Mangaluru: ಬೀದಿವ್ಯಾಪಾರದಂತೆ ವಾಹನ ತೆರವು ಯಾಕಿಲ್ಲ?

ರಸ್ತೆ, ಫುಟ್‌ಪಾತ್‌ಗಳಲ್ಲಿ ಪಾರ್ಕಿಂಗ್‌; ಪೊಲೀಸರ ʼಟೈಗರ್‌' ಮೌನ !

Team Udayavani, Aug 9, 2024, 2:50 PM IST

Screenshot (164)

ಸ್ಟೇಟ್‌ಬ್ಯಾಂಕ್‌: ನಗರದ ಹಲವೆಡೆ ಟೈಗರ್‌ ಕಾರ್ಯಾಚರಣೆ ಮೂಲಕ ಬೀದಿಬದಿ ವ್ಯಾಪಾರಗಳನ್ನು ತೆರವುಗೊಳಿ ಸಲಾಗಿದೆ. ವಾಹನಗಳು, ಪಾದಚಾರಿಗಳ ಸಂಚಾರ ಸುಗಮಗೊಳಿಸುವುದು ಕೂಡ ಈ ಕಾರ್ಯಾಚರಣೆಯ ಉದ್ದೇಶದಲ್ಲಿ ಸೇರಿದೆ. ಆದರೆ ಅನಧಿಕೃತ ಬೀದಿಬದಿ ವ್ಯಾಪಾರ ತೆರೆವುಗೊಳಿಸಿರುವಂತೆ ರಸ್ತೆಗ ಳಲ್ಲೇ ಪಾರ್ಕಿಂಗ್‌ ಮಾಡಿರುವ ವಾಹನಗಳ ವಿರುದ್ಧ ಕ್ರಮ ಯಾಕಿಲ್ಲ ಎಂಬ ಪ್ರಶ್ನೆ ಈಗ ಬಲವಾಗಿ ಕೇಳಿಬರುತ್ತಿದೆ.

ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದ ಎದುರಿನ ರಸ್ತೆ ಸಹಿತ ನಗರದ ಅನೇಕ ಮುಖ್ಯರಸ್ತೆಗ ಳಲ್ಲಿ ವಾಹನಗಳನ್ನು ಬೇಕಾಬಿಟ್ಟಿಯಾಗಿ ನಿಲುಗಡೆ ಮಾಡುತ್ತಿರುವುದರಿಂದ ಇತರ ವಾಹನಗಳ ಸಂಚಾರಕ್ಕೆ ತೊಡಕಾಗುತ್ತಿದೆ. ಹೆಚ್ಚಿನ ಕಟ್ಟಡಗಳು ಪಾರ್ಕಿಂಗ್‌ ವ್ಯವಸ್ಥೆ ಮಾಡಿಕೊಂಡಿಲ್ಲ. ಸಾರ್ವಜನಿಕ ರಸ್ತೆಯೇ ಪಾರ್ಕಿಂಗ್‌ ಸ್ಥಳವಾಗಿ ಆಗಿ ಮಾರ್ಪಟ್ಟಿದೆ. ಇತ್ತೀಚೆಗೆ ರಸ್ತೆಗಳ ವಿಸ್ತರಣೆ ನಡೆದಿದ್ದರೂ ಅದರಿಂದ ವಾಹನಗಳ ಸಂಚಾರಕ್ಕೆ ಹೆಚ್ಚು ಪ್ರಯೋಜನವಾಗಿಲ್ಲ. ಇಂತಹ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್‌ ಮಾಡುತ್ತಿರುವುದು ಇದಕ್ಕೆ ಮುಖ್ಯ ಕಾರಣ.

