Koratagere: ಸಿನಿಮಿಯ ಶೈಲಿಯಲ್ಲಿ ಖತರ್ನಾಕ್ ಕಳ್ಳನನ್ನು ಬಂಧಿಸಿದ ಪೊಲೀಸ್ ಪೇದೆ

ಪೇದೆ ಮೇಲೆಯೇ ಬೈಕ್ ಹತ್ತಿಸಲು ಯತ್ನ. ಮಹಿಳಾ ಎಎಸೈ ಮೇಲೆಯೂ ಹಲ್ಲೆ

Team Udayavani, Aug 7, 2024, 9:18 PM IST

Koratagere: ಸಿನಿಮಿಯ ಶೈಲಿಯಲ್ಲಿ ಖತರ್ನಾಕ್ ಕಳ್ಳನನ್ನು ಬಂಧಿಸಿದ ಪೊಲೀಸ್ ಪೇದೆ

ಕೊರಟಗೆರೆ: ಗೃಹ ಸಚಿವರ ತವರು ಕ್ಷೇತ್ರವಾದ ಕೊರಟಗೆರೆ ಪಟ್ಟಣದಲ್ಲಿ ಜು.20ರಂದು ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿ ಬೆಂಗಳೂರಿನ ಸದಾಶಿವ ನಗರದ ಟ್ರಾಫಿಕ್ ಸಿಗ್ನಲ್‍ನಲ್ಲಿ ದ್ವಿಚಕ್ರ ವಾಹನದ ಮೂಲಕ ಆಗಮಿಸಿದ ವೇಳೆ ಕೊರಟಗೆರೆ ಪೊಲೀಸ್ ಠಾಣೆಯ ಪೇದೆ ದೊಡ್ಡಲಿಂಗಯ್ಯ ಸಿನಿಮೀಯ ರೀತಿಯಲ್ಲಿ ಹಿಡಿದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ ಮತ್ತು ತುಮಕೂರು ಜಿಲ್ಲೆಯ ಹತ್ತಾರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿ ಮತ್ತು ಖತರ್ನಾಕ್ ಕಳ್ಳ ಮಂಜುನಾಥ(46) ಅಲಿಯಾಸ್ ಹೊಟ್ಟೆಮಂಜನ ಮೇಲೆ 75 ಕ್ಕೂ ಹೆಚ್ಚು ಕಳ್ಳತನ ಪ್ರಕರಣ ದಾಖಲಾಗಿದೆ.

ನಟೋರಿಯಸ್ ರೌಡಿಯನ್ನು ಪೊಲೀಸ್ ಪೇದೆ ದೊಡ್ಡಲಿಂಗಯ್ಯ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸಿನಿಮೀಯ ಶೈಲಿಯಲ್ಲಿ ಹಿಡಿದು ವಶಕ್ಕೆ ಪಡೆದಿದ್ದಾರೆ.

ಪೇದೆ ಮೇಲೆ ಆರೋಪಿಯಿಂದ ಹಲ್ಲೆ..
ಸದಾಶಿವ ನಗರದ ಟ್ರಾಫಿಕ್‍ನಲ್ಲಿ ಕೊರಟಗೆರೆ ಪೇದೆ ದೊಡ್ಡಲಿಂಗಯ್ಯ ಆರೋಪಿ ಹೊಟ್ಟೆಮಂಜನನ್ನು ನಿಲ್ಲಿಸಲು ಪ್ರಯತ್ನಿಸಿದ ವೇಳೆ ಪೇದೆ ಮೇಲೆಯೇ ಬೈಕ್ ಹತ್ತಿಸಲು ಮುಂದಾಗಿದ್ದಾನೆ. ವಾಹನ ಮೇಲೆ ಬಂದ್ರು ಆರೋಪಿಯನ್ನು ಬಿಡದೇ ಆತನ ಕಾಲನ್ನು ಗಟ್ಟಿಯಾಗಿ ಹಿಡಿದುಕೊಂಡ ಮೇಲು ವಾಹನ ವೇಗವಾಗಿ ಚಲಾಯಿಸಿದ್ದಾನೆ. ನಂತರ ಸಂಚಾರಿ ಠಾಣೆಯ ಮಹಿಳಾ ಎಎಸೈ ಮೇಲೆಯು ಆರೋಪಿ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಡಿಸಿಸಿ ಬ್ಯಾಂಕಿನ ಬಳಿ ವೃದ್ದೆಯ ಸರ ಕಳ್ಳತನ..
ಕೊರಟಗೆರೆ ಪಟ್ಟಣದ ಆಸ್ಪತ್ರೆಗೆ ಚಿಕ್ಕನಹಳ್ಳಿಯ ಗಿರಿಜಮ್ಮ(76) ಬಂದಾಗ ವಂಚಕ ಮಂಜುನಾಥ ನಿಮಗೆ ವೃದ್ದಾಪ್ಯವೇತನ ಮಾಡಿಕೊಡುವ ಆಮೀಷವೊಡ್ಡಿ ಡಿಸಿಸಿ ಬ್ಯಾಂಕಿನ ಬಳಿಗೆ ಕರೆದೊಯ್ದು ಬಂಗಾರ ಸರ ನೋಡಿದ್ರೇ ಕೆಲಸ ಆಗೋದಿಲ್ಲ ಅಂತಾ ಹೇಳಿ ವೃದ್ದೆಯ ಕೊರಳಿನಲ್ಲಿದ್ದ ಬಂಗಾರ ಸರಬಿಚ್ಚಿಸಿ ಬ್ಯಾಗಿನಲ್ಲಿ ಇಟ್ಟುಕೊಳ್ಳುವಂತೆ ತಾನೇ ಬ್ಯಾಗ್‍ನೀಡ್ತಾನೇ. ಬ್ಯಾಂಕಿನೊಳಗೆ ಹೋದ ಕಳ್ಳ ಮತ್ತೆ ವೃದ್ದೆಗೆ ಕಾಣದಂತೆ ಬ್ಯಾಗ್ ಕಬಳಿಸಿ ಪರಾರಿ ಆದ ಪ್ರಕರಣದ ಮೇಲೆ ಪೊಲೀಸರಿಂದ ತನಿಖೆ ನಡೆದಿದೆ.

