Paris ಟಿಟಿ: ವನಿತಾ ತಂಡದ ಆಟ ಅಂತ್ಯ; ಗೆದ್ದದ್ದು ಅರ್ಚನಾ ಕಾಮತ್‌ ಮಾತ್ರ

 ಜರ್ಮನಿ ವಿರುದ್ಧ 1-3 ಸೋಲು

Team Udayavani, Aug 8, 2024, 1:37 AM IST

Paris ಟಿಟಿ: ವನಿತಾ ತಂಡದ ಆಟ ಅಂತ್ಯ; ಗೆದ್ದದ್ದು ಅರ್ಚನಾ ಕಾಮತ್‌ ಮಾತ್ರ

ಪ್ಯಾರಿಸ್‌: ವನಿತಾ ಟೇಬಲ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಭಾರತದ ಆಟ ಕ್ವಾರ್ಟರ್‌ ಫೈನಲ್‌ನಲ್ಲಿ ಕೊನೆಗೊಂಡಿದೆ. ಬುಧವಾರದ ಮುಖಾಮುಖೀಯಲ್ಲಿ ಜರ್ಮನಿ 3-1 ಅಂತರದಿಂದ ಭಾರತವನ್ನು ಪರಾಭವಗೊಳಿಸಿತು. ಭಾರತಕ್ಕೆ ಏಕೈಕ ಗೆಲುವು ತಂದಿತ್ತವರು ಕರಾವಳಿ ಮೂಲದ ಕನ್ನಡತಿ ಅರ್ಚನಾ ಕಾಮತ್‌ ಎಂಬುದಷ್ಟೇ ಸಮಾಧಾನದ ಸಂಗತಿ.

ಆರಂಭದ ಡಬಲ್ಸ್‌ನಲ್ಲಿ ಶ್ರೀಜಾ ಅಕುಲಾ-ಅರ್ಚನಾ ಕಾಮತ್‌ ಅವರನ್ನು ತುವಾನ್‌ ವಾನ್‌-ಕ್ಸಿಯೋನಾ ಶಾನ್‌ 11-5, 8-11, 12-10, 11-6ರಿಂದ ಪರಾಭವಗೊಳಿಸಿದರು. ಮೊದಲ ಸಿಂಗಲ್ಸ್‌ನಲ್ಲಿ ಅನುಭವಿ ಆಟಗಾರ್ತಿ ಮಣಿಕಾ ಬಾತ್ರಾ ಯಶಸ್ಸು ಕಾಣಲಿಲ್ಲ. ಅವರು ಆ್ಯನೆಟ್‌ ಕೌಫ್ಮ್ಯಾನ್‌ ವಿರುದ್ಧ 11-8, 5-11, 7-11, 5-11ರಿಂದ ಸೋಲನು ಭವಿಸಿದರು. ಜರ್ಮನಿ 2-0 ಮುನ್ನಡೆ ಸಾಧಿಸಿತು.

ಅರ್ಚನಾ ಕಾಮತ್‌ ಜಯ
ಭಾರತ ಉಳಿದ ಮೂರೂ ಪಂದ್ಯಗಳನ್ನು ಗೆಲ್ಲಬೇಕಾದ ಹಂತದಲ್ಲಿ ಅರ್ಚನಾ ಕಾಮತ್‌ ಭರವಸೆ ಮೂಡಿಸಿದರು. ಅವರು ಕ್ಸಿಯೋನಾ ಶಾನ್‌ಗೆ 11-6, 11-7, 11-7ರಿಂದ ಆಘಾತವಿಕ್ಕಿ ಭಾರತದ ಖಾತೆ ತೆರೆದರು.

ಆದರೆ ಮುಂದಿನ ಸಿಂಗಲ್ಸ್‌ನಲ್ಲಿ ಶ್ರೀಜಾ ಅಕುಲಾ ಎಡವಿದರು. ಆ್ಯನೆಟ್‌ ಕೌಫ್ಮ್ಯಾನ್‌ 11-6, 11-7, 11-7ರಿಂದ ಶ್ರೀಜಾಗೆ ಸೋಲುಣಿಸಿದರು. ಅಲ್ಲಿಗೆ ಭಾರತ ಒಲಿಂಪಿಕ್ಸ್‌ ಟಿಟಿ ಆಟ ಅಂತ್ಯಗೊಂಡಿತು.ಸೋಮವಾರ ವನಿತಾ ತಂಡ ತನಗಿಂತ ಉನ್ನತ ರ್‍ಯಾಂಕ್‌ನ ರೊಮೇನಿಯಾವನ್ನು 3-2ರಿಂದ ಹಿಮ್ಮೆಟ್ಟಿಸಿ ಕ್ವಾರ್ಟರ್‌ ಫೈನಲ್‌ಗೆ ಏರಿತ್ತು.

ಮಂಗಳೂರು ಮೂಲ
ಇಂದು ಜಯ ಸಾಧಿಸಿದ ಅರ್ಚನಾ ಕಾಮತ್‌ ಅವರು ಮಂಗಳೂರು ಕೊಂಚಾಡಿ ನಿವಾಸಿ ಡಾ| ಗಿರೀಶ್‌ ಕಾಮತ್‌ ಹಾಗೂ ಡಾ| ಅನುರಾಧ ಕಾಮತ್‌ ದಂಪತಿಯ ಪುತ್ರಿ.

ಮುಂದೆ ದೇಶಕ್ಕಾಗಿ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲೇ ಬೇಕು ಎನ್ನುವ ಛಲವಿದೆ. ಇದಕ್ಕಾಗಿ ಸತತ ಅಭ್ಯಾಸ ಮಾಡುತ್ತೇನೆ, ಇನ್ನಷ್ಟು ಉತ್ತಮ ಪ್ರದರ್ಶನ ನೀಡುತ್ತೇನೆ.
-ಅರ್ಚನಾ ಕಾಮತ್‌

ಚಿಕ್ಕ ವಯಸ್ಸಿಂದಲೂ ಒಲಿಂಪಿಕ್ಸ್‌ ಪದಕ ಗೆಲ್ಲುವ ಆಸೆ ಇತ್ತು. ಪಾಲ್ಗೊಳ್ಳುವ ಕನಸು ಈ ಬಾರಿ ನನಸಾಗಿದೆ. ಆ ಕ್ಷೇತ್ರದ ದಿಗ್ಗಜರೊಂದಿಗೆ ಆಟವಾಡಿದ ಅನುಭವ ಪಡೆದಿದ್ದಾಳೆ. ಮುಂದೆ ದೇಶಕ್ಕಾಗಿ ಪದಕ ಗೆಲ್ಲುವ ನಿರೀಕ್ಷೆ ಇದೆ, ಈಗಿನ ಸಾಧನೆ ಬಗ್ಗೆ ಹೆಮ್ಮೆಯಿದೆ.
-ಡಾ| ಗಿರೀಶ್‌ ಕಾಮತ್‌, ತಂದೆ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.