Vinesh Phogat: “ಅಮ್ಮಾ ನನ್ನ ವಿರುದ್ಧ ಕುಸ್ತಿ ಗೆದ್ದಿದೆ..”; ನಿವೃತ್ತಿ ಘೋಷಿಸಿದ ಘೋಗಾಟ್


Team Udayavani, Aug 8, 2024, 8:07 AM IST

Vinesh Phogat: “ಅಮ್ಮಾ ನನ್ನ ವಿರುದ್ಧ ಕುಸ್ತಿ ಗೆದ್ದಿದೆ..”; ನಿವೃತ್ತಿ ಘೋಷಿಸಿದ ಘೋಗಾಟ್

ನವದೆಹಲಿ: ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಫೋಗಾಟ್‌ (Vinesh Phogat) ಜೊತೆ ಇಡೀ ಕ್ರೀಡಾ ಲೋಕವೇ ನಿಂತಿದೆ. ಫೈನಲ್‌ ಪ್ರವೇಶಿಸಿ ಇತಿಹಾಸ ಬರೆಯಬೇಕಿದ್ದ ನಮ್ಮ ಭಾರತೀಯ ನಾರಿಯ ಕನಸು ನುಚ್ಚುನೂರಾಗಿದೆ.

ಅನರ್ಹಗೊಂಡದ್ದು ಯಾಕೆ?:

ಈ ಮೊದಲು 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದ ವಿನೇಶ್‌ ಈ ಬಾರಿ ಅವಕಾಶ ಸಿಗದ ಕಾರಣ 50 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದರು. ಹೀಗಾಗಿ ಸ್ಪರ್ಧೆ ಆರಂಭವಾಗುವ ದಿನ ಬೆಳಿಗ್ಗೆ ನಡೆಸುವ ತೂಕ ಪರಿಶೀಲನೆಯಲ್ಲಿ ಸ್ಪರ್ಧಿ 50 ಅಥವಾ ಅದಕ್ಕಿಂತ ಕಡಿಮೆ ಭಾರ ಹೊಂದಿರಬೇಕು. ವಿನೇಶ್‌ ಅವರ ತೂಕ 50 ಕೆಜಿ, 100 ಗ್ರಾಂ ಇದ್ದ ಕಾರಣ ಅವರನ್ನು ಅನರ್ಹಗೊಳಿಸಲಾಯಿತು.

2.8 ಕೆಜಿ ತೂಕ ಇಳಿಸಲು ರಾತ್ರಿಯಿಡೀ ಸೈಕ್ಲಿಂಗ್‌, ಸ್ಕಿಪ್ಪಿಂಗ್‌, ರನ್ನಿಂಗ್‌ ಮಾಡಿದ ವಿನೇಶ್‌, ಒಂದೂ ತೊಟ್ಟು ನೀರು ಕೂಡ ಕುಡಿಯದೇ ಬೆವರು ಸುರಿಸಿದ್ದರು. ಆದರೂ 100 ಹೆಚ್ಚಿಗೆ ಇದ್ದ‌ ಕಾರಣ ಅವರನ್ನು ಅನರ್ಹಗೊಳಿಸಲಾಗಿದೆ.

ಇದರಿಂದ ಕುಗ್ಗಿಹೋಗಿರುವ ವಿನೇಶ್‌ ಫೋಗಾಟ್‌ ಕುಸ್ತಿ ಜಗತ್ತಿಗೆ ವಿದಾಯ ಹೇಳಿದ್ದಾರೆ. ತಾನು ಕುಸ್ತಿಗೆ ನಿವೃತ್ತಿ ಹೇಳುತ್ತಿದ್ದೇನೆ ಎಂದು ಫೋಗಾಟ್‌ ಭಾವನಾತ್ಮಕವಾಗಿ ಟ್ವೀಟ್‌ ಮಾಡಿದ್ದಾರೆ.

ಟ್ವೀಟ್‌ ನಲ್ಲಿ ಏನಿದೆ?: ಕುಸ್ತಿಯಲ್ಲಿ ಫೈನಲ್‌ ಪ್ರವೇಶಿಸಿ ಪದಕ ಖಚಿತಪಡಿಸಿದ್ದ ವಿನೇಶ್‌ ಅನರ್ಹಗೊಂಡ ಬಳಿಕ  ನಿರ್ಜಲೀಕರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅನರ್ಹಗೊಂಡು ಆಘಾತಕ್ಕೆ ಒಳಗಾಗಿರುವ ಅವರು, ಕುಸ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.

“‘ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಛಿದ್ರವಾಗಿದೆ. ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ. ನಿಮ್ಮೆಲ್ಲರ ಬೆಂಬಲಕ್ಕೆ ನಾನು ಸದಾ ಋಣಿ ಆಗಿರುತ್ತೇನೆ” ಎಂದು ಭಾವನಾತ್ಮಕವಾಗಿ 29 ವರ್ಷದ ವಿನೇಶ್‌ ಕುಸ್ತಿಗೆ ವಿದಾಯ ಹೇಳಿದ್ದಾರೆ.

ಅನರ್ಹತೆ ಪ್ರಶ್ನಿಸಿ ಕ್ರೀಡಾ ನ್ಯಾಯಾಲಯಕ್ಕೆ ಮನವಿ

ಪ್ಯಾರಿಸ್‌: ಕುಸ್ತಿಯಲ್ಲಿ ಅನರ್ಹತೆಯನ್ನು ಪ್ರಶ್ನಿಸಿ ವಿನೇಶ್‌ ಫೋಗಾಟ್‌ ಅಂತಾರಾಷ್ಟ್ರೀಯ ಮಧ್ಯವರ್ತಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

100 ಗ್ರಾಂ ಹೆಚ್ಚಳ ಎಂಬ ಕಾರಣಕ್ಕೆ ಅನರ್ಹಗೊಳಿಸಲಾಗಿದೆ. ಹೀಗಾಗಿ ಜಂಟಿ ಬೆಳ್ಳಿ ಪದಕ ನೀಡಬೇಕು ಎಂದು ವಿನೇಶ್‌ ಫೋಗಾಟ್‌ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.