BSY ವಿರುದ್ಧ ಭ್ರಷ್ಟಾಚಾರ ಪ್ರಕರಣ: ತನಿಖೆ ಪ್ರಗತಿ ವಿವರ ಸಲ್ಲಿಸಲು ಕೋರ್ಟ್ ಸೂಚನೆ
Team Udayavani, Aug 9, 2024, 11:07 AM IST
ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಮತ್ತಿತರರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ತನಿಖಾಧಿಕಾರಿ ಹಾಜರಾಗಿ ಶೋಕಾಸ್ ನೋಟಿಸ್ಗೆ ವಿವರಣೆ ಸಲ್ಲಿಸಿದ್ದಾರೆ.
ತನಿಖಾ ಪ್ರಗತಿ ವಿವರವನ್ನು ಸಲ್ಲಿಸದ್ದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿ ಸಿದೆ. ಪ್ರತಿ ಬಾರಿಯೂ ಕೋರ್ಟ್ ವಿಚಾರಣೆ ವೇಳೆ ಶೆಲ್ ಕಂಪನಿಗಳ ವಿರುದ್ಧ ತನಿಖೆ ನಡೆಸಿರುವುದಾಗಿ ಹೇಳಿ 2 ವರ್ಷಗಳಾದರೂ ಪೊಲೀಸರು ತನಿಖೆ ಪೂರ್ಣಗೊಳಿಸದ ಹಿನ್ನೆಲೆ ತನಿಖಾಧಿಕಾರಿ ಬಗ್ಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಏನಿದು ಪ್ರಕರಣ? : ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಂತರ ರೂ. ನಗದು ಮತ್ತು ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಇದಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂ ರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು. ಯಡಿಯೂರಪ್ಪ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ಪೊಲೀಸರಿಗೆ 2022ರಲ್ಲಿ ಆದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.