45 ದಿನಗಳಿಂದ ಪೊಲೀಸರ ಹುಡುಕಾಟ..
ಕೊರಟಗೆರೆ ವೃದ್ದೆಯ ಕಳ್ಳತನದ ಪ್ರಕರಣದ ಬೆನ್ನತ್ತಿದ ಕೊರಟಗೆರೆ ಪೊಲೀಸರ ತಂಡ ಕೊರಟಗೆರೆ ಪಟ್ಟಣ, ತುಮಕೂರು, ಊರ್ಡಿಗೆರೆ, ಬೆಂಗಳೂರು, ದಾಬಸ್‍ಪೇಟೆ ಮತ್ತು ನೆಲಮಂಗಲದ ರಸ್ತೆಗಳಲ್ಲಿ 45 ದಿನ ಹುಡುಕಾಟ ನಡೆಸಿ ಸಿಸಿಟಿವಿ ಪರಿಶೀಲಿಸಿದ್ದಾರೆ ತುಮಕೂರಿನ ಕಮಾಂಡ್ ಸೆಂಟರ್ ಸಿಸಿ ಟಿವಿಯ ವಿಡೀಯೊ ಮತ್ತು ನೆಲಮಂಗಲದ ಟ್ರಾಪೀಕ್ ಮೇನೆಜ್‍ಮೆಂಟ್ ಸಹಾಯದಿಂದ ಆರೋಪಿಯನ್ನು ಕೊರಟಗೆರೆ ಪೊಲೀಸರ ಕಠಿಣ ಪರಿಶ್ರಮದಿಂದ ಬಂಧಿಸುವಲ್ಲಿ ಯಶಸ್ವಿ ಆಗಿರುವ ಘಟನೆ ನಡೆದಿದೆ.

ನೆಲಮಂಗಲ ತಾಲೂಕಿನ ಹುಳಿ ಚಿಕ್ಕನಹಳ್ಳಿಯ ಮಂಜುನಾಥ(46) ಅಲಿಯಾಸ್ ಹೊಟ್ಟೆಮಂಜ ಬಂಧಿತ ಆರೋಪಿ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಚಿಕ್ಕನಹಳ್ಳಿ ಗ್ರಾಮದ ವೃದ್ದೆ ಗಿರಿಜಮ್ಮನ ದೂರಿನ ಅನ್ವಯ ಜು.20ರಂದು ಪ್ರಕರಣ ದಾಖಲಾಗಿದೆ. ಸಿಪಿಐ ಅನಿಲ್ ಮತ್ತು ಪಿಎಸೈ ಚೇತನ್ ನೇತೃತ್ವದಲ್ಲಿ ತನಿಖೆ ನಡೆದಿದೆ. ತನಿಖೆಯಲ್ಲಿ ಎಎಸೈ ಗಂಗಾಧರಪ್ಪ, ಪೇದೆ ದೊಡ್ಡಲಿಂಗಯ್ಯ, ಮೋಹನ್, ಸಿದ್ದರಾಮ, ಪ್ರದೀಪ ಸೇರಿದಂತೆ ಇತರರು ಭಾಗಿಯಾಗಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.