Award: ಉಮಾಶ್ರೀ ಸಹಿತ 93 ಮಂದಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ
Team Udayavani, Aug 9, 2024, 1:01 AM IST
ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು 2022-23, 2023-24 ಮತ್ತು 2024-25ನೇ ಸಾಲಿನ ಗೌರವ, ವಾರ್ಷಿಕ, ವಿವಿಧ ದತ್ತಿ, ಯುವ ಪ್ರಶಸ್ತಿ, ಹೊರನಾಡ ಕಲಾವಿದ ಪ್ರಶಸ್ತಿಗಳನ್ನು ಪ್ರಕಟಸಿದ್ದು ಒಟ್ಟು 93 ರಂಗ ಸಾಧಕರನ್ನು ಆಯ್ಕೆ ಮಾಡಿದೆ.
ಇದರಲ್ಲಿ ಮೂವರಿಗೆ ಜೀವಮಾನ ಸಾಧನೆ, 75 ವಾರ್ಷಿಕ ಮತ್ತು 15 ದತ್ತಿ ಪ್ರಶಸ್ತಿಗಳು ಸೇರಿವೆ. ವಿಶೇಷವೆಂದರೆ ಅಕಾಡೆಮಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಬೆಂಗಳೂರಿನ ಲೈಂಗಿಕ ಅಲ್ಪಸಂಖ್ಯಾಕ ಕಲಾವಿದೆ ಚಾಂದಿನಿ ಅವರನ್ನು ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಗುರುತಿಸಲಾಗಿದೆ. ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
2022-23ನೇ ಸಾಲಿನ ಗೌರವ ಪ್ರಶಸ್ತಿಗೆ ಹಿರಿಯ ರಂಗಭೂಮಿ ಕಲಾವಿದೆ ಮತ್ತು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, 2023-24ನೇ ಸಾಲಿನ ಗೌರವ ಪ್ರಶಸ್ತಿಗೆ ನಾಟಕಕಾರ ಪ್ರೊ| ಎಚ್.ಎಸ್. ಶಿವಪ್ರಕಾಶ್, 2024-25ನೇ ಸಾಲಿನ ಗೌರವ ಪ್ರಶಸ್ತಿಗೆ ರಂಗ ಸಂಘಟಕ ಕೋಟಿಗಾನಹಳ್ಳಿ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ 50 ಸಾವಿರ ರೂ. ನಗದು ಮತ್ತು ಸನ್ಮಾನ ಒಳಗೊಂಡಿದೆ.
2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ರಂಗಭೂಮಿ ಕಲಾವಿದ ಅಚ್ಯುತ ಕುಮಾರ್, 2023-24ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ರಂಗಕರ್ಮಿ ಬಿ. ಸುರೇಶ್, 2024-25ನೇ ಸಾಲಿನ ಪ್ರಶಸ್ತಿಗೆ ಪ್ರಕಾಶ್ ರೈ, ರಮೇಶ್ ಪಂಡಿತ್, ಡಾ| ಲಕ್ಷಿ$¾àಪತಿ ಕೋಲಾರ ಸೇರಿದಂತೆ ಹಲವು ಕಲಾವಿದರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು 25 ಸಾವಿರ ರೂ. ನಗದು ಮತ್ತು ಪುರಸ್ಕಾರ ಒಳಗೊಂಡಿದೆ. ವಿವಿಧ ದತ್ತಿ ಪ್ರಶಸ್ತಿಗಳು 10 ಸಾವಿರ ರೂ. ನಗದು ಮತ್ತು ಸಮ್ಮಾನವನ್ನು ಒಳಗೊಂಡಿದೆ. ಯುವ ಪ್ರಶಸ್ತಿಗೆ ಡಾ| ಬೇಲೂರು ರಘುನಂದನ್, ರಾಜಗುರು ಹೊಸಕೋಟೆ, ಅಪ್ಪಣ್ಣ ರಾಮದುರ್ಗ, ರಂಗಸ್ವಾಮಿ ಜಿ. ಅವರನ್ನು ಆಯ್ಕೆ ಮಾಡಲಾಗಿದೆ. ಹೊರನಾಡ ಕಲಾವಿದರ ಪ್ರಶಸ್ತಿಗೆ ಮುಂಬಯಿಯ ರಂಗ ನಿರ್ದೇಶಕಿ ಕನ್ನಡತಿ ನಂದಿತಾ ಯಾದವ್, ಪುದುಚೇರಿ ವಿಶ್ವವಿದ್ಯಾನಿಲಯದ ರಂಗತಜ್ಞೆ ಪ್ರಾಧ್ಯಾಪಕಿ ಡಾ| ಪವಿತ್ರಾ ಅವರನ್ನು ಆಯ್ಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪತ್ನಿ ಜತೆ ಅನೈತಿಕ ಸಂಬಂಧ:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.