Bengaluru: ಕದ್ದ ನೆಕ್ಲೇಸ್ ಧರಿಸಿ ವಾಟ್ಸ್ಆ್ಯಪ್ ಡಿಪಿಯಲ್ಲಿ ಹಾಕಿ ಸಿಕ್ಕಿ ಬಿದ್ದಳು!
ಎಚ್ಎಎಲ್ನಲ್ಲಿ ಕೆಲಸಕ್ಕಿದ್ದ ಮನೆಯಲ್ಲಿ 80 ಗ್ರಾಂ ನೆಕ್ಲೇಸ್ ಕಳ್ಳತನ ; ಮಾಲೀಕರು ಆಕೆಯ ವಾಟ್ಸ್ಆ್ಯಪ್ ಡಿಪಿ ನೋಡಿದಾಗ ಕೃತ್ಯ ಬೆಳಕಿಗೆ
Team Udayavani, Aug 10, 2024, 11:48 AM IST
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕದ್ದ ಚಿನ್ನದ ನೆಕ್ಲೇಸ್ ಧರಿಸಿ ವಾಟ್ಸ್ಆ್ಯಪ್ ಡಿಪಿಗೆ ಫೋಟೋ ಹಾಕಿದ ಮನೆಕೆಲಸದಾಕೆ ಎಚ್ಎಎಲ್ ಠಾಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, 5 ಲಕ್ಷ ರೂ. ಮೌಲ್ಯದ 80 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ.
ಹೊಸಪೇಟೆ ಮೂಲದ ಮಾರತ್ತಹಳ್ಳಿಯ ರೇಣುಕಾ (38) ಬಂಧಿತೆ.
ಮಾರತ್ತಹಳ್ಳಿಯ ಅಪಾರ್ಟ್ಮೆಂಟ್ನ ಫ್ಲಾಟ್ ವೊಂದರಲ್ಲಿ ರೇಣುಕಾ ಹಲವು ತಿಂಗಳುಗಳಿಂದ ಮನೆಗೆಲಸ ಮಾಡುತ್ತಿದ್ದಳು. 2023ರ ನವೆಂಬರ್ 12ರಂದು ಮನೆ ಮಾಲೀಕರ ಗಮನಕ್ಕೆ ಬಾರದಂತೆ ಕಬೋರ್ಡ್ನಲ್ಲಿ ಇಟ್ಟಿದ್ದ ಚಿನ್ನದ ನೆಕ್ಲೇಸ್ ಅನ್ನು ಕದ್ದಿದ್ದಳು.
ಕಳೆದ ಮಾರ್ಚ್ 29ರಂದು ಮಾಲೀಕರು ನೋಡಿದಾಗ ನೆಕ್ಲೇಸ್ ಇಲ್ಲದಿರುವುದು ಕಂಡು ಆತಂಕಕ್ಕೊಳಗಾಗಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸೇರಿದಂತೆ ನಾಲ್ವರು ಕೆಲಸಗಾರರ ಮೇಲೆ ಅನುಮಾನ ವ್ಯಕ್ತಪಡಿಸಿ ಮಾಲೀಕರು ಎಚ್ಎಎಲ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಾಲ್ವರು ಕೆಲಸಗಾರರನ್ನು ಠಾಣೆಗೆ ಕರೆಸಿಕೊಡು ವಿಚಾರಣೆ ಮಾಡಿದ್ದರೂ ಕಳವು ಮಾಡಿರುವ ಸುಳಿವು ಸಿಕ್ಕಿರಲಿಲ್ಲ.
ಇದಾದ ಹಲವಾರು ತಿಂಗಳು ಕಳೆದ ನಂತರ ರೇಣುಕಾ ಕದ್ದ ನೆಕ್ಲೇಸ್ ಧರಿಸಿಕೊಂಡು ಫೋಟೋ ತೆಗೆಸಿ ಅದನ್ನು ತನ್ನ ವಾಟ್ಸಾಪ್ ಡಿಪಿಗೆ ಹಾಕಿಕೊಂಡಿದ್ದಳು. ಇದನ್ನು ಗಮನಿಸಿದ ಮನೆ ಮಾಲೀಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ರೇಣುಕಾಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Tungabhadra ಡ್ಯಾಂನ ಎಲ್ಲ 33 ಗೇಟ್ ಬದಲಿಸಲು ತಜ್ಞರ ಸಲಹೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.