Chittapur: ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಎರಡು ಅಂಗಡಿಗಳು ಭಸ್ಮ
Team Udayavani, Aug 9, 2024, 12:36 PM IST
ಚಿತ್ತಾಪುರ: ಪಟ್ಟಣದ ಕಲಬುರಗಿ ರಸ್ತೆಯಲ್ಲಿರುವ ಜೆಸ್ಕಾಂ ಇಲಾಖೆಯ ಟಿಸಿ ರಿಪೇರಿ ಕೇಂದ್ರಕ್ಕೆ ಹಾಗೂ ಫಾರಂ ಬೈಟ್ ಅಗ್ರಿಕಲ್ಟರ್ ಮೆಶೀನರಿ ದಾಸ್ತಾನು ಗೋದಮಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿ 2 ಅಂಗಡಿಗಳ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ಆ.9ರ ಶುಕ್ರವಾರ ನಡೆದಿದೆ.
ನವರಂಗ ಏಜೆನ್ಸಿ ಅವರು ವಿದ್ಯುತ್ ಸಂಪರ್ಕಕ್ಕೆ ಅಳವಡಿಸುವ ಟಿಸಿ ರಿಪೇರಿ ಸೆಂಟರ್ನಲ್ಲಿ ಸುಮಾರು 45 ಲಕ್ಷ ರೂ. ಮೌಲ್ಯದ ಸಾಮಗ್ರಿಗಳಾದ ಟಿಸಿ, ರಿಪೇರಿ ಕಿಟ್, ಆಯಿಲ್ ಸೇರಿದಂತೆ ಎಲ್ಲ ಸಾಮಗ್ರಿಗಳು ಸುಟ್ಟು ಕರಕಲಾಗಿವೆ ಎಂದು ಟ್ರಾನ್ಸ್ ಫಾರಂ ಮಾಲಕರು ತಿಳಿಸಿದ್ದಾರೆ.
ಪಕ್ಕದಲ್ಲಿರುವ ಫಾರಂ ಬ್ರೈಟ್ ಅಗ್ರಿಕಲ್ಟರ್ ಮಶೀನರಿ ದಾಸ್ತಾನು ಗೋದಾಮಿನಲ್ಲಿ ಚಿಕ್ಕ ಟ್ಯಾಕ್ಟರ್ಗಳು, ಬೆಳೆ ಕಟಿಂಗ್ ಮಷಿನ್ಗಳು, ಸ್ಪೇರ್ ಪಾರ್ಟ್ ಗಳು ಸೇರಿದಂತೆ ಸುಮಾರು 57 ಲಕ್ಷ ರೂ. ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ ಎಂದು ಮಾಲೀಕ ಮಹ್ಮದ್ ಆರಿಫ್ ತಿಳಿಸಿದ್ದಾರೆ.
ಬೆಂಕಿ ತಗಲಿರುವ ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ನವರಂಗ ಏಜೆನ್ಸಿ ಮಾಲೀಕ ಅರುಣ ಕುಮಾರ ರೆಡ್ಡಿ ಹಾಗೂ ಮಹ್ಮದ್ ಆಸೀಫ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ಚಿತ್ತಾಪುರ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ ತಿಗಡಿ, ಕೈಂ ಪಿಎಸ್ಐ ಚಂದ್ರಮಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.