Manish Sisodia 17 ತಿಂಗಳ ನಂತರ ತಿಹಾರ್ ಜೈಲಿನಿಂದ ಹೊರಬಂದ ಆಪ್ ನಾಯಕ
ಇಂದು ಸತ್ಯ ಗೆದ್ದಿದೆ. ಕೊನೆಯಲ್ಲಿ, ಸತ್ಯವೇ ಗೆಲ್ಲುತ್ತದೆ ಎಂದ ಆಪ್
Team Udayavani, Aug 9, 2024, 7:51 PM IST
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರು 17 ತಿಂಗಳ ಜೈಲು ವಾಸದ ನಂತರ ಶುಕ್ರವಾರ(ಆಗಸ್ಟ್ 9) ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಬಳಿಕ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬಿಡುಗಡೆಯಾಗಿ ಹೊರ ಬಂದಿದ್ದಾರೆ.
ಸಿಸೋಡಿಯಾ ಅವರನ್ನು 2023 ರ ಫೆಬ್ರವರಿ 26ರಂದು ಸಿಬಿಐ, ಎರಡು ವಾರಗಳ ನಂತರ ಇಡಿ ಬಂಧಿಸಿತ್ತು. ಈಗ ಎರಡೂ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ.
ಜೈಲಿನಿಂದ ಹೊರಬಂದ ಸಿಸೋಡಿಯಾ ಅವರನ್ನು ಸ್ವಾಗತಿಸಲು ಆಮ್ ಆದ್ಮಿ ಪಕ್ಷದ ಬೆಂಬಲಿಗರು ಧ್ವಜಗಳನ್ನು ಹಿಡಿದು ಜೋರಾಗಿ ಹರ್ಷೋದ್ಗಾರ ಮಾಡಿದರು. “ನಾವು ಈ ಕಾನೂನು ಹೋರಾಟವನ್ನು ಸಂವಿಧಾನದ ಮೂಲಕ ತಾರ್ಕಿಕ ಅಂತ್ಯಕ್ಕೆ ತಂದಿದ್ದೇವೆ. ನನ್ನೊಂದಿಗಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅವರು “ಕೇಜ್ರಿವಾಲ್, ಕೇಜ್ರಿವಾಲ್” ಎಂದು ಘೋಷಣೆಯನ್ನು ಸಿಸೋಡಿಯಾ ಕೂಗಿದರು.
“ಇಂದು ಸತ್ಯ ಗೆದ್ದಿದೆ. ಕೊನೆಯಲ್ಲಿ, ಸತ್ಯವೇ ಗೆಲ್ಲುತ್ತದೆ,” ಎಂದು ದೆಹಲಿ ಮುಖ್ಯಮಂತ್ರಿಯ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಟೀಮ್ ಕೇಜ್ರಿವಾಲ್” ಪೋಸ್ಟ್ ಮಾಡಿದೆ. ಕೇಜ್ರಿವಾಲ್ ಸದ್ಯ ಅದೇ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದಾರೆ.
इंक़लाब ज़िंदाबाद🇮🇳
तमाम साज़िशों और षड्यंत्रों को ध्वस्त करके दिल्ली की शिक्षा क्रांति के नायक @msisodia जी आए जेल से बाहर 🙌#ManishKiBailSachKiJeet pic.twitter.com/FANLqVEu6s
— AAP (@AamAadmiParty) August 9, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.