Manjeshwar ಪಂಚಾಯತ್ ಸಭೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಕುಸಿದು ಬಿದ್ದ ಮಹಿಳೆ
Team Udayavani, Aug 9, 2024, 12:08 AM IST
ಮಂಜೇಶ್ವರ: ಮಂಜೇಶ್ವರ ಪಂಚಾಯತ್ ಆಡಳಿತ ಸಮಿತಿಯ ಮುಸ್ಲಿಂ ಲೀಗ್ ಸದಸ್ಯೆ ಆಯಿಷತ್ ರುಬೀನ ಪಂಚಾಯತ್ ಆಡಳಿತ ಸಮಿತಿ ಸಭೆ ನಡೆಯುತ್ತಿದ್ದಂತೆ ನಿದ್ದೆ ಮಾತ್ರೆ ಸೇವಿಸಿ ಕುಸಿದು ಬಿದ್ದ ಘಟನೆ ನಡೆದಿದ್ದು, ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತನ್ನ ವಾರ್ಡ್ನಲ್ಲಿ ತೋರುತ್ತಿರುವ ಅವಗಣನೆಯನ್ನು ಪ್ರತಿಭಟಿಸಿ ನಿದ್ದೆ ಮಾತ್ರೆ ಸೇವಿಸಿದ್ದರೆನ್ನಲಾಗಿದೆ. ಪಂಚಾಯತ್ ಉಪಾಧ್ಯಕ್ಷ ರಫೀಕ್, ಸ್ಥಾಯೀ ಸಮಿತಿ ಅಧ್ಯಕ್ಷ ಯಾದವ್ ಬಡಾಜೆ, ಸಿಪಿಐ ಸದಸ್ಯೆ ರೇಖಾ ಮೊದಲಾದವರು ಸೇರಿ ಅವರನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರು. ಆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಲಾಯಿತು.
25 ವರ್ಷದಷ್ಟು ಹಳೆಯದಾದ 2 ಅಂಗನವಾಡಿಗಳು ಶೋಚನೀಯ ಸ್ಥಿತಿಯಲ್ಲಿದ್ದ ಹಿನ್ನೆಲೆಯಲ್ಲಿ ಅವುಗಳನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಬೇಕೆಂದು ಸರಕಾರ ನಿರ್ದೇಶ ನೀಡಿತ್ತು. ಆದರೆ ಕಟ್ಟಡ ನಿರ್ಮಿಸಲು ಪಂಚಾಯತ್ ಯತ್ನಿಸಿಲ್ಲವೆನ್ನಲಾಗಿದೆ.
ಬದಲಾಗಿ ಬಾಡಿಗೆ ರಹಿತವಾಗಿ ಲಭಿಸಿದ ಎರಡು ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಈಗ ಆ ಕಟ್ಟಡವು ಶೋಚನೀಯಾವಸ್ಥೆಯಲ್ಲಿದೆ. ಆಡಳಿತ ಸಮಿತಿ ಸಭೆ ಆರಂಭಗೊಂಡ ಕೂಡಲೇ ತನ್ನ ವಾರ್ಡ್ನ ಅಂಗನವಾಡಿಗಳ ವಿಷಯ ಏನಾಯಿತು ಎಂದು ರುಬೀನಾ ಪ್ರಶ್ನಿಸಿದರು. ಮುಂದಿನ ಸಭೆಯಲ್ಲಿ ಈ ವಿಷಯದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅಧಿಕಾರಿಗಳು ಉತ್ತರಿಸಿದರು. ಈ ವಿಷಯವನ್ನು ಸ್ಪಷ್ಟಪಡಿಸಿದ ಬಳಿಕ ಸಭೆ ನಡೆಸಿದರೆ ಸಾಕು ಎಂದು ತನ್ನನ್ನು ಕೂಡಾ ಜನರೇ ಆಯ್ಕೆ ಮಾಡಿದ್ದಾರೆಂದು ರುಬೀನಾ ಹೇಳಿದರು.
ಸರಕಾರ ನಿರ್ದೇಶಿಸಿದ ಅಂಗನವಾಡಿ ಕಟ್ಟಡಗಳನ್ನು ಕೂಡ ನಿರ್ಮಿಸದ ಪಚಾಯತ್ ಆಡಳಿತ ಸಮಿತಿಯೊಂದಿಗೆ ಹೊಂದಿಕೊಂಡು ಸಾಗಲು ಸಾಧ್ಯವಿಲ್ಲವೆಂದು ಸಭೆಯಲ್ಲಿ ಅವರು ತಿಳಿಸಿದರು. ಬಳಿಕ ತನ್ನಲ್ಲಿದ್ದ ನಿದ್ದೆ ಮಾತ್ರೆಗಳನ್ನು ನುಂಗಿದಾಗ ಪ್ರಜ್ಞಾಹೀನರಾಗಿ ಬಿದ್ದ ರುಬೀನಾರನ್ನು ಆಡಳಿತ ಸಮಿತಿ ಸದಸ್ಯರು ಮಂಗಲ್ಪಾಡಿ ಆಸ್ಪತ್ರೆಗೆ ಕರೆದೊಯ್ದು, ಆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಯಿತು. ರುಬೀನಾ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.