Paris 2024: ಭಾರತೀಯ ಕುಸ್ತಿಪಟುವನ್ನು ಹೊರಹಾಕಿದ ಒಲಿಂಪಿಕ್ ಅಧಿಕಾರಿಗಳು; ಆಗಿದ್ದೇನು?
Team Udayavani, Aug 8, 2024, 4:02 PM IST
ಪ್ಯಾರಿಸ್: ತೂಕ ಹೆಚ್ಚಾದ ಕಾರಣದಿಂದ ಫೈನಲ್ ಪಂದ್ಯದಿಂದ ಭಾರತೀಯ ಕುಸ್ತಿಪಟು ವಿನೀಶ್ ಫೋಗಾಟ್ ಅನರ್ಹಗೊಂಡ ಬಳಿಕ ಮತ್ತೋರ್ವ ಕುಸ್ತಿಪಟು ಭಾರತಕ್ಕೆ ಮುಜುಗರ ತರುವಂತಹ ಕೆಲಸ ಮಾಡಿದ್ದಾರೆ. 53 ಕೆಜಿ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅಂತಿಮ್ ಪಂಘಾಲ್ ಅವರನ್ನು ಕ್ರೀಡಾಗ್ರಾಮದಿಂದ ಹೊರಹಾಕಲು ಒಲಿಂಪಿಕ್ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ 2024 ರ ಸಮಯದಲ್ಲಿ ಒಲಂಪಿಕ್ ಕ್ರೀಡಾ ಗ್ರಾಮವನ್ನು ಆಕೆಯ ಸಹೋದರಿ ನಿಶಾ ಭಾರತೀಯ ಕುಸ್ತಿಪಟುಗಳ ಮಾನ್ಯತಾ ಕಾರ್ಡ್ ಬಳಸಿ ಪ್ರವೇಶ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಪೊಲೀಸರು ನಿಶಾ ಅವರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದಾರೆ. ನಂತರ ಕುಸ್ತಿಪಟು ಆಂತಿಮ್ ಪಂಘಾಲ್ ಮತ್ತು ಅವರ ಪರಿವಾರವನ್ನು ಪ್ಯಾರಿಸ್ ನಿಂದ ಗಡೀಪಾರು ಮಾಡಲಾಗುತ್ತದೆ ಎಂದು ವರದಿಯಾಗಿದೆ.
ಪೊಲೀಸರು ನಿಶಾಳನ್ನು ವಿಚಾರಣೆಗೆ ಒಳಪಡಿಸಿದರು ಆದರೆ ಸ್ವಲ್ಪ ಸಮಯದ ನಂತರ ಆಕೆಯನ್ನು ಬಿಡುಗಡೆ ಮಾಡಲಾಯಿತು. ಆಂತಿಮ್ ಅವರ ಸಂಪೂರ್ಣ ಪರಿವಾರವನ್ನು ಹೊರಹಾಕಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅಲ್ಲದೆ ಘಟನೆಯ ನಂತರ ಅವರ ಮಾನ್ಯತೆಯನ್ನು ಸಹ ರದ್ದುಗೊಳಿಸಲಾಗಿದೆ.
ಮಹಿಳೆಯರ 53 ಕೆಜಿ ವಿಭಾಗದಲ್ಲಿ ಟರ್ಕಿಯ ಯೆಟ್ಗಿಲ್ ಝೆನೆಪ್ ವಿರುದ್ಧ ಆಡಿದ್ದ ಅಂತಿಮ್ ಪಂಘಾಲ್ 0-10 ಅಂತರದ ಅವಮಾನಕರ ಸೋಲಿಗೆ ತುತ್ತಾಗಿದ್ದರು.
“ಶಿಸ್ತು ಉಲ್ಲಂಘನೆಯನ್ನು ಫ್ರೆಂಚ್ ಅಧಿಕಾರಿಗಳು ಗಮನಕ್ಕೆ ತಂದ ನಂತರ ಕುಸ್ತಿಪಟು ಆಂಟಿಮ್ ಮತ್ತು ಅವರ ಸಹಾಯಕ ಸಿಬ್ಬಂದಿಯನ್ನು ಹಿಂದೆ ಕರೆಯಲು ನಿರ್ಧರಿಸಿದೆ” ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
ಪಂದ್ಯದಲ್ಲಿ ಸೋತ ಬಳಿಕ ಅಂತಿಮ ಅವರು ಕೋಚ್ ಗಳೊಂದಿಗೆ ಹೋಟೆಲ್ ಗೆ ತೆರಳಿದ್ದರು. ಈ ವೇಳೆ ಅವರ ವಸ್ತುಗಳನ್ನು ತರಲೆಂದು ಸಹೋದರಿ ನಿಶಾ ಅವರನ್ನು ಕ್ರೀಡಾ ಗ್ರಾಮಕ್ಕೆ ಕಳುಹಿಸಿದ್ದಾರೆ. ಆಕೆಯ ಸಹೋದರಿ ಗ್ರಾಮವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು. ಆದರೆ, ಹಿಂದುರುಗುವಾಗ ಭದ್ರತಾ ಅಧಿಕಾರಿಯ ಕೈಗೆ ಸಿಕ್ಕಿಬಿದ್ದರು.
ಆಕೆಯ ಹೇಳಿಕೆಯನ್ನು ದಾಖಲಿಸಲು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದರು. ಬಳಿಕ 19 ವರ್ಷದ ಜೂನಿಯರ್ ವಿಶ್ವ ಚಾಂಪಿಯನ್ ಆಂಟಿಮ್ ಅವರ ಹೇಳಿಕೆಯನ್ನು ದಾಖಲಿಸಲು ಪೊಲೀಸರು ಕರೆದರು.
ಅಷ್ಟೇ ಅಲ್ಲದೆ, ಆಂತಿಮ್ ಅವರ ವೈಯಕ್ತಿಕ ಸಹಾಯಕ ಸಿಬ್ಬಂದಿಗಳಾದ ವಿಕಾಸ್ ಮತ್ತು ಭಗತ್ ಅವರು ಕ್ಯಾಬ್ ನಲ್ಲಿ ಅಮಲೇರಿದ ಸ್ಥಿತಿಯಲ್ಲಿ ಪ್ರಯಾಣಿಸಿದ್ದಾರೆ. ಆದರೆ ಹಣ ಪಾವತಿಸಲು ನಿರಾಕರಿಸಿದ್ದಾರೆ. ಇದು ಕೂಡಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.