Rajya Sabhaದಲ್ಲಿ ಪ್ರತಿಧ್ವನಿಸಿದ ಫೋಗಾಟ್ ಅನರ್ಹತೆ; ಕಲಾಪದಿಂದ ಹೊರನಡೆದ ವಿಪಕ್ಷಗಳು
Team Udayavani, Aug 8, 2024, 12:56 PM IST
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿಪಟು ವಿನೇಶ್ ಫೋಗಾಟ್ ಅನರ್ಹ ವಿಚಾರದ ಕುರಿತು ಚರ್ಚೆಗೆ ಅವಕಾಶ ನೀಡದಿರುವುದಕ್ಕೆ ಅಸಮಧಾನಗೊಂಡ ವಿಪಕ್ಷ INDIA ಬ್ಲಾಕ್ ಸದಸ್ಯರು ರಾಜ್ಯಸಭೆ ಕಲಾಪ ಬಹಿಷ್ಕರಿಸಿ ಹೊರ ನಡೆದ ಘಟನೆ ಗುರುವಾರ (ಆಗಸ್ಟ್ 08) ನಡೆದಿದೆ.
ಕುಸ್ತಿ ನಿಯಮದ ಪ್ರಕಾರ ಕೇವಲ 100 ಗ್ರಾಮ್ ನಷ್ಟು ತೂಕ ಹೆಚ್ಚಳವಾಗಿದ್ದರಿಂದ ಪ್ಯಾರಿಸ್ ಒಲಿಂಪಿಕ್ಸ್ ಸಮಿತಿ ಕುಸ್ತಿಪಟು ವಿನೇಶ್ ಫೋಗಾಟ್ ಅವರನ್ನು ಬುಧವಾರ ಅನರ್ಹಗೊಳಿಸಿತ್ತು.
ಈ ವಿಚಾರವಾಗಿ ರಾಜ್ಯಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಫೋಗಾಟ್ ವಿಷಯವನ್ನು ಪ್ರಸ್ತಾಪಿಸಿ, ಅನರ್ಹತೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಚರ್ಚೆಯಾಗಬೇಕು ಎಂದರು. ಆದರೆ ರಾಜ್ಯಸಭಾ ಸಭಾಪತಿ ಜಗದೀಪ್ ಧನ್ಕರ್, ಈ ವಿಚಾರದಲ್ಲಿ ಚರ್ಚೆಗೆ ಅವಕಾಶ ಇಲ್ಲ ಎಂದು ಹೇಳಿದರು.
ಬಳಿಕ ತೃಣಮೂಲ ಕಾಂಗ್ರೆಸ್ ಸಂಸದ ಡೇರೆಕ್ ಓಬ್ರಿಯಾನ್ ಎದ್ದು ನಿಂತು, ಕೆಲವು ವಿಷಯ ಪ್ರಸ್ತಾಪಿಸಿದಾಗಲೂ ಅದಕ್ಕೂ ಸಭಾಪತಿ ಅನುಮತಿ ನೀಡಲಿಲ್ಲ. ಆಗ ಓಬ್ರಿಯಾನ್ ಗಟ್ಟಿ ಧ್ವನಿಯಲ್ಲಿ ಮಾತನಾಡಿದಾಗ, ನೀವು ಸಭಾಪತಿ ಪೀಠದ ವಿರುದ್ಧ ಕೂಗಾಡುತ್ತೀರಾ, ಸದನದಲ್ಲಿನ ನಿಮ್ಮ ನಡವಳಿಕೆ ಖಂಡನೀಯವಾಗಿದೆ. ಮುಂದಿನ ಬಾರಿ ಹೀಗಾದರೆ ಕಲಾಪದಿಂದ ಹೊರ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಭಾಪತಿಯ ಹೇಳಿಕೆಯಿಂದ ಅಸಮಾಧಾನಗೊಂಡ ವಿಪಕ್ಷ ಮುಖಂಡರು ಕಲಾಪ ಬಹಿಷ್ಕರಿಸಿ ಹೊರನಡೆದಿರುವುದಾಗಿ ವರದಿ ತಿಳಿಸಿದೆ. ಒಲಿಂಪಿಕ್ಸ್ ನಿಂದ ಫೋಗಾಟ್ ಅನರ್ಹಗೊಂಡಿರುವ ವಿಚಾರದಿಂದ ವಿಪಕ್ಷಗಳ ಹೃದಯ ಮಾತ್ರ ನೂಚ್ಚು ನೂರಾದಂತೆ ಭಾವಿಸಿದಂತಿದೆ ಎಂದು ಧನ್ಕರ್ ಪ್ರತಿಕ್ರಿಯಿಸಿದ್ದಾರೆ.
ಫೋಗಾಟ್ ವಿಚಾರದಲ್ಲಿ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಆದರೆ ರಾಜಕಾರಣ ಆಕೆಯನ್ನು ಅಗೌರವಿಸುತ್ತಿದೆ ಎಂದು ಸಭಾಪತಿ ಹೇಳಿದರು. ಫೋಗಾಟ್ ಕುರಿತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಬುಧವಾರ ಲೋಕಸಭೆಯಲ್ಲಿ ನೀಡಿದ ಅಭಿಪ್ರಾಯಕ್ಕೆ ವಿಪಕ್ಷಗಳು ಅಸಮಧಾನ ವ್ಯಕ್ತಪಡಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.