ಬಸವನಬಾಗೇವಾಡಿ: ಶಾಲೆಯಲ್ಲೇ ನೇಣು ಬಿಗುದುಕೊಂಡು ಆತ್ಮಹತ್ಯೆಗೆ ಶರಣಾದ ಮುಖ್ಯೋಪಾಧ್ಯಾಯ
Team Udayavani, Aug 7, 2024, 7:54 PM IST
ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಸಮೀಪದ ನಾಗೂರ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಸಿ, ಎಸ್, ಹಡಪದ ಶಾಲೆಯ ಶಿಕ್ಷಕರ ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯಗೆ ಶರಣಾಗಿದ್ದಾರೆ.
ಕಳೆದ 2 ವರ್ಷದಿಂದ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹಡಪದ ಅವರು ಕಳೆದ ಒಂದು ವರ್ಷದಿಂದ ಪ್ರಭಾರಿ ಮುಖ್ಯೋಪಾಧ್ಯಾಯರಾಗಿ ಅಧಿಕಾರ ವಹಿಸಿಕೊಂಡಿದ್ದರು ಎನ್ನಲಾಗಿದೆ.
ಶಾಲಾ ಅವಧಿಯಲ್ಲೇ ಮಧ್ಯಾಹ್ನ 3:30ರ ಸುಮಾರಿಗೆ ಶಿಕ್ಷಕರ ಕೊಠಡಿಯಲ್ಲಿ ಯಾರು ಇರದ ವೇಳೆ ನೇಣು ಬಿಗಿದುಕೊಂಡಿದ್ದಾರೆ. ಶಾಲೆ ಅವಧಿ ಮುಗಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕರಣ ತಿಳಿದುಬಂದಿಲ್ಲ, ಶಾಲೆಯಲ್ಲಿ ಶಿಕ್ಷಕನ ಆತ್ಮಹತ್ಯೆಗೆ ಸರ್ಕಾರಿ ನೌಕರರ ಸಂಘದಿಂದ ಖಂಡನೇ ವ್ಯಕ್ತವಾಗಿದ್ದು ಶಿಕ್ಷಕನ ಸಾವಿನ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸಂಬಂಧ ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Chikkamagaluru: ಹಾರೆಯಿಂದ ತಲೆಗೆ ಹೊಡೆದು ಮಗನನ್ನೇ ಹತ್ಯೆ ಮಾಡಿದ ತಂದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.