Bridge Colapse: ನದಿ ಭಾಗದಿಂದ ಕಾಳಿ ಸೇತುವೆ ಅವಶೇಷ ತೆರವಿಗೆ ಸೂಚನೆ
ನದಿಗೆ ಬಿದ್ದ ಸ್ಲಾಬ್ ತೆಗೆಯಲು ಕ್ರಮ ಕೈಗೊಳ್ಳಬೇಕು
Team Udayavani, Aug 9, 2024, 6:26 AM IST
ಕಾರವಾರ: ಕಾಳಿ ಸೇತುವೆಯ ಅವಶೇಷಗಳನ್ನು ನದಿಯ ಭಾಗದಿಂದ ತೆರವುಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ನಿರ್ದೇಶಕ ವಿಲಾಸ್ ಬ್ರಹ್ಮಂಕರ್ ಸೂಚಿಸಿದರು.
2 ದಿನಗಳ ಹಿಂದೆ ಕುಸಿದ ಕಾಳಿ ನದಿಯ ಹಳೆಯ ಸೇತುವೆಯನ್ನು ಗುರುವಾರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹಾಗೂ ಐಆರ್ಬಿ ಕಂಪೆನಿ ಅಧಿಕಾರಿಗಳ ಜತೆ ವೀಕ್ಷಿಸಿ ಅವರು ಮಾತನಾಡಿದರು. ಬಾಕಿ ಇರುವ ಮುಕ್ಕಾಲು ಭಾಗ ಯಾವಾಗ ಬೇಕಾದರೂ ಕುಸಿಯಬಹುದು. ಹಾಗಾಗಿ ಸೇತುವೆಯ ಉಳಿದ ಅವಶೇಷ ಹಾಗೂ ನದಿಗೆ ಬಿದ್ದ ಸ್ಲಾಬ್ ತೆಗೆಯಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹೊಸ ಸೇತುವೆಯಲ್ಲಿ ಸಂಚಾರ ಆರಂಭ
ಈ ನಡುವೆ ಮುರಿದು ಬಿದ್ದ ಸೇತುವೆ ಪಕ್ಕದಲ್ಲೇ ನಿರ್ಮಾಣವಾಗಿರುವ ಹೊಸ ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸೂಚನೆ ಮೇರೆಗೆ ಐಆರ್ಬಿ ಕಂಪನಿ ಅಧಿಕಾರಿ ಹರಿಕೃಷ್ಣ ಜಿಲ್ಲಾಧಿಕಾರಿಗೆ ಪತ್ರ ಬರೆದು, ಭಾರೀ ವಾಹನಗಳನ್ನು ಪೊಲೀಸರ ಕಣ್ಗಾವಲಿನಲ್ಲಿ ಬಿಡಲು ಅಡ್ಡಿಯಿಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.