Mangaluru: ಅಲ್ಲಲ್ಲಿ ನೀರು ನಿಂತು ಡೆಂಗ್ಯೂ ಏರಿಕೆ ಆತಂಕ !

ನಿರ್ಮಾಣ ಹಂತದ ಕಟ್ಟಡ, ಖಾಲಿಜಾಗಗಳು ಆಗದಿರಲಿ ಸೊಳ್ಳೆ ಉತ್ಪಾದನ ತಾಣ

Team Udayavani, Aug 8, 2024, 2:50 PM IST

Screenshot (150)

ಮಹಾನಗರ: ನಗರದಲ್ಲಿ ಡೆಂಗ್ಯೂ ಪ್ರಕರಣ ಆತಂಕ ಸೃಷ್ಟಿಸುತ್ತಿದೆ. ಅಲ್ಲಲ್ಲಿ ಮಳೆ ನೀರು ನಿಂತು ಸೊಳ್ಳೆ ಉತ್ಪತ್ತಿ ತಾಣಗಳು ನಗರದ ವಿವಿಧ ಕಡೆಗಳಲ್ಲಿ ಅಧಿಕವಾಗುತ್ತಲೇ ಇದೆ.

ಡೆಂಗ್ಯೂ ಹರ ಡುವ ಈಡಿಸ್‌ ಸೊಳ್ಳೆ ಸ್ವತ್ಛ ನೀರಿನಲ್ಲಿ ಉತ್ಪತ್ತಿಯಾಗುತ್ತದೆ. 2 ದಿನಗಳಿಂದ ಮಳೆ ಕೂಡ ಬಿಡುವು ನೀಡಿ ಆಗಾಗ್ಗೆ ಬಿಟ್ಟು ಬಿಟ್ಟು ಸುರಿ ಯುತ್ತಿದೆ. ಇದೀಗ ಸೊಳ್ಳೆ ಉತ್ಪತ್ತಿಗೆ ಅನುಕೂಲಕರವಾದ ವಾತಾ ವರಣ ನಗರದಲ್ಲಿದೆ. ಈ ನಡುವೆ ನಗರದ ಅಲ್ಲಲ್ಲಿ ನೀರು ನಿಂತಿರುವುದು ಡೆಂಗ್ಯೂ ಆತಂಕಕ್ಕೆ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನೀರು ನಿಲ್ಲುತ್ತಿರುವ ಬಗ್ಗೆ ಪಾಲಿಕೆ ಗಮನಕ್ಕೆ ತರಬೇಕು ಎಂದು ಪಾಲಿಕೆ ಹೇಳಿ ವಾರ ಕಳೆದಿದೆ. ಆದರೆ, ಸರಕಾರಿ ಕಚೇರಿ, ಕಾಮಗಾರಿ ಸ್ಥಳದಲ್ಲಿ ನೀರು ನಿಂತಿದ್ದು, ಅವರಿಗೆ ದಂಡ ಹಾಕುವವರು ಯಾರು? ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

ಈ ಮಧ್ಯೆ ಹಂಪನಕಟ್ಟೆ ಹಳೆ ಬಸ್‌ ನಿಲ್ದಾಣ ಬಳಿ ನಡೆಯುತ್ತಿರುವ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಾಮಗಾರಿ ಪ್ರದೇಶವೂ ಈಗ ಮಳೆ ನೀರು ನಿಂತು ಕೆರೆಯಂತಾಗಿದೆ. ಪಿಪಿಪಿ ಮಾದರಿಯಲ್ಲಿ 1.55 ಎಕರೆ ಪ್ರದೇಶದಲ್ಲಿ ಕಾಮಗಾರಿ ನಡೆಯುತ್ತಿದ್ದು, ಆ ಪ್ರದೇಶದಲ್ಲಿ ಈ ಹಿಂದೆ ಭೂಕುಸಿತ ಉಂಟಾಗುವ ಭೀತಿ ಇತ್ತು. ಇದೀಗ ಗೋಣಿ ಚೀಲ ಇಡಲಾ ಗಿದೆ. ಕಾಮಗಾರಿ ಉದ್ದೇಶಕ್ಕೆ ಗುಂಡಿ ಮಾಡಲಾಗಿದ್ದು, ನೀರು ತುಂಬಿ ಸೊಳ್ಳೆ ಉತ್ಪತ್ತಿಯಾಗುವ ಸಾಧ್ಯತೆ ಇದೆ. ಭಾರೀ ಮಳೆಯಾ ದರೆ ರೈಲು ನಿಲ್ದಾಣದ ಮುಂಭಾಗವೂ ನೀರು ಸರಾಗ ವಾಗಿ ಹರಿಯುತ್ತಿಲ್ಲ. ರಸ್ತೆಯಲ್ಲೇ ನೀರು ನಿಲ್ಲುತ್ತಿದೆ. ದಕ್ಕೆಯ ವಸತಿ ರಹಿತರ ಆಶ್ರಯ ಕೇಂದ್ರದ ಮುಂಭಾಗವೂ ಇದೇ ಸ್ಥಿತಿಯಿದೆ. ಇನ್ನು, ಪಾಲಿಕೆಯ ಪ್ರವೇಶ ದ್ವಾರ, ವಿವಿಧ ಮಾರು ಕಟ್ಟೆಯಲ್ಲಿಯೂ ನೀರು ನಿಲ್ಲುತ್ತಿದೆ.

ಸೊಳ್ಳೆ ನಿರ್ಮೂಲನ ದಿನ

ದ. ಕ. ಜಿಲ್ಲೆಗೆ ಹೋಲಿಸಿದರೆ ಮಂಗಳೂರು ನಗರ ದಲ್ಲಿಯೇ ಡೆಂಗ್ಯೂ ಆತಂಕ ಹೆಚ್ಚಿದೆ. ಡೆಂಗ್ಯೂ ಜ್ವರ ನಿಯಂತ್ರ ಣಕ್ಕೆ ಪ್ರತೀ ಶುಕ್ರವಾರ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಕಾರ್ಯಜಿಲ್ಲೆಯಾದ್ಯಂತ ನಡೆಯುತ್ತಿದೆ. ಸಾರ್ವ ಜನಿಕರು ತಮ್ಮ ಮನೆಗಳು, ಸರಕಾರಿ ಕಚೇರಿ, ಶಾಲಾ- ಕಾಲೇಜು ಗಳಲ್ಲಿ ಸಿಬಂದಿ ವರ್ಗದವರು ನೀರು ತುಂಬಿರುವ ಡ್ರಮ್‌, ಟ್ಯಾಂಕಿ, ಬ್ಯಾರಲ್‌ ಇತ್ಯಾದಿಗಳನ್ನು ಸ್ವತ್ಛಗೊಳಿಸಬೇಕು. ಅದೇ ರೀತಿ ಮಳೆ ನೀರು ನಿಲ್ಲುವ ತೊಟ್ಟಿ, ಹಳೆ ಟಯರ್‌ ಮತ್ತಿತರ ವಸ್ತುಗಳನ್ನು ವಿಲೇವಾರಿ ಮಾಡಬೇಕು, ಇದರಿಂದ ಸೊಳ್ಳೆಗಳ ಉತ್ಪತ್ತಿ ತಾಣ ನಾಶವಾಗಿ ಡೆಂಗ್ಯೂ ಜ್ವರವನ್ನು ನಿಯಂತ್ರಿಸಬಹುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.