Bus Problem; ಡಿಪ್ಲೋಮಾ ಕಾಲೇಜು ವಿದ್ಯಾರ್ಥಿಗಳ ಪರಿಸ್ಥಿತಿ ಕೇಳುವವರು ಯಾರು?

ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಸರಕು ವಾಹನಕ್ಕೆ ಜೋತು ಬಿದ್ದ ವಿದ್ಯಾರ್ಥಿಗಳು; ಕಣ್ಣುಮುಚ್ಚಿ ಕುಳಿತ ಅಧಿಕಾರಿ ವರ್ಗ

Team Udayavani, Aug 8, 2024, 9:16 PM IST

Bus Problem ಡಿಪ್ಲೋಮಾ ಕಾಲೇಜು ವಿದ್ಯಾರ್ಥಿಗಳ ಪರಿಸ್ಥಿತಿ ಕೇಳುವವರು ಯಾರು?

ಕಂಪ್ಲಿ: ಬಸ್ ಸಮಸ್ಯೆ ಹಿನ್ನೆಲೆ ಡಿಪ್ಲೋಮಾ ಕಾಲೇಜು ವಿದ್ಯಾರ್ಥಿಗಳು ಗೂಡ್ಸ್ ವಾಹನಗಳಿಗೆ ಜೋತು ಬಿದ್ದು ಹೋಗುತ್ತಿರುವ ಘಟನೆ ಕಂಪ್ಲಿ ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿ ಗುರುವಾರ ಕಂಡು ಬಂತು.

ಹೌದು..! ಇಲ್ಲಿನ ಡಿಪ್ಲೋಮಾ ಕಾಲೇಜು ವಿದ್ಯಾರ್ಥಿಗಳು ದಿನನಿತ್ಯದ ಬಸ್ ಗಳ ಸಮಸ್ಯೆ ಮಧ್ಯ ವಿದ್ಯಾಭ್ಯಾಸ ಮಾಡುತ್ತಿರುವುದು ವಿಪರ್ಯಾಸವಾಗಿದೆ.

ಕಂಪ್ಲಿ ನಗರದ ಹೊರವಲಯದಲ್ಲಿರುವ ಡಿಪ್ಲೋಮಾಗೆ ಕಂಪ್ಲಿ ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಆದರೆ, ಇಲ್ಲಿನ ಬೈಪಾಸ್ ಮೂಲಕ ಸಾಕಷ್ಟು ಸಾರಿಗೆ ಬಸ್ ಗಳು ಸಂಚರಿಸುತ್ತಿದ್ದರೂ, ನಿಲ್ಲಿಸದೇ ಇರುವ ಪರಿಣಾಮ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಿ ಬರಲು ಹರಸಾಹಸಪಡುವಂತಾಗಿದೆ.

ಕಾಲೇಜು ಬಳಿಯಲ್ಲಿ ಯಾವುದೇ ಸಾರಿಗೆ ಬಸ್ ಗಳು ನಿಲುಗಡೆಗೆ ಅವಕಾಶ ಮಾಡಿಕೊಡದ ಹಿನ್ನೆಲೆ ಸಮಸ್ಯೆ ತಂದೊಡ್ಡಿದೆ. ಕೆಲ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಬೇಕಾದರೆ ವಾಲ್ಮೀಕಿ ವೃತ್ತದಲ್ಲಿ ಬರುವ ದ್ವಿಚಕ್ರ ವಾಹನಗಳಿಗೆ ಕೈಮಾಡಿ, ನಿಲ್ಲಿಸುವ ವಾಹನದ ಮೂಲಕ ಕಾಲೇಜಿಗೆ ತೆರಳಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲ ವಿದ್ಯಾರ್ಥಿನಿಯರು ಕಾಲ್ನಡಿಗೆ ಮೂಲಕದ ದೂರದ ಕಾಲೇಜಿಗೆ ಹೋಗಬೇಕಾದ ಪರಿಸ್ಥಿತಿ ತಂದೊಡ್ಡಿದೆ. ಕಾಲೇಜು ಬಿಟ್ಟ ನಂತರ ವಿದ್ಯಾರ್ಥಿಗಳು ಮನೆಗಳಿಗೆ ಸೇರಬೇಕಾದರೆ ಅವರಿವರಿಂದ ಡ್ರಾಪ್ ಕೇಳಿ ಹೋಗುತ್ತಿರುವುದು ಸಾಮಾನ್ಯವಾಗಿದೆ. ಸಿಟಿ ಬಸ್ ಗಳ ವ್ಯವಸ್ಥೆ ಹಾಗೂ ಸಾರಿಗೆ ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರೂ, ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಕಣ್ಣಿಗೆ ತಾಗದಂತಾಗಿದೆ. ಮಕ್ಕಳಿಗೆ ಆಶ್ವಾಸನೆ ನೀಡುವ ಪ್ರವೃತ್ತಿಯಾಗಿದೆ ಹೊರತು ಸಮಸ್ಯೆಗೆ ಮುಕ್ತಿ ಇಲ್ಲದಂತಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಪಾಠ, ಪ್ರವಚನದಿಂದ ವಂಚಿತರಾಗಬೇಕಾದ ಅನಿವಾರ್ಯತೆ ಉಂಟಾಗಿದೆ.

ಗುರುವಾರದಂದು ಕಾಲೇಜು ಮುಗಿಸಿಕೊಂಡು ಕಂಪ್ಲಿ ನಗರಕ್ಕೆ ಬರಬೇಕಾದರೆ, ಬಸ್ ಗಳಿಲ್ಲದೇ ಗೂಡ್ಸ್ ವಾಹನದ ಹಿಂಬದಿಯಲ್ಲಿ ಐದು ವಿದ್ಯಾರ್ಥಿಗಳು ಜೋತು ಬಿದ್ದು ತೆರಳುತ್ತಿರುವುದು ಕಂಡು ಬಂತು. ಮಕ್ಕಳು ಶಿಕ್ಷಣದ ಮೂಲಕ ಮನೆಗೆ ಬರಲೆಂದು ಪೋಷಕರ ಆಸೆ. ಆದರೆ, ಇಲ್ಲಿನ ಮಕ್ಕಳ ಪರಿಸ್ಥಿತಿಯನ್ನು ಪೋಷಕರು ನೋಡಿದರೆ ಕಾಲೇಜಿಗೆ ಕಳುಹಿಸುವುದು ಬೇಡ ಅನ್ನಿಸುತ್ತದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸಿ, ಸಿಟಿ ಬಸ್ ವ್ಯವಸ್ಥೆ ಅಥವಾ ಕಡ್ಡಾಯವಾಗಿ ಸಾರಿಗೆ ಬಸ್ ಗಳ ನಿಲುಗಡೆಗೆ ಸೂಕ್ತಕ್ರಮ ಕೈಗೊಳ್ಳುವ ಮೂಲಕ ಅನುಕೂಲ ಮಾಡಿಕೊಡಬೇಕೆಂಬುದಾಗಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.