Bangladesh ಪೊಲೀಸರೇ ಬೀದಿಗೆ: ಜನರೇ ಪೊಲೀಸರು!
ಮಾಜಿ ಪ್ರಧಾನಿ ಶೇಖ್ ಹಸೀನಾ ಪರಾರಿ ಬಳಿಕವೂ ಬಾಂಗ್ಲಾದಲ್ಲಿ ಮುಂದುವರಿದ ಅರಾಜಕತೆ
Team Udayavani, Aug 8, 2024, 6:55 AM IST
ಢಾಕಾ: ಬಾಂಗ್ಲಾದೇಶದಲ್ಲಿ ಶಾಂತಿ ವ್ಯವಸ್ಥೆಯನ್ನು ಕಾಪಾಡಬೇಕಿದ್ದ ಪೊಲೀಸರು ತಮ್ಮ ಕೆಲಸಕ್ಕೆ ಗೈರು ಹಾಜರಾದರೆ ಢಾಕಾ ಸೇರಿದಂತೆ ವಿವಿಧ ನಗರಗಳಲ್ಲಿ ಟ್ರಾಫಿಕ್ ನಿರ್ವಹಣೆ ಸೇರಿ ಅನೇಕ ಕೆಲಸ ಗಳನ್ನು ಬುಧವಾರ ವಿದ್ಯಾರ್ಥಿಗಳೇ ಕೈಗೊಂಡರು! ಶೇಖ್ ಹಸೀನಾ ದೇಶ ತೊರೆದ ಬಳಿಕವೂ ಢಾಕಾದಲ್ಲಿ ಅರಾಜಕತೆ ಇನ್ನೂ ಮುಂದುವರಿದಿದೆ.
ಪ್ರತಿಭಟನೆ ವೇಳೆ ಮೃತಪಟ್ಟ ಪೊಲೀಸ್ ಕುಟುಂಬ ಗಳಿಗೆ ಸೂಕ್ತ ಪರಿಹಾರ ಮತ್ತು ಕುಟುಂಬ ಸದಸ್ಯರಿಗೆ ಉದ್ಯೋಗ ಸೇರಿದಂತೆ 9 ಬೇಡಿಕೆಗಳೊಂದಿಗೆ ಪೊಲೀಸರು ಕೆಲಸಕ್ಕೆ ಗೈರಾಗಿದ್ದಾರೆ. ಪರಿಣಾಮ ಬಾಂಗ್ಲಾ ದೇಶ ಸ್ಕೌಟ್ಸ್ ಸಹಿತ ವಿದ್ಯಾರ್ಥಿಗಳು ಪೊಲೀಸರ
ಕೆಲಸವನ್ನು ನಿರ್ವಹಿಸಿದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ಪೊಲೀಸ್ ಪಡೆಯ ಪ್ರತೀ ಸದಸ್ಯರೂ ಹಂತ ಹಂತವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎ.ಕೆ.ಎಂ. ಶಹೀದುರ್ ರೆಹಮಾನ್ ಹೇಳಿದ್ದಾರೆ.
ಪೊಲೀಸರಿಗೆ ಮನವಿ
“ಪೊಲೀಸರು ಸಾರ್ವಜನಿಕರ ಸ್ನೇಹಿತರು. ಪೊಲೀಸ್ ಇಲ್ಲದ ಸಮಾಜವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ಗಾಳಿ ಸುದ್ದಿಯನ್ನು ನಿರ್ಲಕ್ಷಿಸಿ ಎಲ್ಲ ಪೊಲೀಸರು ತಮ್ಮ ಕರ್ತವ್ಯಕ್ಕೆ ಹಿಂದಿರಗಬೇಕು ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಬೇಕು’ ಎಂದು ಎಐಜಿ ರೆಹಮಾನ್ ಮನವಿ ಮಾಡಿಕೊಂಡಿದ್ದಾರೆ.
ಠಾಣೆಗಳ ಮೇಲೆ ದಾಳಿ
ಪೊಲೀಸ್ ಠಾಣೆಗಳ ಮೇಲೂ ದಾಳಿ ನಡೆದಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಸಾವು-ನೋವು ಸಂಭವಿಸಿದೆ. ಈ ಮಧ್ಯೆ ಕಾನೂನು ಸುವ್ಯವಸ್ಥೆ ಕಾಪಾಡುವ ಹೊಣೆ ಹೊತ್ತಿರುವ ರ್ಯಾಪಿಡ್ ಆ್ಯಕ್ಷನ್ ಬೆಟಾಲಿಯನ್ (ಆರ್ಎಬಿ), ಢಾಕಾ ಮೆಟ್ರೋಪಾಲಿಟಿನ್ ಪೊಲೀಸ್(ಡಿಎಂಪಿ)ನ ಉನ್ನತ ಹುದ್ದೆಗಳನ್ನು ಮರು ರಚಿಸಲಾಗಿದ್ದು, ಎ.ಕೆ.ಎಂ. ರೆಹಮಾನ್ ಅವರನ್ನು ಆರ್ಎಬಿನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಹಬೀಬುರ್ ರೆಹಮಾನ್ ಅವರನ್ನು ಢಾಕಾ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೊಬೆಲ್ ಪುರಸ್ಕೃತ ಮೊಹಮ್ಮದ್ ಯುನುಸ್ ಅವರನ್ನು ಮಧ್ಯಂತರ ಸರಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಈ ಎಲ್ಲ ಬೆಳವಣಿಗೆಗಳು ನಡೆದಿವೆ.
ಈ ಮಧ್ಯೆ, ಬಾಂಗ್ಲಾದೇಶದ ಉದ್ಯಮ ಸಮೂಹವು ಕೂಡಲೇ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನರ್ ಸ್ಥಾಪಿಸುವಂತೆ ಮಧ್ಯಾಂತರ ಸರಕಾರಕ್ಕೆ ಮನವಿ ಮಾಡಿದೆ. ಕಳೆದ 2 ದಿನಗಳಿಂದ ಫ್ಯಾಕ್ಟರಿಗಳ ಮೇಲೂ ದಾಳಿ ನಡೆಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.