿಲಯನ್ಸ್ ಫೌಂಡೇಷನ್ ನಿಂದ ಪುಸ್ತಕಗಳು ಮತ್ತು ಕ್ರೀಡಾ ಸಾಮಗ್ರಿಗಳನ್ನು ಒಳಗೊಂಡಂತೆ ಶಿಕ್ಷಣಕ್ಕೆ ಬೇಕಾದ ಬೆಂಬಲವನ್ನು ನೀಡುತ್ತದೆ.

ರಕ್ಷಣಾ ಕಾರ್ಯಕರ್ತರು ಮತ್ತು ವಿಪತ್ತು ನಿರ್ವಹಣಾ ತಂಡಗಳ ಸುಗಮ ಕಾರ್ಯನಿರ್ವಹಣೆಗಾಗಿ ರಿಲಯನ್ಸ್ ಜಿಯೋ ವಿಶೇಷ ಟವರ್‌ಗಳನ್ನು ಸ್ಥಾಪಿಸಿದೆ. ಇದರಿಂದ ಸಂವಹನವನ್ನು ಸುಧಾರಿಸಬಹುದು ಮತ್ತು ವಿಪತ್ತು ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಬಹುದು. ಮಾನಸಿಕ-ಸಾಮಾಜಿಕ ಆಘಾತದಿಂದ ಪೀಡಿತ ವ್ಯಕ್ತಿಗಳಿಗೆ ರಿಲಯನ್ಸ್ ಫೌಂಡೇಷನ್ ತಜ್ಞರ ಸಹಾಯವನ್ನು ಸಹ ಒದಗಿಸುತ್ತಿದೆ.

ಕೇರಳದಲ್ಲಿ ನಡೆದ ಈ ದುರಂತ ಘಟನೆಯ ಕುರಿತು ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಮಾತನಾಡಿ, ವಯನಾಡಿನ ಜನರ ನೋವು ಮತ್ತು ಭೂಕುಸಿತದಿಂದ ಉಂಟಾದ ಅಪಾರ ನಷ್ಟದಿಂದ ನಾವು ಕೂಡಾ ದುಃಖಿತರಾಗಿದ್ದೇವೆ. ಈ ದುಃಖದ ಸಮಯದಲ್ಲಿ ಘಟನೆಯಿಂದ ಬಾಧಿತರಾದ ಪ್ರತಿ ವ್ಯಕ್ತಿ ಮತ್ತು ಕುಟುಂಬದೊಂದಿಗೆ ನಾವಿದ್ದೇವೆ ಎಂದರು.

ಮುಂದುವರಿದು ಮಾತನಾಡಿ, ನಮ್ಮ ರಿಲಯನ್ಸ್ ಫೌಂಡೇಷನ್ ತಂಡಗಳು ಹಗಲು-ರಾತ್ರಿ ಕೆಲಸ ಮಾಡುತ್ತಿವೆ. ಈ ಕಷ್ಟದ ಸಮಯದಲ್ಲಿ ನಾವು ಕೇರಳದ ಜನರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದರು.

ಕಂಪನಿ ಹೇಳಿಕೆ ಪ್ರಕಾರ, ಪರಿಹಾರ ಸಾಮಗ್ರಿಗಳೊಂದಿಗೆ ಸಮಸ್ಯೆಯಾದ ಸ್ಥಳದಲ್ಲಿ ರಿಲಯನ್ಸ್ ಫೌಂಡೇಷನ್ ತಂಡಗಳಿವೆ. ರಾಜ್ಯದ ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತದೊಂದಿಗೆ ನಿರಂತರ ಚರ್ಚೆ ನಡೆಸಲಾಗುತ್ತಿದೆ. ಪ್ರತಿಯೊಂದು ಕಾರ್ಯವನ್ನು ರಾಜ್ಯ ಸರ್ಕಾರ ಮತ್ತು ಇತರ ವಿಪತ್ತು ನಿರ್ವಹಣಾ ಸಂಸ್ಥೆಗಳ ಸಮನ್ವಯದಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಇದರಿಂದ ಸಹಾಯವು ಸಮಯಕ್ಕೆ ತಲುಪುತ್ತದೆ. ರಿಲಯನ್ಸ್ ಫೌಂಡೇಷನ್ ದೀರ್ಘಾವಧಿಯಲ್ಲಿ ವಯನಾಡಿನ ಜನರನ್ನು ಬೆಂಬಲಿಸಲು ಬದ್ಧವಾಗಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.