Mudigere ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು
Team Udayavani, Aug 8, 2024, 10:25 PM IST
ಚಿಕ್ಕಮಗಳೂರು: ಕಬ್ಬಿಣದ ಏಣಿಯನ್ನ ಕೊಂಡೊಯ್ಯುವಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗದ್ಗಲ್ ಗ್ರಾಮದ ಬಳಿ ಗುರುವಾರ(ಆ.08) ನಡೆದಿದೆ.
ಮೃತನನ್ನ 48 ವರ್ಷದ ಪ್ರಸನ್ನ ಸಾಲ್ಡನ್ ಎಂದು ಗುರುತಿಸಲಾಗಿದೆ.
ಮೃತ ಪ್ರಸನ್ನ ಮನೆಯಲ್ಲಿ ಬೇರೆ ಕೆಲಸದ ನಿಮಿತ್ತ ಕಾಫಿ ತೋಟದಿಂದ ಕಬ್ಬಿಣದ ಏಣಿಯನ್ನ ಮನೆಗೆ ತಂದಿದ್ದರು. ಕೆಲಸವಾದ ಬಳಿಕ ಏಣಿಯನ್ನ ಮತ್ತೆ ಕಾಫಿ ತೋಟಕ್ಕೆ ಇಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಕಬ್ಬಿಣದ ಏಣಿಯಾದ ಕಾರಣ ವಿದ್ಯುತ್ ಸ್ಪರ್ಶಿಸಿದ ಕೂಡಲೇ ಸಾಲ್ಡರ್ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ.ಮಲೆನಾಡಿನಲ್ಲಿ ಭಾರೀ ಗಾಳಿ ಮಳೆಗೆ ವಿದ್ಯುತ್ ತಂತಿಗಳು ಕೂಡ ಜಗ್ಗಿದ್ದವು. ಅತ್ಯಂತ ಕೆಳಭಾಗದಲ್ಲಿ ಇದ್ದ ವಿದ್ಯುತ್ ತಂತಿಗಳಿಂದ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.