Olympics; ಭಾರತಕ್ಕೆ ನಾಲ್ಕನೇ ಕಂಚಿನ ಪದಕ ಗೆದ್ದು ಕೊಟ್ಟ ಹಾಕಿ ತಂಡ

ಗೋಲ್‌ ಕೀಪರ್ ಪಿ.ಆರ್. ಶ್ರೀಜೇಶ್ ಗೆ ಸ್ಮರಣೀಯ ವಿದಾಯ

Team Udayavani, Aug 8, 2024, 7:25 PM IST

1-aaa

ಪ್ಯಾರಿಸ್ : ಭಾರತ ಪುರುಷರ ಹಾಕಿ ತಂಡ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಹಾಕಿಯಲ್ಲಿ ಭಾರತದ ವೈಭವದ ಕಾಲ ಮುಗಿದೇ ಹೋಯಿತು ಎಂದು ನೊಂದವರಿಗೆ ಸಾಂತ್ವನ ಹೇಳಿದೆ. ಗುರುವಾರ ಸ್ಪೇನ್‌ ವಿರುದ್ಧ 2-1 ಗೋಲುಗಳಿಂದ ಗೆದ್ದ ಭಾರತ ಕಂಚು ಗೆದ್ದಿದೆ. ಹಿಂದಿನ ಟೋಕಿಯೋ ಒಲಿಂಪಿಕ್ಸ್‌ನಲ್ಲೂ ಕಂಚು ಗೆದ್ದಿದ್ದ ಭಾರತ, ಈ ಬಾರಿಯೂ ಗೆಲ್ಲುವುದರೊಂದಿಗೆ ಒಲಿಂಪಿಕ್ಸ್‌ನಲ್ಲಿ ಸತತ 2ನೇ ಕಂಚು ಗೆದ್ದ ಸಾಧನೆ ಮಾಡಿದೆ. ಇದು ಒಲಿಂಪಿಕ್ಸ್‌ ಹಾಕಿಯಲ್ಲಿ ಭಾರತಕ್ಕೆ ಒಲಿದ 13ನೇ ಪದಕವಾಗಿದೆ. ಈ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಲಭಿಸಿದ 4ನೇ ಪದಕವೂ ಹೌದು.

ಆರಂಭಿಕ ಹಿನ್ನಡೆ
ಗುರುವಾರ ಪಂದ್ಯ ಆರಂಭವಾಗುತ್ತಿದ್ದಂತೆ ಎರಡೂ ತಂಡಗಳು ಆಕ್ರಮಣಕಾರಿ ಆಟ ಆರಂಭಿಸಿದವು. ಮೊದಲ ಕ್ವಾರ್ಟರ್‌ನಲ್ಲಿ ಯಾವುದೇ ತಂಡಗಳಿಗೂ ಗೋಲು ಗಳಿಸಲಾಗಲಿಲ್ಲ. 8ನೇ ನಿಮಿಷದಲ್ಲಿ ಮನ್‌ಪ್ರೀತ್‌ ಗಾಯಗೊಂಡಿದ್ದು, ಭಾರತಕ್ಕೆ ಆತಂಕ ಮೂಡಿಸಿತು. ಆದರೆ 9ನೇ ನಿಮಿಷದಲ್ಲಿ ಶ್ರೀಜೇಶ್‌ ಗೋಲು ತಡೆಯವ ಮೂಲಕ ಆತ್ಮವಿಶ್ವಾಸವನ್ನು ಹೆಚ್ಚಿಸಿದರು. 18ನೇ ನಿಮಿಷದಲ್ಲಿ ಪೆನಾಲ್ಟಿ ಸ್ಟ್ರೋಕ್‌ ಅವಕಾಶ ಪಡೆದುಕೊಂಡ ಸ್ಪೇನ್‌, ಅದನ್ನು ಗೋಲಾಗಿ ಪರಿವರ್ತಿಸಿತು. ಇದಾದ ಬಳಿಕ ಪ್ರತಿ 2 ನಿಮಿಷಕ್ಕೆ 2 ಪೆನಾಲ್ಟಿ ಕಾರ್ನರ್‌ ನೀಡುವ ಮೂಲಕ ಭಾರತ ಅಭಿಮಾನಿಗಳ ಆತಂಕ ಹೆಚ್ಚಿಸಿತ್ತು.