ನೋ ಪಾರ್ಕಿಂಗ್‌ ಫ‌ಲಕವೂ ಇಲ್ಲ

ಕೆಲವೇ ಕಡೆಗಳಲ್ಲಿ ಮಾತ್ರವೇ ನೋ ಪಾರ್ಕಿಂಗ್‌ ಸೂಚನ ಫ‌ಲಕವಿದೆ. ಆದರೆ ಅದೇ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಲಾ ಗುತ್ತದೆ. ಈ ಹಿಂದೊಮ್ಮೆ ನಗರದ ಪಿ.ಎಂ. ರಾವ್‌ ರಸ್ತೆ ಸಹಿತ ಹಲವೆಡೆ ದಿನ ಕ್ಕೊಂದು ಬದಿಯಲ್ಲಿ ವಾಹನ ನಿಲುಗಡೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗಿತ್ತು. ಈಗ ಅದು ಚಾಲ್ತಿಯಲ್ಲಿಲ್ಲ. ನೋ ಪಾರ್ಕಿಂಗ್‌ ಏರಿಯಾದಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಮವೂ ಆಗುತ್ತಿಲ್ಲ. ವಾಹನಗಳು ಫ‌ುಟ್‌ಪಾತ್‌ಗಳ ಮೇಲೆ ನಿಲುಗಡೆಯಾದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ.

ಪೊಲೀಸ್‌ “ಟೈಗರ್‌’ ಮೌನ!

ಪಾಲಿಕೆ ಟೈಗರ್‌ ಕಾರ್ಯಾಚರಣೆ ಹೆಸರಿ ನಲ್ಲಿ ಬೀದಿಬದಿ ವ್ಯಾಪಾರಸ್ಥರನ್ನು ತೆರವು ಮಾಡಿದೆ. ಆದರೆ ಈ ಹಿಂದೆ ರಸ್ತೆಯಲ್ಲಿ, ನೋ ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲುಗಡೆ ಮಾಡುತ್ತಿದ್ದ ವಾಹನಗಳ ತೆರವಿಗೆ ಪೊಲೀಸರು ನಡೆಸುತ್ತಿದ್ದ ಟೈಗರ್‌ ಕಾರ್ಯಾಚರಣೆ ನಿಂತಿದೆ. ಈಗ ನಿಯಮ ಮೀರಿ ನಿಲುಗಡೆಯಾಗುವ ವಾಹನಗಳ ಚಕ್ರಗಳಿಗೆ ಲಾಕ್‌ ಹಾಕಿ ಕೇಸು ದಾಖಲಿಸುವ, ಅಂತಹ ವಾಹನಗಳನ್ನು ಠಾಣೆಗೆ ಎಳೆದೊಯ್ಯುವ (ಟೋಯಿಂಗ್‌) ಕಾರ್ಯಾಚರಣೆ ಯಾಕೆ ನಡೆಸುತ್ತಿಲ್ಲ ಎಂಬುದು ಕೆಲವು ಬೀದಿಬದಿ ವ್ಯಾಪಾರಸ್ಥರು, ಪಾದಚಾರಿಗಳ ಪ್ರಶ್ನೆ.

ಆಟೋರಿಕ್ಷಾ ನಿಲುಗಡೆ

ಅನಧಿಕೃತ ಆಟೋರಿಕ್ಷಾ ಪಾರ್ಕಿಂಗ್‌ ಕೂಡ ಹೆಚ್ಚಾಗುತ್ತಿದೆ. ರಸ್ತೆ ಬದಿಯಲ್ಲಿ ಸ್ವಲ್ಪವೇ ಜಾಗ ಸಿಕ್ಕಿದರೂ ಅಲ್ಲಿ ಆಟೋ ರಿಕ್ಷಾಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಈಗ ತೆರವುಗೊಳಿಸುವ ಬೀದಿ ಬದಿ ವ್ಯಾಪಾರದ ಸ್ಥಳದಲ್ಲಿ ಕೆಲವೆಡೆ ಆಟೋ ರಿಕ್ಷಾಗಳು ನಿಲುಗಡೆಯಾಗುತ್ತಿವೆ. ಇದ ರಿಂದ ತೊಂದರೆಯಾಗುತ್ತಿದೆ. ಇದನ್ನು ಅಧಿಕಾರಿಗಳು ಯಾಕೆ ಗಮನಿಸುತ್ತಿಲ್ಲ ಎಂಬುದು ಕೂಡ ಸಾರ್ವಜನಿಕರ ದೂರು.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.