KGF: ಬೆಳಗ್ಗೆ ಮದುವೆ; ಸಂಜೆ ಮಚ್ಚಿನಿಂದ ಕೊಚ್ಚಿ ಕೊಲೆ !
ಕೋಣೆಗೆ ಇಬ್ಬರೂ ಒಟ್ಟಿಗೆ ತೆರಳಿ ಬಳಿಕ ಪರಸ್ಪರ ಬಡಿದಾಡಿಕೊಂಡ ನೂತನ ವಧು-ವರರು
Team Udayavani, Aug 8, 2024, 7:20 AM IST
ಕೆಜಿಎಫ್(ಕೋಲಾರ): ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ನೂತನ ವಧು ವರರು ಸಂಜೆ ಪರಸ್ಪರ ಮಚ್ಚಿನಿಂದ ಹಲ್ಲೆ ಮಾಡಿಕೊಂಡ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ಆಂಡರ್ಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಬೈನೇಹಳ್ಳಿ ಗ್ರಾಮದ ಶ್ರೀನಿವಾಸಲು ಮತ್ತು ಲಕ್ಷ್ಮೀ ಅವರ ಪುತ್ರಿ ಲಿಖಿತಶ್ರೀ (18), ಆಂಧ್ರಪ್ರದೇಶದ ಶಾಂತಿಪುರಂ ನಿವಾಸಿ ಮುನಿಯಪ್ಪ ಅವರ ಪುತ್ರ ನವೀನ್ ಕುಮಾರ್ (30) ಮೃತರು. ಲಿಖಿತಶ್ರೀ ಮತ್ತು ನವೀನ್ ಕುಮಾರ್ ಅವರಿಗೆ ಬುಧವಾರ ವರನ ಅಕ್ಕನ ಮನೆಯಲ್ಲಿ ಮದುವೆ ನಡೆದಿತ್ತು. ಮದುವೆ ಸಮಾರಂಭದಲ್ಲಿ ವರನ ತಂದೆ, ತಾಯಿ ಮತ್ತು ವಧುವಿನ ತಂದೆ, ತಾಯಿ ಹಾಗೂ ಕೆಲವು ಸಂಬಂಧಿಕರು ಭಾಗವಹಿಸಿದ್ದರು ಎನ್ನಲಾಗಿದೆ.
ಅನಂತರ ಅದೇ ಗ್ರಾಮದಲ್ಲಿರುವ ವರನ ದೊಡ್ಡಪ್ಪನ ಮನೆಗೆ ಹುಡುಗ ಮತ್ತು ಹುಡುಗಿ ಇಬ್ಬರು ಒಟ್ಟಿಗೆ ಹೋಗಿ ಕೋಣೆಯ ಮುಂಬಾಗಿಲನ್ನು ಹಾಕಿಕೊಂಡು ಪರಸ್ಪರ ಮಚ್ಚಿನಲ್ಲಿ ಹಲ್ಲೆ ಮಾಡಿಕೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಕೆಜಿಎಫ್ನ ಆಸ್ಪತ್ರೆಗೆ ಕರೆ ತರಲಾಯಿತಾದರೂ, ಲಿಖಿತಶ್ರೀ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ತೀವ್ರವಾಗಿ ಗಾಯಗೊಂಡಿದ್ದ ನವೀನ್ ಕುಮಾರ್ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ನವೀನ್ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.