ಹರ್ಮನ್‌ಪ್ರೀತ್‌ ಗೋಲು
ಹಿನ್ನಡೆಯಲ್ಲಿದ್ದ ಭಾರತಕ್ಕೆ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಮತ್ತೆ ಆಸರೆಯಾದರು. 30ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್‌ ಅವಕಾಶವನ್ನು ನಾಯಕ ಗೋಲಾಗಿ ಪರಿವರ್ತಿಸಿದರು. ಹೀಗಾಗಿ 2ನೇ ಕ್ವಾರ್ಟರ್‌ ಅಂತ್ಯಕ್ಕೆ ಭಾರತ ಸಮಬಲ ಸಾಧಿಸಿತು. ಇದಾದ ಬಳಿಕ 33ನೇ ನಿಮಿಷದಲ್ಲಿ ಮತ್ತೂಂದು ಪೆನಾಲ್ಟಿ ಕಾರ್ನರ್‌ ಅವಕಾಶ ಪಡೆದುಕೊಂಡ ಭಾರತದ ಪರವಾಗಿ ಹರ್ಮನ್‌ ಗೋಲು ಬಾರಿಸಿ ಮುನ್ನಡೆ ತಂದುಕೊಟ್ಟರು. ಅನಂತರ ಭಾರತ ರಕ್ಷಣಾತ್ಮಕವಾಗಿ ಆಟವಾಡಿ ಕಂಚಿಗೆ ಕೊರಳೊಡ್ಡಿತು.

ಕೊನೆ 1 ನಿಮಿಷದ ಆತಂಕ
ಕೊನೆಯವರೆಗೂ ಮುನ್ನಡೆ ಕಾಯ್ದುಕೊಂಡಿದ್ದ ಭಾರತದ ಆಟಕ್ಕೆ ಮನಸೋತ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಪಂದ್ಯ ಮುಗಿಯಲು 1 ನಿಮಿಷ ಬಾಕಿ ಇರುವಾಗ 2 ಪೆನಾಲ್ಟಿ ಕಾರ್ನರ್‌ಗಳನ್ನು ಬಿಟ್ಟುಕೊಟ್ಟು ಭಾರತ ತಂಡ ಆತಂಕ ಸೃಷ್ಟಿಸಿತ್ತು. ಆದರೆ ಇದನ್ನು ಗೋಲಾಗಿ ಪರಿವರ್ತಿಸಲು ಸ್ಪೇನ್‌ ವಿಫ‌ಲವಾದ ಕಾರಣ ಕಂಚು ಭಾರತದ ಪಾಲಾಯಿತು.

52 ವರ್ಷದ ಬಳಿಕ ಸತತ 2 ಕಂಚು
ಭಾರತ ಹಾಕಿ ತಂಡ 52 ವರ್ಷಗಳ ಬಳಿಕ ಸತತ 2 ಒಲಿಂಪಿಕ್ಸ್‌ಗಳಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದೆ. ಭಾರತ ಈ ಮೊದಲು 1968ರ ಮೆಕ್ಸಿಕೋ ಹಾಗೂ 1972ರ ಮ್ಯೂನಿಚ್‌ ಒಲಿಂಪಿಕ್ಸ್‌ಗಳಲ್ಲಿ ಸತತವಾಗಿ 2 ಕಂಚು ಗೆದ್ದಿತ್ತು. 2021ರ ಟೋಕಿಯೋ ಹಾಗೂ ಈ ಬಾರಿ ಭಾರತ ಸತತವಾಗಿ ಕಂಚು ಗೆದ್ದಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.