BJP-JDSದೋಸ್ತಿ ವಿರುದ್ಧ ತನಿಖಾಸ್ತ್ರ?ಇಂದಿನ ಜನಾಂದೋಲನದಲ್ಲಿ ಸಿದ್ದರಾಮಯ್ಯ ಘೋಷಣೆ ನಿರೀಕ್ಷೆ
ಬಿಜೆಪಿ-ಜೆಡಿಎಸ್ ವಿರುದ್ಧ ತನಿಖೆ ಬಿರುಸುಗೊಳಿಸಲು ಸೂಚನೆ?
Team Udayavani, Aug 9, 2024, 6:25 AM IST
ಬೆಂಗಳೂರು: ಬಿಜೆಪಿ-ಜೆಡಿಎಸ್ ಪಾದ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಆಯೋಜಿಸಿರುವ ಜನಾಂದೋಲನ ಸಭೆಯ ಸಮಾವೇಶ ಮೈಸೂರಿ ನಲ್ಲಿ ಶುಕ್ರವಾರ ನಡೆಯಲಿದೆ. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈತ್ರಿ ಪಕ್ಷಗಳ ವಿರುದ್ಧ ಪ್ರಬಲ ರಾಜಕೀಯ ಅಸ್ತ್ರ ಪ್ರಯೋಗಿಸಲು ನಿರ್ಧರಿಸಿದ್ದಾರೆ. ಬಿಜೆಪಿ-ಜೆಡಿಎಸ್ ಕಾಲದಲ್ಲಿ ನಡೆದ 22 ಪ್ರಮುಖ ಹಗರಣಗಳ ಬಗ್ಗೆ ಪ್ರಸ್ತಾವಿಸಿ, ಅವುಗಳ ತನಿಖೆಯನ್ನು ಚುರುಕುಗೊಳಿಸುವ ನಿರ್ಧಾರವನ್ನು ಸಮಾವೇಶದ ವೇದಿಕೆಯಿಂದ ಘೋಷಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಮೂಲಗಳ ಪ್ರಕಾರ ಈ ಸಮಾ ವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಒಂದು ಲಕ್ಷಕ್ಕೂ ಮೇಲ್ಪಟ್ಟು ಜನರು ಸೇರಲಿದ್ದಾರೆ. ಎಲ್ಲ ವರ್ಗಗಳ ನಾಯಕರನ್ನು ಈ ವೇದಿಕೆಯಲ್ಲಿ ಒಟ್ಟು ಸೇರಿಸುವ ಜತೆಗೆ “ಅಹಿಂದ’ ನಾಣ್ಯವನ್ನು ಗಟ್ಟಿಯಾಗಿ ಪ್ರಯೋಗಿಸುವ ಸಾಧ್ಯತೆ ಇದೆ. ಹಿಂದೆ ಹಿಂದುಳಿದ ವರ್ಗಕ್ಕೆ ಸೇರಿದ ದೇವರಾಜ್ ಅರಸು ಅವರನ್ನು ಷಡ್ಯಂತ್ರದಿಂದ ಕೆಳಗಿಳಿಸಿದ ರೀತಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂಬು ದನ್ನು ವ್ಯವಸ್ಥಿತವಾಗಿ ಪ್ರತಿಪಾದಿಸಲು ನಿರ್ಧ ರಿಸಲಾಗಿದ್ದು, ಕಾಂಗ್ರೆಸ್ನ ಅಹಿಂದ ನಾಯಕ ರೆಲ್ಲರಿಗೂ ಸಮಾವೇಶದಲ್ಲಿ ಕಡ್ಡಾಯವಾಗಿ ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ.
