Kundapura: ಬೈಕ್ ಸವಾರರ ನಿದ್ದೆ ಕೆಡಿಸಿದ ಸರ್ವಿಸ್ ರಸ್ತೆ ಗುಂಡಿ
ಪ್ರಾಣ ಹಾನಿ ಸಂಭವಿಸುವ ಮುನ್ನ ಪ್ರಾಧಿಕಾರ ತುರ್ತು ಗಮನ ವಹಿಸಲಿ
Team Udayavani, Aug 8, 2024, 2:28 PM IST
ಕುಂದಾಪುರ: ಕುಂದಾಪುರದ ಫ್ಲೈಓವರ್ ಅಂಡರ್ಪಾಸ್ ದಾಟಿ ಉಡುಪಿ ಕಡೆಗೆ ಮುಂದುವರಿಯುವಾಗ ಹೋಟೆಲ್ ದಿವ್ಯಲಕ್ಷ್ಮೀ ಸಮೀಪ ಶ್ರೀದೇವಿ ನರ್ಸಿಂಗ್ ಹೋಂ ರಸ್ತೆಗಿಂತ ಮುಂದೆ ಹಾದು ಹೋಗುವ ಸರ್ವಿಸ್ ರಸ್ತೆಯಲ್ಲಿ ಬೃಹತ್ ಹೊಂಡ ನಿರ್ಮಾಣಗೊಂಡಿದೆ. ಅದರಲ್ಲಿ ಮಳೆ ನೀರು ನಿಂತು ಹೊಂಡ ಗಮನಕ್ಕೆ ಬಾರದೆ ತುಂಬಾ ಜನ ಬೈಕ್ ಸವಾರರು ಹೊಂಡದಲ್ಲಿ ಬಿದ್ದಿರುವ ಘಟನೆ ನಡೆಯುತ್ತಿದೆ. ಯಾವುದಾದರೂ ಪ್ರಾಣ ಹಾನಿ ಸಂಭವಿಸುವ ಮೊದಲೇ ಸಂಬಂಧಿತ ಪ್ರಾಧಿಕಾರ ತುರ್ತು ಗಮನ ವಹಿಸಿ ಇದರ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದೇ ರೀತಿಯ ಅನೇಕ ಗುಂಡಿಗಳು ಹಲವೆಡೆ ಇದ್ದು ಇದರ ಬಗ್ಗೆ ಸಂಬಂಧಿತ ಇಲಾಖೆ ಸರಿಪಡಿಸುವಲ್ಲಿ ಕ್ರಮ ಕೈಗೊಳ್ಳಬೇಕಾಗಿ ಸಾರ್ವಜನಿಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. ದಿನನಿತ್ಯ ವಾಹನದಲ್ಲಿ ಓಡಾಡುವ ವಾಹನ ಚಾಲಕರಿಗೆ ಸಮರ್ಪಕವಾದ ರಸ್ತೆ ನಿರ್ಮಿಸಿಕೊಡುವುದು ಸಂಬಂಧಿತ ಪ್ರಾ ಧಿಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಇಲ್ಲಿ ಸುಂಕ ಸಂಗ್ರಹವಷ್ಟೇ ತಮ್ಮ ಕೆಲಸ ಎಂದು ಭಾವಿಸಿದಂತಿದೆ.
ಆಕಸ್ಮಿಕವಾಗಿ ನಡೆಯುವ ಅವ ಘಡಗಳನ್ನು ತಪ್ಪಿಸುವಲ್ಲಿ ಆಡಳಿತ ಸಹಾಯ ಮಾಡಬೇಕಾಗುತ್ತದೆ. ಕುಂದಾಪುರದ ಸರ್ವಿಸ್ ರಸ್ತೆಯಲ್ಲಿ ಬೈಕ್ ಸವಾರರಿಗೆ ತೆರೆದ ಗುಂಡಿಗಳು ತಲೆನೋವಾಗಿ ಪರಿಣಮಿಸಿದೆ. ಮೃತ್ಯುವಿಗೆ ಆಹ್ವಾನ ನೀಡಿದಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.