ಎರಡು ಪುಸ್ತಕ ಅನಾವರಣ
ಸಮಾವೇಶದಲ್ಲಿ ಎರಡು ಮಹತ್ವದ ಪುಸ್ತಕ ಬಿಡುಗಡೆಗೊಳಿಸಲಾಗುತ್ತದೆ. ಬಿಜೆಪಿ- ಜೆಡಿಎಸ್ ಅಧಿಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಎಲ್ಲ ಹಗರಣಗಳು ಮತ್ತು ಅದರಲ್ಲಿ ಭಾಗಿಯಾಗಿದ್ದಾರೆ ಎನ್ನಲಾದನಾಯಕರ ಹೆಸರಿರುವ ಪುಸ್ತಕ ಬಿಡುಗಡೆ ಮಾಡಲಾಗುತ್ತದೆ. ಇದೇ ಸಂದರ್ಭ ಸಿಎಂ ಈ ಹಗರಣಗಳ ತನಿಖೆ ತೀವ್ರಗೊಳಿಸುವ ಬಗ್ಗೆ ಪ್ರಸ್ತಾವಿಸಲಿದ್ದು, ಕೆಲವು ಪ್ರಕರಣಗಳ ಸಂಬಂಧ ಬಿಜೆಪಿ ನಾಯಕರಿಗೆ ಬಂಧನ ಭೀತಿ ಸೃಷ್ಟಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಇದಕ್ಕೆ ವರಿಷ್ಠರಿಂದಲೂ ಸಹಮತ ಸಿಕ್ಕಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಮೈಸೂರು ಸಮಾವೇಶದ ಬಳಿಕ ರಾಜ್ಯದಲ್ಲಿ ಭೀಕರ ರಾಜಕೀಯ ಕದನ ನಡೆಯುವುದು ನಿಶ್ಚಿತ ಎನ್ನಲಾಗುತ್ತಿದೆ.
ಮುಡಾ ಸ್ಪಷ್ಟನೆ
ಇನ್ನೊಂದು ಪುಸ್ತಕ ಮುಡಾ ಹಗರಣಕ್ಕೆ ಸಂಬಂಧಪಟ್ಟಿದೆ. “ಸತ್ಯಶೋಧಿತ’ ಎಂಬ ಹೆಸರಿನ ಈ ಪುಸ್ತಕದಲ್ಲಿ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷಗಳು ಇದುವರೆಗೆ ಮಾಡಿರುವ ಆರೋಪಗಳಿಗೆ ಪ್ರತ್ಯುತ್ತರ ನೀಡಲಾಗುತ್ತದೆ. ವಿಪಕ್ಷ ಮಾಡಿರುವ ಸುಳ್ಳು ಆರೋಪ ಹಾಗೂ ಅದಕ್ಕೆ ಸಂಬಂಧಪಟ್ಟ ಸ್ಪಷ್ಟನೆ ಇದರಲ್ಲಿ ಇರಲಿದೆ. ಹೀಗಾಗಿ ಒಂದೇ ವೇದಿಕೆಯ ಮೂಲಕ ಸಿದ್ದರಾಮಯ್ಯ ತಮ್ಮ ವಿರುದ್ಧ ವ್ಯಕ್ತವಾದ ಆರೋಪಕ್ಕೆ ಸ್ಪಷ್ಟನೆ ನೀಡುವ ಜತೆಗೆ ರಾಜಕೀಯ ಪ್ರತ್ಯಸ್ತ್ರ ಪ್ರಯೋಗಕ್ಕೂ ನಿರ್ಧರಿಸಿದ್ದಾರೆ.
ಸಚಿವ ಸಂಪುಟದ ಬಲ
ಈ ಸಮಾವೇಶದಲ್ಲಿ ಸಚಿವ ಸಂಪುಟದ ಎಲ್ಲ ಸದಸ್ಯರು ಭಾಗವಹಿಸಲಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಪ್ರದರ್ಶನ ಮಾಡಲಿದ್ದಾರೆ. ಬಿಜೆಪಿಯ ಪಾದಯಾತ್ರೆ ಮೈಸೂರು ಪ್ರವೇಶಿಸುವುದಕ್ಕೆ ಮುನ್ನವೇ ಕಾಂಗ್ರೆಸ್ ರಣಕಹಳೆ ಮೊಳಗಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.